ಹೊಗೆನಕಲ್ ಪಾಲ್ಸ್ ಬಳಿ ವಿಷ ಕುಡಿದ ಪ್ರೇಮಿಗಳು, ಯುವಕ ಸಾವು
ಚಾಮರಾಜನಗರ, ಸೆಪ್ಟೆಂಬರ್, 12: ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತದ ಬಳಿ ಪ್ರೇಮಿಗಳಿಬ್ಬರು ವಿಷ ಕುಡಿದಿದ್ದು, ಈ ವೇಳೆ ಯುವಕ ಮೃತಪಟ್ಟಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಮೇಶ್ (24) ಮೃತಪಟ್ಟಿರುವ ಯುವಕನಾಗಿದ್ದು, 16 ವರ್ಷದ ರಕ್ಷಿತಾ ಎಂಬಾಕೆ ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಉಮೇಶ್ ಹಾಗೂ ರಕ್ಷಿತಾ ಕನಕಪುರ ಮೂಲದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇವರಿಬ್ಬರು ಬಿದ್ದಿದ್ದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ವಿಷ ಕುಡಿದು ಬಹಳ ಸಮಯವಾಗಿದ್ದರಿಂದ ಉಮೇಶ್ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು, ರಕ್ಷಿತಾ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ತಮಿಳುನಾಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಇಬ್ಬರು ಸಾವು
ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ 48ರ ಎಸ್.ಎಸ್. ಹೈಟೆಕ್ ಆಸ್ಪತ್ರೆ ಬಳಿ ಇತ್ತೀಚೆಗಷ್ಟೇ ನಡೆದಿತ್ತು.
ಕೇರಳದ ಪಾಲಕ್ ಕಾಡ್ ಸಿಟಿಯ ಪಟ್ಟಿಕಾರದ ತೆಲುನಾಗು ಗಲ್ಲಿಯ ಋಷಿಕೇಶ್ (24) ಹಾಗೂ ಪುಡುಸೆರಿಯ ಅತುಲ್ (25) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೇರಳದಿಂದ ಗೋವಾಕ್ಕೆ ಜಾಲಿ ಟ್ರಿಪ್ ಬಂದಿದ್ದ ಇಬ್ಬರು ಹುಬ್ಬಳ್ಳಿಯಿಂದ ದಾವಣಗೆರೆ ಮೂಲಕ ಸಾಗುತ್ತಿರುವ ವೇಳೆ ಈ ದುರ್ಘಟನೆ ನಡೆದಿತ್ತು.
ಬೈಕ್ನಲ್ಲಿದ್ದ ಇಬ್ಬರು ಬೆಳ್ಳಂಬೆಳಗ್ಗೆ ಸುಮಾರು 3.30ರ ಸುಮಾರಿನಲ್ಲಿ ಹೆದ್ದಾರಿಯಲ್ಲಿ ಹೋಗುವಾಗ ವೇಗವಾಗಿದ್ದ ಕಾರಣ ನಿದ್ರೆ ಮಂಪರಿನಲ್ಲಿ ಬೈಕ್ ಸವಾರ ಡಿವೈಡರ್ಗೆ ಗುದ್ದಿದ್ದಾನೆ. ಆ ಬಳಿಕ ಇಬ್ಬರು ಬ್ರಿಡ್ಜ್ ಕೆಳಗಡೆ ಬಿದ್ದಿದ್ದು, ಬೈಕ್ ನುಜ್ಜು ಗುಜ್ಜಾಗಿತ್ತು. ಬಳಿಕ ಈ ಮಾರ್ಗದಲ್ಲಿ ಹೋಗುತ್ತಿದ್ದ ವಾಹನಗಳು ಬೈಕ್ಗೆ ತಾಗಿಸಿಕೊಂಡು ಹೋಗಿವೆ. ನಂತರ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು ಜಖಂ ಆಗಿತ್ತು.
ಮೇಲ್ನೋಟಕ್ಕೆ ಅಪಘಾತ ಎಂಬಂತೆ ಕಂಡು ಬಂದಿತ್ತು. ಆದರೆ ಇಬ್ಬರ ಮೃತದೇಹಗಳು ಕೆಳಗಡೆ ಬಿದ್ದಿದ್ದವು. ಆರಂಭದಲ್ಲಿ ಅಪಘಾತ ಎಂಬಂತೆ ಭಾಸವಾದರೂ ಮೃತದೇಹಗಳು ಯಾಕೆ ಕೆಳಗಡೆ ಬಿದ್ದವು ಎಂಬ ಪ್ರಶ್ನೆ ಕಾಡಲಾರಂಭಿಸಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬ್ರಿಡ್ಜ್ ಮೇಲಿನಿಂದ ನಿಂತು ವೀಕ್ಷಿಸಿದಾಗ ಕೆಳಗಡೆ ಇಬ್ಬರು ಬಿದ್ದಿದ್ದರು. ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದಿದ್ದರು. ಬೈಕ್ಗೆ ಡಿಕ್ಕಿ ಹೊಡೆದು ನಿಂತಿದ್ದ ಕಾರು ಚಾಲಕರನ್ನು ವಿಚಾರಿಸಿದರು. ಆಗ ನಾವು ಬರುವುದಕ್ಕಿಂತ ಮುಂಚೆ ಅಪಘಾತವಾಗಿತ್ತು. ನಾವು ಕೆಳಗಡೆ ನೋಡಿದೆವು. ಕತ್ತಲಾಗಿದ್ದ ಕಾರಣ ಏನೂ ಕಾಣಲಿಲ್ಲ. ಸ್ವಲ್ಪ ಬೆಳಕು ಬಂದ ಮೇಲೆ ಕೆಳಗಡೆ ಮೃತದೇಹವೊಂದು ಕಂಡುಬಂತು ಎಂದು ಮಾಹಿತಿ ನೀಡಿದ್ದರು.
ಮೃತಪಟ್ಟವರು ಇಬ್ಬರೂ ಕೇರಳ ಮೂಲದವರಾಗಿದ್ದು, ಗೋವಾಕ್ಕೆ ಬೈಕ್ನಲ್ಲಿಯೇ ತೆರಳಿದ್ದರು. ಬೈಕ್ನಲ್ಲಿ ಜಾಲಿ ರೈಡ್ ಹೊರಟಿದ್ದವರು ಮಾತ್ರ ಸೇರಿದ್ದು ಮಸಣಕ್ಕೆ. ಹೆಲ್ಮೆಟ್ ಧರಿಸಿದ್ದರೂ ಸಹ ಮೇಲಿನಿಂದ ಕೆಳಗಡೆ ಬಿದ್ದ ರಭಸಕ್ಕೆ ಬೈಕ್ ಸವಾರ ಕೊನೆಯುಸಿರೆಳೆದಿದ್ದಾನೆ. ಹಿಂಬದಿ ಕುಳಿತಿದ್ದವನಿಗೂ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications