ಚಾಮರಾಜನಗರ: ಮಾದಪ್ಪನ ಭಕ್ತರ ಆಕ್ರೋಶಕ್ಕೆ ಒಳಗಾದ Rapper Star ಚಂದನ್ ಶೆಟ್ಟಿ!
ಚಾಮರಾಜನಗರ, ಆಗಸ್ಟ್ 25: ಈ ಹಿಂದೆ ಮೈಸೂರು ದಸರಾ ಯುವ ವೇದಿಕೆಯಲ್ಲಿ ತನ್ನ ಪ್ರೇಯಸಿ ನಿವೇದಿತಾ ಗೌಡ ಅವರಿಗೆ ರಿಂಗ್ ತೊಡಿಸಿ ಪ್ರೇಮ ನಿವೇದನೆ ಮಾಡುವ ಮೂಲಕ ವಿವಾದ ಸೃಷ್ಟಿಸಿಕೊಂಡಿದ್ದ ಕನ್ನಡದ Rapper Star ಚಂದನ್ ಶೆಟ್ಟಿ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
Recommended Video
"ಕೋಲುಮಂಡೆ ಜಂಗಮದೇವಾ..." ಹಾಡನ್ನು ತನ್ನದೇ ಶೈಲಿಯಲ್ಲಿ ಹಾಡಿರುವ ಚಂದನ್ ಶೆಟ್ಟಿಯ ಹೊಸ ಹಾಡಿಗೆ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಕೋಲುಮಂಡೆ... ಹಾಡನ್ನು ಅಶ್ಲೀಲವಾಗಿ ಚಿತ್ರೀಕರಿಸಿ, ಮಾದಪ್ಪನ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ಮಲೈಮಹದೇಶ್ವರ ಸ್ವಾಮಿಯ ಇತಿಹಾಸವನ್ನೇ ತಿರುಚಿ ಹಾಡು ರಚಿಸಿರುವ ಆರೋಪ ಕೇಳಿ ಬಂದಿದ್ದು, ಹಳೆ ಮೈಸೂರು ಮತ್ತು ಚಾಮರಾಜನಗರ ಭಾಗದ ಜನರು ಚಂದನ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸವನ್ನು ತಿರುಚಿ ಹಾಡು ಚಿತ್ರಿಕರಿಸಲಾಗಿದ್ದು, ಶರಣೆ ಸಂಕಮ್ಮನವರನ್ನು ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ. ಆ ಮೂಲಕ ಶರಣೆ ಸಂಕಮ್ಮನವರನ್ನು ಅವಮಾನಿಸಲಾಗಿದೆ. ಹಳೆಯ ಜಾನಪದ ಹಾಡೊಂದನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ವಿಕೃತಿ ಮೆರೆದಿದ್ದಾರೆ ಎಂದು ಸಾಮಾಜಿಕ ಜಾಲತಣಗಳಲ್ಲಿ ಚಂದನ್ ಶೆಟ್ಟಿ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಈ ಕೂಡಲೇ ಚಂದನ್ ಶೆಟ್ಟಿ ಹಾಡಿರುವ "ಕೋಲುಮಂಡೆ' ಹಾಡನ್ನು ಯೂಟ್ಯೂಬ್ ನಿಂದ ತೆಗೆಯಬೇಕು. ಇಲ್ಲವಾದಲ್ಲಿ ಚಂದನ್ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಅವರ ಕಾರ್ಯಕ್ರಮ ಬಹಿಷ್ಕರಿಸಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications