ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಧ್ರುವನಾರಾಯಣ್ ಮುನ್ನಡೆ
ಬೆಂಗಳೂರು, ಮೇ 23: ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಮತ್ತು ಸತತ ಎರಡು ಬಾರಿ ಸಂಸದರಾಗಿರುವ ಆರ್. ಧ್ರುವನಾರಾಯಣ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಆರಂಭದ ಕೆಲವು ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಮುನ್ನಡೆ ಸಾಧಿಸಿದ್ದರು. ಪ್ರಸ್ತುತ ಧ್ರುವನಾರಾಯಣ್ ಅವರು 12,613 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಆರ್. ಧ್ರುವನಾರಾಯಣ್ 5,67,782 ಮತಗಳನ್ನು ಪಡೆದಿದ್ದರೆ, ಅವರ ಎದುರಾಳಿ ಬಿಜೆಪಿಯ ಎ.ಆರ್. ಕೃಷ್ಣಮೂರ್ತಿ 4,26,600 ಮತಗಳನ್ನು ಪಡೆದುಕೊಂಡಿದ್ದರು.

ಚಾಮರಾಜನಗರ ಕ್ಷೇತ್ರದಲ್ಲಿ ಸತತ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಆರ್. ಧ್ರುವನಾರಾಯಣ ಮೂರನೇ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸುವ ಗುರಿ ಹೊಂದಿದ್ದಾರೆ.












Click it and Unblock the Notifications