ಬಂಡೀಪುರದಲ್ಲಿ ರೈಲು ಕಂಬಿಗೆ ಸಿಲುಕಿ ಗಂಡಾನೆ ಸಾವು
ಚಾಮರಾಜನಗರ, ನವೆಂಬರ್ 04: ಅರಣ್ಯದಿಂದ ಕಾಡಾನೆಗಳು ನಾಡಿಗೆ ಬರದಂತೆ ಅಡ್ಡಲಾಗಿ ಹಾಕಿದ ರೈಲ್ವೆ ಕಂಬಿಯೇ ಗಂಡಾನೆಯ ಜೀವಕ್ಕೆ ಕುತ್ತು ತಂದ ಘಟನೆ ಬಂಡೀಪುರ ಅಭಯಾರಣ್ಯದ ಮೊಳೆಯೂರು ವಲಯ ನಡಹಾಡಿಯ ವ್ಯಾಪ್ತಿಯಲ್ಲಿ ನಡೆದಿದೆ.
ಬಂಡೀಪುರ ಅಭಯಾರಣ್ಯದ ಮೊಳೆಯೂರು ವಲಯ ನಡಹಾಡಿಯ ಸಮೀಪದ ಅರಣ್ಯದಿಂದ ಆನೆಗಳು ಹೊರಬರದಂತೆ ರೈಲ್ವೆ ಕಂಬಿಯನ್ನು ಅಳವಡಿಸಲಾಗಿದೆ. ಇದರಿಂದ ಕಾಡಿನಿಂದ ನಾಡಿಗೆ ಬಂದು ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಹಾನಿಮಾಡುವುದು ತಪ್ಪಿತ್ತು. ಆದರೂ ಬಹಳಷ್ಟು ಕಾಡಾನೆಗಳು ಕಂಬಿಯನ್ನು ನುಸುಳಿ ಬರುವ ವಿಫಲ ಯತ್ನ ಮಾಡಿರುವ ಘಟನೆಗಳು ನಡೆದಿತ್ತು. ಆದರೆ ಇದೀಗ ಈ ಕಂಬಿಯನ್ನು ನುಸುಳಿ ಅರಣ್ಯದಿಂದ ಹೊರಹೋಗಲು ಪ್ರಯತ್ನ ಪಟ್ಟ ಗಂಡಾನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಸೋಮವಾರ ರಾತ್ರಿ ಗಂಡಾನೆ ನಡಹಾಡಿಯ ಸಮೀಪದ ಅರಣ್ಯದಿಂದ ಹೊರ ಬರಲು ಪ್ರಯತ್ನ ನಡೆಸಿ ರೈಲ್ವೆ ಕಂಬಿಯ ಸುತ್ತಲೂ ಓಡಾಡಿದೆ. ಅಲ್ಲದೆ ಕಂಬಿ ನಡುವೆ ಸೊಂಡಿಲು ಹೊರ ಹಾಕಿ ದಾಟುವ ಪ್ರಯತ್ನ ಮಾಡಿದ್ದು ಈ ವೇಳೆ ಬಹುಶಃ ಜಾರಿ ಬಿದ್ದು ಕೋರೆ ಮತ್ತು ಸೊಂಡಿಲು ಕಂಬಿಗೆ ಸಿಲುಕಿದ್ದರಿಂದ ಮೇಲೇಳಲು ಸಾಧ್ಯವಾಗದೆ ಉಸಿರುಕಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದೆ.
Recommended Video

ಮಂಗಳವಾರ ಎಂದಿನಂತೆ ಬೆಳಿಗ್ಗೆ ಅರಣ್ಯ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಕಂಬಿಗೆ ಸಿಲುಕಿ ಕಾಡಾನೆ ಸಾವನ್ನಪ್ಪಿರುವುದು ಗೋಚರಿಸಿದೆ. ಕೂಡಲೇ ಅವರು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹುಲಿ ಯೋಜನೆಯ ನಿರ್ದೇಶಕ ಎಸ್.ಆರ್.ನಟೇಶ್, ಎಸಿಎಫ್ ರವಿಕುಮಾರ್ ಭೇಟಿ ನೀಡಿ ಮಹಜರು ನಡೆಸಿದ್ದು, ಪಶುವೈದ್ಯ ಡಾ.ನಾಗರಾಜು ಅವರು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ಮಾಡಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications