ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಟಿಕೆಟ್ಗೆ ಬಲು ಬೇಡಿಕೆ, ಮಲ್ಲಿಕಾರ್ಜುನ ಖರ್ಗೆ ಅಚ್ಚರಿ ಅಭ್ಯರ್ಥಿ ಗುಲ್ಲು..!
ಚಾಮರಾಜನಗರ, ಡಿಸೆಂಬರ್, 27: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಕೈ ಟಿಕೆಟ್ಗೆ ಭಾರಿ ಪೈಪೋಟಿ ನಡೆದಿದ್ದು, ಆಕಾಂಕ್ಷಿಗಳ ಸಂಖ್ಯೆ 8 ಮಂದಿಗೇರಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಿದ್ದು, ಚಾಮರಾಜನಗರದ 4 ಹಾಗೂ ಮೈಸೂರಿನ 4 ವಿಧಾನಸಭಾ ಕ್ಷೇತ್ರ ಸೇರಿ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರವೂ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡಲಿದೆ.

8 ಕ್ಷೇತ್ರದಲ್ಲಿ 7 ಕೈವಶ
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು, ಎಚ್.ಡಿ.ಕೋಟೆ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾದ ವರುಣ ಕಾಂಗ್ರೆಸ್ ಕೋಟೆಯಾಗಿದ್ದು, ಹನೂರು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಎಂ.ಆರ್.ಮಂಜುನಾಥ್ ಇದ್ದಾರೆ.
8 ಕ್ಷೇತ್ರದಲ್ಲಿ 7 ಮಂದಿ ಕಾಂಗ್ರೆಸ್ ಶಾಸಕರಿರುವ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಪಡೆಯಲು ಪೈಪೋಟಿ ಜೋರಾಗಿಯೇ ಇದ್ದು, ಈ ಬಾರಿ ಮತ್ತೇ ಕ್ಷೇತ್ರ ಕೈ ವಶವಾಗುವ ಉತ್ಸಾಹದಲ್ಲಿದೆ ಕಾಂಗ್ರೆಸ್ ಪಡೆ. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರವು ಒಳಪಡಲಿದ್ದು, ಕಾಂಗ್ರೆಸ್ ಗೆಲ್ಲಿಸಬೇಕಾದ ಪ್ರತಿಷ್ಟೆಯೂ ಇರಲಿದೆ.
ಅಭ್ಯರ್ಥಿ ಆಗ್ತಾರಾ ಕಾಂಗ್ರೆಸ್ ಅಧಿನಾಯಕ?
ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್, ಮಾಜಿ ಸಚಿವ ಮಳವಳ್ಳಿ ಸೋಮಶೇಖರ್, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಕಾಂಗ್ರೆಸ್ ಯುವ ಮುಖಂಡ ದೇಶವಳ್ಳಿ ನಟರಾಜು, ಕಾಂಗ್ರೆಸ್ ಕಾರ್ಮಿಕ ವಿಭಾಗದ ಮುಖಂಡ ಕಿರಣ್ ಸೇರಿದಂತೆ 8 ಮಂದಿ ಆಕಾಂಕ್ಷಿಗಳಿದ್ದಾರೆ.
ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಟಿಕೆಟ್ ಪಡೆಯಲು ಸಾಕಷ್ಟು ಪೈಪೋಟಿ ನಡೆಸುತ್ತಿದ್ದು, ಉಳಿದವರು ಈಗಾಗಲೇ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆಗುತ್ತಾರೆ ಎಂಬ ಗುಲ್ಲು ಎದ್ದಿದೆ. ಕೆಲ ಆಕಾಂಕ್ಷಿಗಳೇ ಖರ್ಗೆ ಅವರನ್ನು ಭೇಟಿ ಮಾಡಿ ಸ್ಪರ್ಧೆ ಮಾಡುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ದಲಿತ ನಾಯಕ ಆಗಿರುವ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡಿದರೇ, ಪಕ್ಷಕ್ಕೂ ಬೂಸ್ಟ್ ಸಿಕ್ಕಂತಾಗಲಿದೆ ಎಂದು ಒತ್ತಾಯ ಮಾಡುತ್ತಿದ್ದು, ಚಾಮರಾಜನಗರ ಲೋಕಸಭೆ ಚುನಾವಣೆಗೆ ಖರ್ಗೆ ಅಚ್ಚರಿ ಅಭ್ಯರ್ಥಿ ಆಗುತ್ತಾರೆ ಎನ್ನಲಾಗುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications