ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ; ಪಾರ್ವತಿಬೆಟ್ಟದಲ್ಲಿ ನಡೆದಿದ್ದು ಪೂಜೆನಾ, ಮದುವೆನಾ?

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್ 06; ಕೊರೊನಾ ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರಿ ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ದೇವಾಲಯದ ಬಾಗಿಲು ತೆರೆದು ಪೂಜಾ ಕಾರ್ಯದ ಜೊತೆಗೆ ರಾಜಕೀಯ ಮುಖಂಡರೊಬ್ಬರ ಕುಟುಂಬಕ್ಕೆ ಸೇರಿದವರೊಬ್ಬರ ಮದುವೆಯನ್ನು ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಅದರ ತಡೆಗೆ ಲಾಕ್‌ಡೌನ್ ಮಾಡುವುದರೊಂದಿಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಆದರೆ ಪ್ರಭಾವಿಗಳು ಇದನ್ನೆಲ್ಲ ಗಾಳಿಗೆ ತೂರಿ ತಮಗೆ ತೋಚಿದಂತೆ ವರ್ತಿಸುತ್ತಿದ್ದು, ನಿಯಮಗಳೆಲ್ಲ ಬಡವನಿಗೆ ಮಾತ್ರನಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿದೆ.

ದಕ್ಷಿಣ ಕನ್ನಡ; ವಾರಾಂತ್ಯದ ಕರ್ಫ್ಯೂ ನಡುವೆಯೂ 372 ವಿವಾಹ!ದಕ್ಷಿಣ ಕನ್ನಡ; ವಾರಾಂತ್ಯದ ಕರ್ಫ್ಯೂ ನಡುವೆಯೂ 372 ವಿವಾಹ!

ಚಾಮರಾಜನಗರದಲ್ಲಿ ಕೊರೊನಾ ತೀವ್ರತೆ ತುಸು ಜಾಸ್ತಿಯಿದ್ದು, ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲ ದೇವಾಲಯಗಳಿಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಿರುವಾಗ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾರ್ವತಿ ಬೆಟ್ಟದಲ್ಲಿ ದೇವಾಲಯದ ಬಾಗಿಲು ತೆರೆದು ಪೂಜಾ ಕಾರ್ಯ ನಡೆಸಿರುವುದರ ಹಿಂದೆ ರಾಜಕೀಯ ಮುಖಂಡರೊಬ್ಬರ ಪ್ರಭಾವ ಇದೆ ಎಂದು ಹೇಳಲಾಗುತ್ತಿದೆ.

ಉಡುಪಿ; ಕಠಿಣ ಲಾಕ್‌ಡೌನ್, ಮದುವೆ, ಮೆಹಂದಿ ಕಾರ್ಯಕ್ರಮ ರದ್ದು ಉಡುಪಿ; ಕಠಿಣ ಲಾಕ್‌ಡೌನ್, ಮದುವೆ, ಮೆಹಂದಿ ಕಾರ್ಯಕ್ರಮ ರದ್ದು

 Lockdown Rules Violation Temple Open For Marriage At Parvathi Betta

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ದೇವಾಲಯವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ನಿಯಮ ಉಲ್ಲಂಘಿಸಿ ಈ ರೀತಿ ಮದುವೆ ಮಾಡಿರುವುದು ಖಂಡನೀಯ. ತಾಲೂಕಿನಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿ ಇದ್ದು ಅಧಿಕಾರ ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಮದುವೆ ಸಮಾರಂಭಗಳಿಗೆ ಇ-ಪಾಸ್ ಪಡೆಯುವುದು ಹೇಗೆ? ಮದುವೆ ಸಮಾರಂಭಗಳಿಗೆ ಇ-ಪಾಸ್ ಪಡೆಯುವುದು ಹೇಗೆ?

ಇತಿಹಾಸಪ್ರಸಿದ್ಧ ಪಾರ್ವತಿ ಬೆಟ್ಟದಲ್ಲಿ ನಡೆಯಬೇಕಾದ ಜಾತ್ರೆಯನ್ನು ಕೋವಿಡ್ ಕಾರಣದಿಂದಾಗಿ ನಿಲ್ಲಿಸಲಾಗಿತ್ತು. ಆದರೆ ಇಲ್ಲಿ ಕೋವಿಡ್ ಸಮಯದಲ್ಲೂ ಸಹ ರಾಜಕೀಯ ಪ್ರಭಾವ ಬಳಸಿ ಪೂಜಾ ಕಾರ್ಯದ ಜತೆಗೆ ಮದುವೆಯನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.

 Lockdown Rules Violation Temple Open For Marriage At Parvathi Betta

ಮೂಲಗಳ ಪ್ರಕಾರ ಅರ್ಚಕರು ತಹಸೀಲ್ದಾರ್ ಅನುಮತಿ ಪಡೆದಿರುವುದಾಗಿ ಹೇಳಿ ಕರೆದೊಯ್ದು ವಿವಾಹ ಮಾಡಿಸಿದ್ದಾರೆ ಎನ್ನಲಾಗಿದ್ದು, ತಹಸೀಲ್ದಾರ್‌ಗೆ ಮದುವೆಯನ್ನು ಮನೆಯಲ್ಲಿ ಮಾಡಿಕೊಳ್ಳುತ್ತೇವೆ ಹಾಗೂ ಹೆಚ್ಚಿನ ಜನರನ್ನು ಸಹ ಸೇರಿಸುವುದಿಲ್ಲ ಎಂದು ಹೇಳಿ ಅನುಮತಿ ಪಡೆದಿದ್ದರು ಎನ್ನಲಾಗಿದೆ.

Recommended Video

Mysuru ಜಿಲ್ಲಾಧಿಕಾರಿ Rohini Sindhuri ಯನ್ನು ವರ್ಗಾವಣೆ ಮಾಡಿದ ಸರ್ಕಾರ | Oneindia Kannada

ಒಟ್ಟಾರೆ ಪ್ರಭಾವಿಗಳು ಏನೂಬೇಕಾದರೂ ಮಾಡಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

English summary
Lockdown rules violation in Chamarajanagar district Gundlupet Parvathi betta. Temple open for marriage function of the BJP leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X