ಚಾಮರಾಜನಗರ: ವ್ಯಾಪಾರಿಗಳಿಂದ ಲಂಚ ಪಡೆಯುತ್ತಿದ್ದ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಮಿಕ ಇಲಾಖೆ ನಿರೀಕ್ಷಕ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಚೇರಿಯಿಂದ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಚಾಮರಾಜನಗರ, ಮಾರ್ಚ್ 4: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಮಿಕ ಇಲಾಖೆ ನಿರೀಕ್ಷಕ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಚೇರಿಯಿಂದ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು ಪರಾರಿಯಾದ ಅಧಿಕಾರಿ ಎಂದು ಗುರುತಿಸಲಾಗಿದೆ.
ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದರಲ್ಲಿ ಒಂದು ಸಾವಿರ ರೂಪಾಯಿ ಅಡ್ವಾನ್ಸ್ ಪಡೆದದ್ದರು ಎನ್ನಲಾಗಿದೆ. ಅದೇ ಗ್ರಾಮದ ಪೈಪ್ ಮತ್ತು ಇನ್ನಿತರ ವ್ಯಾಪಾರಿ ದಗ್ಲರಾಮ್ ಕಾರ್ಮಿಕ ಇಲಾಖೆಯಿಂದ ಅನುಮತಿ ಪಡೆಯಲು ಹೋದ ವೇಳೆ 6 ಸಾವಿರ ರೂಪಾಯಿ ಲಂಚ ಕೇಳಿದ್ದು ಇದರಲ್ಲಿ 3 ರೂಪಾಯಿ ಸಾವಿರ ಮೊದಲೇ ಪಡೆದಿದ್ದರು ಎನ್ನಲಾಗಿದೆ.

ಇಬ್ಬರು ವ್ಯಾಪಾರಿಗಳು ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಶುಕ್ರವಾರ ಸಂಜೆ ಅಧಿಕಾರಿ ಚಂದ್ರು ವ್ಯಾಪಾರಿಗಳ ಬಳಿ ಹಣ ಇಡುವಂತೆ ಹೇಳಿದ್ದಾನೆ. ಲಂಚದ ಹಣ ಇಟ್ಟ ಬಳಿಕ ಚಂದ್ರು ಹೊರ ಹೋಗಿದ್ದು ಮಧ್ಯವರ್ತಿ ಸಾಗರ್ ಎಂಬಾತ ಫೈಲ್ ನಿಂದ ಹಣ ತೆಗೆದುಕೊಂಡಿದ್ದಾನೆ. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಧಿಕಾರಿ ಚಂದ್ರ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ಲೋಕಾಯುಕ್ತ ಪೊಲೀಸರು ಮಧ್ಯವರ್ತಿ ಸಾಗರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸಿಹಿ ತಿಂಡಿ ಎಂದು ಇರುವೆ ಪುಡಿ ತಿಂದು ಬಾಲಕ ಸಾವು
ಚಾಮರಾಜನಗರ: ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಪುಟ್ಟಿರಮ್ಮನ ದೊಡ್ಡಿ ಗ್ರಾಮದ ಕ್ಯಾತೆ ಗೌಡ ಎನ್ನುವವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ ಎಂದು ಗುರುತಿಸಲಾಗಿದೆ.
ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮನೆಯಲ್ಲಿ ಆಟವಾಡುತ್ತಿದ್ದ ಶಿವು ಸಿಹಿ ತಿಂಡಿ ಎಂದು ಇರುವೆ ಪೌಡರ್ ತಿಂದಿದ್ದಾನೆ. ಇರುವೆ ಪುಡಿಯನ್ನು ತಿಂದು ನರಳಾಡುತ್ತಿತ್ತು ಇದನ್ನು ಗಮನಿಸಿದ ಪೋಷಕರು ತಕ್ಷಣ ಕಾಮಗೆರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಫಲಿಸದೆ ಮಗು ಸಾವನ್ನಪ್ಪಿದೆ.
ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications