ಶಿವರಾತ್ರಿಗೆ ಮಹದೇಶ್ವರಬೆಟ್ಟದತ್ತ ಹೊರಟ ಪಾದಯಾತ್ರಿಗಳು
ಚಾಮರಾಜನಗರ, ಮಾರ್ಚ್ 03: ಪವಾಡ ಪುರುಷ ನೆಲೆನಿಂತ ಮಹದೇಶ್ವರ ಬೆಟ್ಟವು ಮಹಾಶಿವರಾತ್ರಿ ಜಾತ್ರಾ ಸಂಭ್ರಮಕ್ಕೆ ಅಣಿಯಾಗುತ್ತಿದ್ದು, ಭಕ್ತರು ಇಲ್ಲಿಗೆ ಪಾದಯಾತ್ರೆ ಮೂಲಕ ಬರತೊಡಗಿದ್ದಾರೆ. ಪ್ರತಿ ವರ್ಷವೂ ಶಿವರಾತ್ರಿ ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಬರುತ್ತಾರೆ.
ಇವರ ಪೈಕಿ ಹೆಚ್ಚಿನವರು ಹರಕೆ ಮಾಡಿಕೊಂಡು ಬರಿಗಾಲಿನಲ್ಲಿಯೇ ಪಾದಯಾತ್ರೆ ಮಾಡಿಕೊಂಡು ಬರುತ್ತಿರುವವರೇ ಜಾಸ್ತಿಯಾಗಿದ್ದಾರೆ. ಮೊದಲೆಲ್ಲ ದೂರದ ಊರುಗಳಿಂದ ಪಾದಯಾತ್ರೆ ಮಾಡಿಕೊಂಡು ಬರುವ ಭಕ್ತರಿಗೆ ದಾರಿಯುದ್ದಕ್ಕೂ ಜನ ಪ್ರಸಾದ, ಪಾನೀಯ ನೀಡುತ್ತಿದ್ದರು.
ಆದರೆ ಕಳೆದ ಡಿಸೆಂಬರ್ 14 ರಲ್ಲಿ ಹನೂರು ತಾಲೂಕಿನ ಸುಳ್ವಾಡಿ ಕಿಚ್ಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ದುರಂತದ ಬಳಿಕ ಅಧಿಕಾರಿಗಳು ಪ್ರಸಾದ ನೀಡಲು ಅನುವು ಮಾಡಿಕೊಡುತ್ತಿಲ್ಲ. ಹೀಗಾಗಿ ಭಕ್ತರಿಗೆ ಹೊಟ್ಟೆ ಹಸಿದರೂ ಸೇವಿಸಲು ಯಾವುದೇ ಆಹಾರ ಸಿಗದಂತಾಗಿದೆ.
ಇದನ್ನು ಮನಗಂಡು ರಾಜ್ಯವಲ್ಲದೆ, ಹೊರ ರಾಜ್ಯಗಳಿಂದ ಬರುವ ಭಕ್ತರಿಗೆ ಮಾರ್ಗಮಧ್ಯೆ ಕುಡಿಯಲು ನೀರು, ಹಣ್ಣುಗಳನ್ನು ಉಚಿತವಾಗಿ ನೀಡಿ ಭಕ್ತರ ಆಯಾಸವನ್ನು ನೀಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇನ್ನು ಮಹದೇಶ್ವರ ಬೆಟ್ಟಕ್ಕೆ ಹಿಂದಿನಿಂದಲೂ ರಾಮನಗರ ಜಿಲ್ಲೆಯ ಕನಕಪುರ ಮತ್ತು ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಾಗಿ ಆಗಮಿಸುತ್ತಾರೆ.

ಹರಿಯುತ್ತಿರುವ ಹೆಚ್ಚುವರಿ ನೀರು
ಭಕ್ತರು ಹಗಲು ರಾತ್ರಿ ಎನ್ನದೆ ಕಾಡು ಮೇಡು ಲೆಕ್ಕಿಸದೆ ಮಹದೇಶ್ವರನ ನೆನೆಯುತ್ತಾ ಕಾವೇರಿ ನದಿ ಸಂಗಮವನ್ನು ದಾಟಿಕೊಂಡು ಬರುವುದು ಪವಾಡ ಪುರುಷನ ಪವಾಡವೇ ಆಗಿದೆ. ಈ ಬಾರಿ ನದಿಯಲ್ಲಿ ಹೆಚ್ಚುವರಿ ನೀರು ಹರಿಯುತ್ತಿರುವುದರಿಂದ ಭಕ್ತರಿಗೆ ತೊಂದರೆಯಾಗಿದೆ ಎನ್ನಲಾಗಿದೆ.

ಪಾದಯಾತ್ರಿಗಳೇ ಸಂಖ್ಯೆ ಹೆಚ್ಚು
ಮಹಾಶಿವರಾತ್ರಿಯಂದು ಪಾದಯಾತ್ರೆ ಮೂಲಕ ಮಹದೇಶ್ವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ಪ್ರತೀತಿ ಇರುವ ಕಾರಣ ವರ್ಷದಿಂದ ವರ್ಷಕ್ಕೆ ಪಾದಯಾತ್ರಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಈ ವ್ಯಾಪ್ತಿಯಲ್ಲಿ ಎಲ್ಲಿ ನೋಡಿದರಲ್ಲಿ ಪಾದಯಾತ್ರಿಗಳೇ ಕಂಡು ಬರುತ್ತಿದೆ.

ಹದ್ದಿನ ಕಣ್ಣಿಡಲು ಪೊಲೀಸರಿಗೆ ಸೂಚನೆ
ಬೆಟ್ಟದ ಆವರಣದಲ್ಲಿ ಹಾಗೂ ಆಸು ಪಾಸು ಮದ್ಯಪಾನ ಮತ್ತು ಧೂಮಪಾನವನ್ನು ನಿಷೇಧ ಮಾಡಲಾಗಿದ್ದು, ಮದ್ಯ ಸಾಗಾಣಿಕೆ ಮತ್ತು ಮಾರಾಟ ಮಾಡುವವರ ಮೇಲೆ ಹದ್ದಿನ ಕಣ್ಣು ಇಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಖಾಸಗಿ ಬಸ್ಗಳ ಸಂಚಾರಕ್ಕೆ ತಡೆ
ಜಾತ್ರಾ ವೇಳೆ ಯಾವುದೇ ರೀತಿಯಲ್ಲೂ ಭಕ್ತರಿಗೆ ಕೊರತೆ ಬಾರದಂತೆ ಹಾಗೂ ತೊಂದರೆಯಾದಂತೆ ಜಿಲ್ಲೆಯಾದ್ಯಂತ ಸುಮಾರು 350 ಕೆ.ಎಸ್.ಆರ್.ಟಿ.ಸಿ ಬಸ್ಗಳ ಸೌಲಭ್ಯ ಮಾಡಲಾಗಿದೆ. ಆದರೆ ಖಾಸಗಿ ಬಸ್ಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದು, ಬೆಟ್ಟದ ಮಾರ್ಗಕ್ಕೆ ಆರ್.ಟಿ.ಓ ಪರವಾನಗಿ ಪಡೆದಿರುವ ಬಸ್ಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications