ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ
ಕೊಳ್ಳೇಗಾಲ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 23 ರಿಂದ 27ರವರೆಗೆ ಮಹಾಶಿವರಾತ್ರಿ ಹಾಗೂ ಮಾರ್ಚ್ 25 ರಿಂದ 29ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ.
ಚಾಮರಾಜನಗರ, ಫೆಬ್ರವರಿ 20: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಮಲೆಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 23 ರಿಂದ 27ರವರೆಗೆ ಮಹಾಶಿವರಾತ್ರಿ ಹಾಗೂ ಮಾರ್ಚ್ 25 ರಿಂದ 29ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇಗುಲದ ಮಂಡಳಿ ಪ್ರಕಟಿಸಿದೆ.
ಫೆಬ್ರವರಿ 23ರಂದು ಮಹಾಶಿವರಾತ್ರಿ ಜಾತ್ರೆ ಮಹೋತ್ಸವ ಆರಂಭಗೊಳ್ಳಲಿದೆ. ಫೆ. 24ರಂದು ಶ್ರೀಸ್ವಾಮಿಗೆ ಎಣ್ಣೆಮಜ್ಜನ, ವಿಶೇಷ ಸೇವೆ ಉತ್ಸವ ಹಾಗೂ ಜಾಗರಣೆ ಉತ್ಸವ, [ಶಿವರಾತ್ರಿ ದೆಸೆ : ಮೂರು ದಿನ ಬ್ಯಾಂಕುಗಳಿಗೆ ರಜೆ]
* ಫೆ. 25ರಂದು ಶ್ರೀಸ್ವಾಮಿಗೆ ವಿಶೇಷ ಸೇವೆ ಮತ್ತು ಉತ್ಸವ,
* ಫೆ. 26ರಂದು ಅಮಾವಾಸ್ಯೆ ಉತ್ಸವಾದಿಗಳು ಜರುಗಲಿವೆ.
* ಫೆ. 27ರಂದು ಬೆಳಿಗ್ಗೆ 9.40 ರಿಂದ 10.30 ಗಂಟೆಯವರೆಗೆ ಮಹಾರಥೋತ್ಸವ ಜರುಗಲಿದೆ. ರಾತ್ರಿ ಅಭಿಷೇಕ ಪೂಜೆ ಕೈಂಕರ್ಯಗಳು ನೆರವೇರಿದ ಬಳಿಕ ಕೊಂಡೋತ್ಸವ ನಡೆಯಲಿದೆ.

ಯುಗಾದಿ ಜಾತ್ರೆ: ಮಾರ್ಚ್ 25ರಂದು ಯುಗಾದಿ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದೆ.
* ಮಾ. 26ರಂದು ಎಣ್ಣೆ ಮಜ್ಜನ ಹಾಗೂ ವಿಶೇಷ ಸೇವೆ,
* ಮಾ. 27ರಂದು ಶ್ರೀಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು,
* ಮಾ 28ರಂದು ಅಮಾವಾಸ್ಯೆ, ವಿಶೇಷ ಸೇವೆ ಉತ್ಸವಾದಿಗಳು ನಡೆಯಲಿವೆ.
* ಮಾ 29ರಂದು ಚಾಂದ್ರಮಾನ ಯುಗಾದಿ ಹಾಗೂ ಮಹಾರಥೋತ್ಸವವು ಬೆಳಿಗ್ಗೆ 10.30 ರಿಂದ 11.05 ಗಂಟೆಯವರೆಗೆ ನಡೆಯಲಿದೆ.
ವಿಶೇಷ ಸೇವೆ, ಉತ್ಸವಗಳು ಸಾಲೂರು ಬೃಹನಠದ ಅಧ್ಯಕ್ಷರಾದ ಶ್ರೀ ಪಟ್ಟದ ಗುರುಸ್ವಾಮಿಗಳು ಹಾಗೂ ಪ್ರಣವ ಶ್ರೀ ಪಟ್ಟದ ಇಮ್ಮುಡಿ ಮಹದೇವಸ್ವಾಮಿಗಳ ನೇತೃತ್ವದಲ್ಲಿ ಜರುಗಲಿದೆ ಎಂದು ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications