ಚಾಮರಾಜನಗರ: ಹನೂರಲ್ಲಿ ರೈತ, ಹಸುವನ್ನು ಕೊಂದ ಚಿರತೆ
ಚಾಮರಾಜನಗರ, ಸೆಪ್ಟೆಂಬರ್ 23: ಹಸು ಮೇಯಿಸಲು ತೆರಳಿದ್ದ ರೈತ ಹಾಗೂ ಆತನ ಹಸುವನ್ನು ಚಿರತೆ ಕೊಂದಿರುವ ಆಘಾತಕಾರಿ ಘಟನೆ ಹನೂರು ತಾಲೂಕಿನ ಕೆವಿನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೆವಿಎಂ ದೊಡ್ಡಿ ಗ್ರಾಮದ ಗೋವಿಂದಯ್ಯ (65)ಮೃತಪಟ್ಟ ದುರ್ದೈವಿ. ಹಸು ಮೇಯಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ರೈತನನ್ನು ಕೊಂದಿರುವ ಚಿರತೆ, ಆತನ ಬಲಗಾಲನ್ನು ತಿಂದು ಪರಾರಿಯಾಗಿದೆ ಎನ್ನಲಾಗುತ್ತಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಈ ಸ್ಥಳದಲ್ಲಿ ಈ ಹಿಂದೆ ಚಿರತೆ ಮೇಕೆಯೊಂದನ್ನು ತಿಂದಿತ್ತು, ಇದೀಗ ಹಸುವಿನ ಜೊತೆಗೆ ಮನುಷ್ಯನನ್ನು ಕೊಂಡಿದರುವ ಚಿರತೆ ಆತನ ಕಾಲನ್ನು ತಿಂದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆದಷ್ಟು ಬೇಗೆ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಪಿರಿಯಾಪಟ್ಟಣದಲ್ಲಿ ಚಿರತೆ ಸೆರೆ
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಸಮೀಪದ ಜವನಿಕುಪ್ಪೆ ಗ್ರಾಮದಲ್ಲಿ ಗುರುವಾರ ಚಿರತೆಯೊಂದು ಬೋನಿಗೆ ಬಿದ್ಗದಿದೆ. ಕೆಲವು ದಿನಗಳ ಬಿಂದೆ ಗ್ರಾಮದ ಚಂದ್ರ ಎಂಬುವವರ ಸಾಕು ನಾಯಿ ಹಾಗೂ ಕರವನ್ನು ಚಿರತೆ ತಿಂದಿತ್ತು. ನೆಟ್ಟೆಕೆರೆಯಲ್ಲಿ ಮೇಕೆಯೊಂದನ್ನು ಕೊಂದಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ನಂತರ ಚಿರತೆ ಓಡಾಡುವ ಸ್ಥಳದಲ್ಲಿ ಬೋನಿರಿಸಲಾಗಿತ್ತು . ಗುರುವಾರ ನಾಯಿ ಅಟ್ಟಿಸಿಕೊಂಡು ಬಂದ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಿರಿಯಾಪಟ್ಟಣ ಆರ್ಎಫ್ಒ ಕಿರಣ್ ಕುಮಾರ್, ಡಿಆರ್ಎಫ್ಒ ಪಾರ್ವತಿ ಸೇರಿದಂತೆ ಸಿಬ್ಬಂದಿಗಳು ಬಂದು ಚಿರತೆಯನ್ನು ಸೆರೆಹಿಡಿದು ಹೆಬ್ಬಳ ಅರಣ್ಯ ವಲಯದಲ್ಲಿ ಬಿಟ್ಟಿದ್ದಾರೆ.
ದಾವಣಗೆರೆಯಲ್ಲಿ ಚಿರತೆ ಪ್ರತ್ಯಕ್ಷ
ದಾವಣಗೆರೆ ತಾಲೂಕಿನ ಕಂದನ ಕೋವಿ-ರುದ್ರನಕಟ್ಟೆ ಗ್ರಾಮದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ದಾರಿಯಲ್ಲೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂಧ ಕಂದನಕೋವಿ, ರುದ್ರನಕಟ್ಟೆ, ಗ್ರಾಮಸ್ಥರು ಹೊರಗೆ ಓಡಾಡಲು ಆತಂಕ ವ್ಯಕ್ತಪಡಿಸಿದ್ದಾರೆ. ಕೂಡಲೇ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಮನವಿ ಮಾಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications