ಮಾದಪ್ಪನ ರಥೋತ್ಸವಕ್ಕೆ ಕ್ಷಣಗಣನೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತ ಸಾಗರ
ಚಾಮರಾಜನಗರ, ಫೆಬ್ರವರಿ 27: ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಜಾತ್ರೆ ನಡೆಯುತ್ತಿದ್ದು, ಶಿವರಾತ್ರಿಗೆ ಆಗಮಿಸಿ ಮಾದಪ್ಪನ ದರ್ಶನ ಪಡೆದವರ ಪೈಕಿ ಕೆಲವರು ತಮ್ಮ ಊರುಗಳಿಗೆ ಹಿಂತಿರುಗಿದರೆ ಬಹುತೇಕ ಭಕ್ತರು ಕ್ಷೇತ್ರದಲ್ಲಿಯೇ ಉಳಿದುಕೊಂಡಿದ್ದು ಮಾ.1ರಂದು ನಡೆಯಲಿರುವ ರಥೋತ್ಸವ ಮುಗಿಸಿಕೊಂಡು ಹಿಂತಿರುಗಲಿದ್ದಾರೆ. ಹೀಗಾಗಿ ಶಿವರಾತ್ರಿ ಕಳೆದರೂ ಭಕ್ತರ ಎಲ್ಲೆಂದರಲ್ಲಿ ಕಂಡು ಬರುತ್ತಿದ್ದಾರೆ.
ಈಗಾಗಲೇ ಹಲವು ದಿನಗಳ ಹಿಂದೆಯೇ ಆಗಮಿಸಿರುವ ಭಕ್ತರು ಶಿವರಾತ್ರಿ ಜಾತ್ರೆಯನ್ನು ಮುಗಿಸಿಕೊಂಡೇ ಕ್ಷೇತ್ರದಿಂದ ಹೋಗುವುದು ಹಿಂದಿನಿಂದಲೂ ನಡೆದು ಬಂದಿದೆ ಅದರಂತೆ ಜಾತ್ರೆಗೆ ಮುನ್ನ ಪಾದಯಾತ್ರೆ ಮೂಲಕ ಆಗಮಿಸಿರುವ ಭಕ್ತರು ಇಲ್ಲಿ ವಾಸ್ತವ್ಯ ಹೂಡಿದ್ದು ಮಾದಪ್ಪನ ಸ್ಮರಣೆಯಲ್ಲಿ ನಿರತರಾಗಿದ್ದಾರೆ. ಪ್ರತಿವರ್ಷವೂ ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಹಿನ್ನಲೆಯಲ್ಲಿ ಐದು ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಪ್ರತಿ ದಿನವೂ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿದ್ದು ಮಾ.1ರಂದು ರಥೋತ್ಸವ ನಡೆಯಲಿದೆ.

ಜಾತ್ರೆಗೆ ಮಾದಪ್ಪನ ಭಕ್ತರು ಚಾಮರಾಜನಗರ ಜಿಲ್ಲೆಯಲ್ಲದೇ ಹೊರ ಜಿಲ್ಲೆಗಳ ಕನಕಪುರ, ರಾಮನಗರ, ಬಿಡದಿ, ಚೆನ್ನಪಟ್ಟಣ, ಮಂಡ್ಯ, ಮದ್ದೂರು, ಮಳವಳ್ಳಿ, ನಂಜನಗೂಡು, ಮೈಸೂರು ಸೇರಿದಂತೆ ಹೊರ ರಾಜ್ಯಗಳಿಂದಲೂ ಬರುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅದರಲ್ಲೂ ತಮಿಳುನಾಡಿನಲ್ಲಿ ಮಾದಪ್ಪನಿಗೆ ಲಕ್ಷಾಂತರ ಭಕ್ತರಿದ್ದು ಅವರೆಲ್ಲರೂ ಶಿವರಾತ್ರಿ ಜಾತ್ರೆಗೆ ತಪ್ಪದೆ ಆಗಮಿಸಿ ಮಾದಪ್ಪನ ದರ್ಶನ ಮಾಡಿಕೊಂಡು ಹರಕೆ ಸಲ್ಲಿಸಿ ಹಿಂತಿರುಗುತ್ತಾರೆ. ಇವರೆಲ್ಲರೂ ಜಾತ್ರೆಯಲ್ಲಿ ಭಕ್ತಿಭಾವದಿಂದ ಪಾಲ್ಗೊಂಡು ಮಾದಪ್ಪನ ಕೃಪೆಗೆ ಪಾತ್ರರಾಗುತ್ತಾರೆ.
ಈಗಾಗಲೇ ಮಹದೇಶ್ವರ ಬೆಟ್ಟದಲ್ಲಿ ಬೀಡುಬಿಟ್ಟಿರುವ ಸಾವಿರಾರು ಭಕ್ತರು ಬೆಳ್ಳಿ ತೇರು, ಹುಲಿ, ರುದ್ರಾಕ್ಷಿ ಹಾಗೂ ಬಸವ ವಾಹನವನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿಸಿ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೇ ಹರಕೆ ಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನ ಸೇವೆ, ರಜಾ ಹೊಡೆಯುವ ಸೇವೆಗಳನ್ನು ನೆರವೇರಿಸಿದ್ದಾರೆ. ಪ್ರತಿದಿನವೂ ಸರತಿ ಸಾಲಿನಲ್ಲಿ ನಿಂತು ಉಘೆ ಮಾದಪ್ಪ ಎಂಬ ಘೋಷ ಮೊಳಗಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಮಾ.1ರಂದು ನಡೆಯುವ ಮಹಾರಥೋತ್ಸವದಲ್ಲಿ ಪಾಲ್ಗೊಂಡು ಆ ನಂತರ ತಮ್ಮ ಊರುಗಳಿಗೆ ತೆರಳಲಿದ್ದಾರೆ. ಭಕ್ತರಿಗೆ ಪ್ರಾಧಿಕಾರದ ವತಿಯಿಂದ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ದೇವಸ್ಥಾನದ ಮುಂಭಾಗ ಹಾಕಿರುವ ಶಾಮಿಯಾನದ ಬಳಿ, ರಂಗಮಂದಿರ ಸೇರಿದಂತೆ ಇತರೆ ಕಡೆಗಳಲ್ಲಿ ವಾಸ್ತವ್ಯ ಹೂಡಿದ್ದು ಎಲ್ಲೆಲ್ಲೂ ಭಕ್ತ ಸಾಗರ ತುಂಬಿ ತುಳುಕುತ್ತಿದ್ದಾರೆ. ಈಗಾಗಲೇ ಶಿವರಾತ್ರಿ ಪ್ರಯುಕ್ತ ಬೆಟ್ಟದಲ್ಲಿ ತಂಗಿರುವ ಲಕ್ಷಾಂತರ ಭಕ್ತರು ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ.

ಇನ್ನು ಭಕ್ತರಿಗೆ ಪ್ರಾಧಿಕಾರದ ವತಿಯಿಂದ ದಾಸೋಹ ವ್ಯವಸ್ಥೆ, ಕುಡಿಯುವ ನೀರು, ನೆರಳು, ದೇವರ ದರ್ಶನ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತದರೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಾದಪ್ಪನ ಸನ್ನಿಧಿ ವಿದ್ಯುತ್ ದೀಪಲಂಕಾರಗಳಿಂದ ಕಂಗೊಳಿಸುತ್ತಿದೆ. ವಿವಿಧ ಹೂವುಗಳು, ಹಣ್ಣುಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿದೆ.
ಮಾದಪ್ಪನಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಅಭಿಷೇಕ ನೆರವೇರಿತು. ದೇವರಿಗೆ ಮಂಗಳಾರತಿ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಒಟ್ಟಾರೆ ಶಿವರಾತ್ರಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಪಾಲ್ಗೊಂಡಿದ್ದು, ಕ್ಷೇತ್ರದಲ್ಲಿ ಬೀಡು ಬಿಟ್ಟು ಮಾದಪ್ಪನ ಸ್ಮರಣೆಯಲ್ಲಿ ಕಾಲ ಕಳೆಯುತ್ತಿರುವುದು ಕಂಡು ಬರುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications