Lok sabha election: ಚಾಮರಾಜನಗರದಿಂದ ಬಿಜೆಪಿ ಟಿಕೆಟ್ಗಾಗಿ ವಿ.ಶ್ರೀನಿವಾಸ ಪ್ರಸಾದ್ ಅಳಿಯಂದಿರ ಪಟ್ಟು, ಹಾಗಾದ್ರೆ "ಕೈ"ನಿಂದ?
ಚಾಮರಾಜನಗರ, ಜನವರಿ, 10: ಲೋಕಸಭಾ ಚುನಾವಣೆ ಪ್ರಕ್ರಿಯೆ ಗರಿಗೆದರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಈ ನಡುವೆ ಅಧಿಕಾರದ ಮುಂದುವರಿಕೆಗಾಗಿ ಕುಟುಂಬ ರಾಜಕಾರಣವೂ ಮುನ್ನೆಲೆಗೆ ಬಂದಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸಾಲು ಬೆಳೆಯುತ್ತಲೇ ಇದ್ದು, ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ 8-10 ಮಂದಿ ಆಕಾಂಕ್ಷಿಗಳಿದ್ದಾರೆ. ಇನ್ನು ಮತ್ತೊಂದೆಡೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರು ಚಾಮರಾಜನಗರ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೇ ಮುಖಂಡರನ್ನು ಭೇಟಿಯಾಗುತ್ತಿದ್ದಾರೆ.

ತಾವು ಈ ಬಾರಿ ಆಕಾಂಕ್ಷಿಯಲ್ಲ ಎಂದು ಮಹಾದೇವಪ್ಪ ಹೇಳುತ್ತಿದ್ದರೂ ಅವರ ಹೆಸರು ಕೂಡ ಪ್ರಬಲವಾಗಿ ಕೇಳಿ ಬರುತ್ತಿದೆ. ಈ ನಡುವೆ ಪುತ್ರ ಸುನೀಲ್ ಬೋಸ್ ಶತಾಯಗತಾಯ ಟಿಕೆಟ್ ಪಡೆಯಲೇಬೇಕು ಎಂದು ಭರ್ಜರಿ ಲಾಬಿ ನಡೆಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿ.ನರಸೀಪುರದಿಂದ ಟಿಕೆಟ್ ಆಕಾಂಕ್ಷಿಯಾಗಿ ಸುನಿಲ್ ಬೋಸ್ ಅರ್ಜಿ ಹಾಕಿದ್ದರು. ಬದಲಾದ ಸನ್ನಿವೇಶದಲ್ಲಿ ತಂದೆ ಮಹಾದೇವಪ್ಪಗೆ ಹೈಕಮಾಂಡ್ ಟಿ.ನರಸಿಪುರದಿಂದ ಟಿಕೆಟ್ ಕೊಟ್ಟಿತ್ತು.
ರೇಸ್ನಲ್ಲಿ ಸಂಸದರ ಅಳಿಯಂದಿರು: ಹಾಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಇಬ್ಬರು ಅಳಿಯಂದಿರಾದ ಹರ್ಷವರ್ಧನ್ ಮತ್ತು ಡಾ.ಮೋಹನ್ ಕುಮಾರ್ ಕೂಟ ಟಿಕೆಟ್ ರೇಸ್ನಲ್ಲಿದ್ದಾರೆ. ಈಗಾಗಲೇ ಎರಡು ತಿಂಗಳ ಹಿಂದೆ ಸರ್ಕಾರಿ ಹುದ್ದೆಗೆ ರಾಜೀನಾಮೆ ಕೊಟ್ಟಿರುವ ಡಾ.ಮೋಹನ್ ಕುಮಾರ್ ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ. ಮಾಜಿ ಶಾಸಕ ಹರ್ಷವರ್ಧನ್ ಕೂಡ ಆಕಾಂಕ್ಷಿಯಾಗಿದ್ದು, ಪಕ್ಷದ ತೀರ್ಮಾನಕ್ಕೆ ಬದ್ಧ ಎನ್ನುತ್ತಿದ್ದಾರೆ.
ಮಾವ ಹಾಗೂ ಸಂಸದ ಶ್ರೀನಿವಾಸ ಪ್ರಸಾದ್ ಮುಂದಿನ ಮಾರ್ಚ್ನಲ್ಲಿ ರಾಜಕೀಯ ನಿವೃತ್ತಿಯಾಗುವೆ ಎಂದು ಘೋಷಣೆ ಮಾಡಿದ್ದು, ಮಾವನ ನಾಮಬಲ ಯಾರಿಗೆ? ಎಂಬುದು ಇನ್ನೂ ನಿಗೂಢವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications