Get Updates
Get notified of breaking news, exclusive insights, and must-see stories!

ಚಾಮರಾಜನಗರ: ಸುತ್ತಲೂ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ರಾಷ್ಟ್ರೀಯ ಹೆದ್ದಾರಿ ಇದು-ಏನಿದರ ವಿಶೇಷತೆ?

ಚಾಮರಾಜನಗರ, ಏಪ್ರಿಲ್‌, 11: ಇದೊಂದು ರೀತಿ ರಸ್ತೆ ಭಾರೀ ಡಿಫೆರೆಂಟ್‌ ಅಂದರೂ ತಪ್ಪಿಲ್ಲ. ಏಕೆಂದರೆ, ಈ ರಸ್ತೆಯಲ್ಲಿ ನಿಂತು ಯಾವ ಕಡೆಗೂ ಹೋದರೂ ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಹೋಗಬಹುದು. ಹಾಗಾದರೆ ಆ ರಸ್ತೆ ಯಾವುದು, ಎಲ್ಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಸ್ತೆಗಳು ಒಂದು ಇಲ್ಲವೇ ಎರಡು ವಿಧಾನಸಭಾ ಕ್ಷೇತ್ರಗಳ ಗಡಿ ಹಂಚಿಕೊಂಡಿರುವುದನ್ನು ನೋಡಿರುತ್ತೀರಿ.‌ ಆದರೆ, ಈ ರಸ್ತೆ ಮಾತ್ರ ಎಲ್ಲದಕ್ಕೂ ಸ್ಪೆಷಲ್ ಆಗಿದ್ದು, ರಸ್ತೆ ನಾಲ್ಕು ದಿಕ್ಕಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

Lok Sabha Election 2024 Interesting facts on This Highways Crossing 4 Assembly Constituencies

ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಕ್ರಾಸ್ ಎಂಬ ರಸ್ತೆಯು ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯನ್ನು ಹಾದು ಹೋಗಿದ್ದು, ತನ್ನ 4 ಪಾರ್ಶ್ವಕ್ಕೆ 4 ಕ್ಷೇತ್ರಗಳನ್ನು ಹೊಂದಿರುವುದೇ ವಿಶೇಷ.

ಹೆಗ್ಗವಾಡಿ ಕ್ರಾಸ್ ಚಾಮರಾಜನಗರ ಹಾಗೂ ಮೈಸೂರಿನ ಗಡಿಯಾಗಿದ್ದು, ಮುಂದಕ್ಕೆ ಚಲಿಸಿದರೇ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಸಿಗಲಿದೆ‌. ಹಿಂದಕ್ಕೆ ಹೊರಳಿದರೆ ನಂಜನಗೂಡು, ಎಡಕ್ಕೆ ತಿರುಗಿದರೇ ವರುಣ ಹಾಗೂ ಬಲಭಾಗಕ್ಕೆ 4 ಹೆಜ್ಜೆ ಇಟ್ಟರೇ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿ ಪಡೆಯುತ್ತೇವೆ.

ವರುಣ ಕ್ಷೇತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿಲಿದ್ದು, ನಂಜನಗೂಡು ಕ್ಷೇತ್ರವನ್ನು ದರ್ಶನ್ ಧ್ರುವನಾರಾಯಣ, ಗುಂಡ್ಲುಪೇಟೆಯನ್ನು ಗಣೇಶ್ ಪ್ರಸಾದ್ ಹಾಗೂ ಚಾಮರಾಜನಗರ ಕ್ಷೇತ್ರವನ್ನು ಸಿ‌.ಪುಟ್ಟರಂಗಶೆಟ್ಟಿ ಪ್ರತಿನಿಧಿಸುತ್ತಿದ್ದಾರೆ.

ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಎಲ್ಲಾ ಪಕ್ಷಗಳ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ.
ಇದೀಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹತಾಶೆಗೊಂಡು ಗೂಂಡಾ ವರ್ತನೆ ತೋರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಕೊಳ್ಳೇಗಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಾ.ಸಿ.ಎನ್‌.ಮಂಜುನಾಥ್ ಅಭ್ಯರ್ಥಿ ಆಗಿರುವುದನ್ನು ತಡೆಯಲಾರದೇ ಕಾಂಗ್ರೆಸ್ ಪಕ್ಷದ ಮುಖಂಡರು ಹತಾಶೆಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಮನಿ ಪವರ್, ಮಸಲ್ ಪವರ್‌ನಿಂದ ಚುನಾವಣೆ ಗೆಲ್ಲಬಹುದು ಎಂದುಕೊಂಡಿದ್ದು, ಇದಕ್ಕೆ ಮತದಾರರು ತಕ್ಕ ಉತ್ತರ ಕೊಡಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಎನ್‌ಡಿಎ ಅಭ್ಯರ್ಥಿ ಬಿ‌.ವೈ‌.ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ. ಯಾರ ಫೋಟೋ ಹಾಕಬೇಕು, ಹಾಕಬಾರದು ಎಂಬುದನ್ನು ನಾವು ತೀರ್ಮಾನ ಮಾಡುತ್ತೇವೆ. ಯಾರಿಂದಲೂ ಪಾಠ ಕೇಳುವ ಅವಶ್ಯಕತೆ ಇಲ್ಲ ಎಂದು ಕೆ.ಎಸ್‌.ಈಶ್ವರಪ್ಪ ಫೋಟೋ ಹೇಳಿಕೆಗೆ ತಿರುಗೇಟು ಕೊಟ್ಟರು.

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದು ಜನರೇ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಯಾರೇ ಬಂದರೂ ತಡೆಯಲು ಆಗುವುದಿಲ್ಲ. ಇನ್ನು, ಚಾಮರಾಜನಗರದಲ್ಲಿ ಬಾಲರಾಜು ಅವರು ಸಜ್ಜನ ರಾಜಕಾರಣಿ ಆಗಿದ್ದು, ಗೆದ್ದೇ ಗೆಲ್ಲುತ್ತಾರೆ. ವಿ.ಶ್ರೀನಿವಾಸ ಪ್ರಸಾದ್ ಅವರು ಕೂಡ ನಮ್ಮ ಜೊತೆ ಇದ್ದಾರೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+