ಸಾಕುನಾಯಿಗಳನ್ನು ಕೊಂದು ಜನರಲ್ಲಿ ಭಯ ಹುಟ್ಟಿಸಿದ ಚಿರತೆ ಸಾವು!
ಚಾಮರಾಜನಗರ, ಜನವರಿ 24: ರೈತರ ಜಮೀನು ಬಳಿ ಆಗಾಗ್ಗೆ ಕಾಣಿಸಿಕೊಳ್ಳುತ್ತಾ ಸಾಕು ನಾಯಿಗಳ ಮೇಲೆ ದಾಳಿ ಮಾಡಿ ತಿನ್ನುತ್ತಾ ಜನರಲ್ಲಿ ಭಯ ಹುಟ್ಟಿಸಿದ ಚಿರತೆಯೊಂದು ಶವವಾಗಿ ಪತ್ತೆಯಾಗಿದೆ. ಈ ಚಿರತೆ ಕೆಲವು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದೆಂದು ಹೇಳಲಾಗಿದ್ದು, ಸ್ವಾಭಾವಿಕ ಸಾವೇ ಅಥವಾ ಯಾರಾದರೂ ಸಾಯಿಸಿದರೇ ಎಂಬ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ ಜಿಲ್ಲೆ ಹರವೇ ಹೋಬಳಿಯ ನಂಜದೇವನಪುರ ಕರಿಕಲ್ ಕ್ವಾರಿಯ ಬಳಿ ದುರ್ನಾತ ಬೀರುತ್ತಿದ್ದರಿಂದ ಏನಿರಬಹುದೆಂದು ಕುತೂಹಲದಿಂದ ತೆರಳಿ ನೋಡಿದವರಿಗೆ ಚಿರತೆಯ ಕೊಳೆತ ದೇಹ ಪತ್ತೆಯಾಗಿದೆ. ಈ ಚಿರತೆಯು ಕೆಲವು ಸಮಯಗಳಿಂದ ಉಡಿಗಾಲ, ತಮ್ಮಡಳ್ಳಿ ಗ್ರಾಮದ ಸುತ್ತಮುತ್ತ ಅಲ್ಲಲ್ಲಿ ಕಾಣಿಸಿಕೊಂಡು ಸಾಕು ನಾಯಿ ಕೊಂದು ತಿನ್ನುತ್ತಿತ್ತು.
ಚಿರತೆ ಗ್ರಾಮದ ವ್ಯಾಪ್ತಿಯಲ್ಲಿ ಅಡ್ಡಾಡುತ್ತಿದ್ದರಿಂದ ರೈತರು ಭಯಭೀತರಾಗಿದ್ದರು. ಆದರೆ ಈ ಚಿರತೆ ನಾಯಿಗಳನ್ನಷ್ಟೆ ಹಿಡಿದು ತಿನ್ನುತ್ತಾ ಗ್ರಾಮಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಓಡಾಡಿಕೊಂಡಿತ್ತು. ಇದರ ಹೆಜ್ಜೆ ಗುರುತು ಹಾಗೂ ತಮ್ಮ ನಾಯಿಗಳು ನಾಪತ್ತೆಯಾಗುತ್ತಿದ್ದುದರಿಂದ ಜನ ಚಿರತೆಯ ಭಯದಲ್ಲಿಯೇ ದಿನ ಕಳೆಯುತ್ತಿದ್ದರು.

ನಂಜದೇವನಪುರ ಕರಿಕಲ್ ಕ್ವಾರಿಯ ಬಳಿ ಕೆಲ ದಿನಗಳಿಂದ ದುರ್ವಾಸನೆ ಬರಲಾರಂಭಿಸಿತ್ತು. ಹೀಗಾಗಿ ಯಾವ ಪ್ರಾಣಿ ಸತ್ತಿರಬಹುದೆಂದು ಪರಿಶೀಲಿಸಿದ ಜನಕ್ಕೆ ಚಿರತೆಯ ಕೊಳೆತ ಮೃತದೇಹ ಪತ್ತೆಯಾಗಿದ್ದು, ಆದರೆ ಚಿರತೆಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಒಂದು ವೇಳೆ ಆಯತಪ್ಪಿ ಬಿದ್ದು ಸತ್ತಿದೆಯಾ? ಅಥವಾ ಕಾದಾಟದಲ್ಲಿ ಸತ್ತಿದೆಯಾ ಎನ್ನುವುದು ಇನ್ನಷ್ಟೆ ತಿಳಿಯಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications