ಸರಕಾರಿ ಗೌರವದೊಂದಿಗೆ ಮಹದೇವ ಪ್ರಸಾದ್ ಅಂತ್ಯಕ್ರಿಯೆ
ಚಾಮರಾಜನಗರ, ಜನವರಿ 4: ಸಹಕಾರಿ, ಸಕ್ಕರೆ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಗುಂಡ್ಲುಪೇಟೆಯ, ಹಾಲಹಳ್ಳಿಯಲ್ಲಿರುವ ಫಾರ್ಮ್ ಹೌಸಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಬುಧವಾರ ಬೆಳಗ್ಗೆಯಿಂದಲೇ ಅನೇಕ ಮಂದಿ ಮಹದೇವ ಪ್ರಸಾದ್ ಅವರ ಅಂತಿಮ ದರ್ಶನ ಪಡೆದಿದ್ದು, ಪಾರ್ಥೀವ ಶರೀರಕ್ಕೆ ವೀರಶೈವ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನವನ್ನು ಪುತ್ರ ಗಣೇಶ್ ಪ್ರಸಾದ್ ನೆರವೇರಿಸಿದರು. ಸರಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿ ಮೂರು ಸುತ್ತು ಕುಶಾಲ ತೋಪು ಹಾರಿಸಲಾಯಿತು.
ಮೊದಲೇ ನಿಶ್ಚಯಿಸಿದಂತೆ ಅವರ ತಂದೆ ತಾಯಿಯ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಬೆಂಬಲಿಗರು, ಕಾರ್ಯಕರ್ತರು ಹಾಜರಿದ್ದರು.[ಮಹದೇವಪ್ರಸಾದ್ ಮೈಸೂರು ನಿವಾಸದಲ್ಲಿ ಮಡುಗಟ್ಟಿದ ಶೋಕ]

ಸೋಮವಾರವೇ ಚಿಕ್ಕಮಗಳೂರಿನ ಸಮೀಪ ಕೊಪ್ಪದ ಸಹಕಾರಿ ಕಾರ್ಯಕ್ರಮಕ್ಕೆಂದು ಮಹದೇವ ಪ್ರಸಾದ್ ಆಗಮಿಸಿ, ಚಿಕ್ಕಮಗಳೂರಿನ ಸಮೀಪ ಸೆರಾಯಿ ರೆಸಾರ್ಟಿನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಮುಂಜಾನೆ 5:30 ಸಮಯದಲ್ಲಿ ರೆಸಾರ್ಟಿನ ಕೊಠಡಿಯಲ್ಲಿ ಹೃದಯಾಘಾತದಿಮದ ವಿಧಿವಶರಾಗಿದ್ದರು.

ನಂತರ ಅವರ ಪಾರ್ಥೀವ ಶರೀರವನ್ನು ಮಧ್ಯಾಹ್ನ 3ಗಂಟೆ ಸುಮಾರಿಗೆ ಮೈಸೂರು ನಿವಾಸಕ್ಕೆ ತರಲಾಗಿತ್ತು. ಅಲ್ಲಿ ರಾಜಕೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.[ಹುಟ್ಟೂರು ಹಾಲಹಳ್ಳಿಯಲ್ಲಿ ಮಹದೇವಪ್ರಸಾದ್ ಅಂತ್ಯಕ್ರಿಯೆ]

ಮಂಗಳವಾರ ಸಂಜೆಯೇ ಪಾರ್ಥಿವ ಶರೀರವನ್ನು ಚಾಮರಾಜನಗರದ ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ಇಡಲಾಗಿತ್ತು. ಅನೇಕ ಬೆಂಬಲಿಗರು, ಕಾರ್ಯಕರ್ತರು ಅಂತಿಮ ದರ್ಶನ ಪಡೆದರು. ಅಲ್ಲಿಂದ ಮಹದೇವ ಪ್ರಸಾದ್ ಸ್ವಗ್ರಾಮ ಹಾಲಹಳ್ಳಿಗೆ ಪಾರ್ಥೀವ ಶರೀರವನ್ನು ಅವರ ಮನೆಯ ಬಳಿ ಸಾರ್ವತ್ರಿಕ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications