Lunar Eclipse 2023: ಮಲೆ ಮಹದೇಶ್ವರ ದೇವರ ದರ್ಶನ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ
ಚಾಮರಾಜನಗರ, ಅಕ್ಟೋಬರ್, 28: ಇಂದು (ಶನಿವಾರ) ಇಂದು ಚಂದ್ರ ಗ್ರಹಣ ಹಿನ್ನೆಲೆ ಹಲವೆಡೆ ದೇವಸ್ಥಾನಗಳಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ ಹನೂರು ತಾಲೂಕಿನ ಮಲೆ ಮಹದೇಶ್ವರ ದರ್ಶನದಲ್ಲಿ ಯಾವುದೇ ವ್ಯತ್ಯಾಸ ಇಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಳಗ್ಗೆಯಿಂದ ರಾತ್ರಿಯವರೆಗೂ ಮಲೆ ಮಹದೇಶ್ವರ ದೇವಸ್ಥಾನ ಎಂದಿನಂತೆ ತೆರಯಲಿದ್ದು, ಮಾದಪ್ಪನ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಇನ್ನು ದೇವಸ್ಥಾನದ ಅರ್ಚಕರು ಮಧ್ಯ ರಾತ್ರಿ ಚಂದ್ರ ಗ್ರಹಣ ಬಳಿಕ ದೇವಸ್ಥಾನ ಶುಚಿ ಮಾಡಲಿದ್ದಾರೆ ಎಂದು ದೇವಸ್ಥಾನದ ಪ್ರದಾನ ಆಗಮಿಕ ಕರವೀರಸ್ವಾಮಿ ಮಾಹಿತಿ ನೀಡಿದ್ದಾರೆ.

ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ
ಭಾರತದಲ್ಲಿ ಚಂದ್ರ ಗ್ರಹಣ ಮಧ್ಯರಾತ್ರಿ 11:31 ಕ್ಕೆ ಪ್ರಾರಂಭವಾಗಿ ಭಾನುವಾರ ಮುಂಜಾನೆ 3:36ಕ್ಕೆ ಕೊನೆಗೊಳ್ಳುತ್ತದೆ. ಈ ಹಿನ್ನೆಲೆ ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲೂ ಸಂಜೆಯ ನಂತರ ದೇವರ ದರ್ಶಕ್ಕೆ ಅವಕಾಶ ಇಲ್ಲ ಎಂದು ದೇವಾಲಯದ ಸಮಿತಿ ತಿಳಿಸಿದೆ.
ಭಾರತ ಸೇರಿದಂತೆ ಯುರೋಪ್, ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಉತ್ತರ ಅಮೆರಿಕ, ಉತ್ತರ ಅಮೆರಿಕ, ಉತ್ತರ/ಪೂರ್ವ ದಕ್ಷಿಣ ಅಮೆರಿಕಾ, ಪೆಸಿಫಿಕ್, ಅಟ್ಲಾಂಟಿಕ್, ಹಿಂದೂ ಮಹಾಸಾಗರ, ಆರ್ಕ್ಟಿಕ್ ಮತ್ತು ಅಂಟಾರ್ಕ್ಟಿಕಾದ ಕೆಲವು ಭಾಗಗಳಲ್ಲಿಯೂ ಚಂದ್ರಗ್ರಹಣ ಗೋಚರಿಸುತ್ತದೆ. ರಾಜ್ಯದ ಹಲವು ಪ್ರಮುಖ ದೇಗುಲಗಳಲ್ಲಿ ಸಂಜೆಯಿಂದ ದೇವರ ದರ್ಶನ ವ್ಯವಸ್ಥೆ ನಿಲ್ಲಿಸಲಾಗಿದೆ. ಹಾಗೆಯೇ ಮೈಸೂರಿನ ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಇಂದು ಸಂಜೆ 6 ಗಂಟೆಯ ನಂತರ ಭಕ್ತಾದಿಗಳಿಗೆ ದರ್ಶನ ವ್ಯವಸ್ಥೆ ಇರುವುದಿಲ್ಲ.
ಶನಿವಾರ ಸಂಜೆ ಮಾತ್ರ ದರ್ಶನ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 29ರ ಭಾನುವಾರ ಬೆಳಗ್ಗೆ 7:30ರಿಂದ ಮತ್ತೆ ದೇವರ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಕಾರ್ಯಾಲಯವು ಪ್ರಕಟಣೆ ಹೊರಡಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications