ಚಾಮರಾಜನಗರ: ಕಾರು ಕಂಡು ರಗಡ್ ಲುಕ್ ಕೊಟ್ಟ ಚಿರತೆ.!-ವಿಡಿಯೋ ವೈರಲ್
ಚಾಮರಾಜನಗರ, ಅಕ್ಟೋಬರ್, 18: ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಇನ್ನೂ ಈ ವಿಡಿಯೋಗಳಂತೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ಉದಾಹರಣೆಗಳಿವೆ. ಹಾಗೆಯೇ ಇದೀಗ ಚಿರತೆಯೊಂದು ರಸ್ತೆಬದಿಯೇ ಪ್ರವಾಸಿಗರಿಗೆ ದರ್ಶನ ಕೊಟ್ಟ ಘಟನೆ ಪ್ರಸಿದ್ಧ ಪ್ರವಾಸಿ ತಾಣವಾದ ಬಿಳಿಗಿರಿರಂಗನ ಬೆಟ್ಟದ ರಸ್ತೆಯಲ್ಲಿ ನಡೆದಿದೆ.
ತಮಿಳುನಾಡಿನ ಪ್ರವಾಸಿಗರು ತೆರಳುತ್ತಿದ್ದ ವೇಳೆ ರಸ್ತೆಬದಿಯೇ ಚಿರತೆ ಕಂಡಿದ್ದಾರೆ. ಇನ್ನು, ಕಾರಿನಲ್ಲಿದ್ದವರು ತನ್ನನ್ನು ನೋಡುತ್ತಿದ್ದನ್ನು ಕಂಡ ಚಿರತೆ ನಿಂತು ರಗಡ್ ಲುಕ್ ಕೊಟ್ಟಿದ್ದು, ಈ ದೃಶ್ಯ ಪ್ರವಾಸಿಗೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಭಾರೀ ವೈರಲ್ ಆಗುತ್ತಿದೆ.

ಕಾರಿನ ಹಿಂದೆ ಬಸ್ ಬಂದಿದೆ. ಈ ವೇಳೆ ಚಿರತೆಯು ಬಂಡೆಕಲ್ಲಿನ ಮೇಲೆ ನಿಂತು ಜನರನ್ನು ಗುರಾಯಿಸಿದ್ದು, ಈ ವೀಡಿಯೋ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ.
ರಸ್ತೆಗಿಳಿದ ಆನೆ: ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ಹೆದ್ದಾರಿಯ ಎರಡೂ ಬದಿ ವಾಹನಗಳು ನಿಂತಲ್ಲೇ ನಿಂತ ಘಟನೆ ಚಾಮರಾಜನಗರ ಸಮೀಪದ ತಾಳವಾಡಿಯ ಚಿಕ್ಕಳ್ಳಿಯಲ್ಲಿ ನಡೆದಿದೆ. ಆಹಾರ ಅರಸಿ ನಾಡಿನತ್ತ ಬಂದ ಆನೆ ರಸ್ತೆಯಲ್ಲಿ ಓಡಾಡಿದ್ದರಿಂದ ಟ್ರ್ಯಾಕ್ಟರ್, ಕಾರು, ಬೈಕ್ ಸವಾರರು ಗಾಬಾರಿಗೊಂಡು ತಪ್ಪಿಕೊಳ್ಳಲು ಹರಸಹಾಸಪಟ್ಟಿದ್ದಾರೆ.
ಇನ್ನು ಆನೆ ಓಡಾಟದ ದೃಶ್ಯವನ್ನು ಟ್ರ್ಯಾಕ್ಟರ್ ಚಾಲಕ ಸೆರೆ ಹಿಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ ಜಾಗರೂಕತೆಯಿಂದ ವಾಹನ ಚಲಾಯಿಸಿ, ವನ್ಯಜೀವಿಗಳಿಗೆ ಯಾವುದೇ ಹಣ್ಣುಗಳನ್ನು ಕೊಡಬೇಡಿ ಎಂದು ಅರಣ್ಯ ಇಲಾಖೆ ಸಲಹೆ ನೀಡಿದೆ.
ಬೋನಿಗೆ ಬಿದ್ದ ಚಿರತೆ: ಕಳೆದ 3 ತಿಂಗಳುಗಳಿಂದ ರೈತರಿಗೆ ಉಪಟಳ ಕೊಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಸೆರೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದಲ್ಲಿ ನಡೆದಿದೆ.
ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬುವವನ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು. ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ.
ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯದಲ್ಲಿ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ. ಸೆರೆಯಾದ ಚಿರತೆ ಗಂಡಾಗಿದ್ದು, 5 ವರ್ಷ ಇರಬಹುದು ಎಂದು ಅಂದಾಜು ಮಾಡಲಾಗಿದೆ.
-
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications