ಕೋಟ್ಯಾಧಿಪತಿಯಾಗಿ ಮುನ್ನಡೆಯುತ್ತಿರುವ ಮಲೆಮಹದೇಶ್ವರ
ಚಾಮರಾಜನಗರ, ಮೇ 02: ಕಳೆದ ಕೆಲವು ತಿಂಗಳಿನಿಂದ ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಹುಂಡಿಗೆ ಬೀಳುವ ಕಾಣಿಕೆ ಕೋಟಿ ರೂಪಾಯಿಗಳಲ್ಲಿದೆ. ಹೀಗಾಗಿ ಮಲೆಮಹದೇಶ್ವರ ಕೋಟ್ಯಾಧಿಪತಿಯಾಗಿಯೇ ಮುಂದುವರೆಯುತ್ತಿದ್ದು, ತಿಂಗಳಿನಿಂದ ತಿಂಗಳಿಗೆ ಭಕ್ತರು ಹಾಕುತ್ತಿರುವ ಕಾಣಿಕೆ ಪ್ರಮಾಣವೂ ಹೆಚ್ಚಾಗುತ್ತಿದೆ.
ಇದೀಗ ಒಂದು ತಿಂಗಳ ಹುಂಡಿಯ ಕಾಣಿಕೆ ಹಣವನ್ನು ಎಣಿಕೆ ಮಾಡಲಾಗಿದ್ದು, ಭಕ್ತರು ಒಂದು ತಿಂಗಳಲ್ಲಿ ಚಿನ್ನ ಮತ್ತು ಬೆಳ್ಳಿ ಪದಾರ್ಥಗಳು ಸೇರಿದಂತೆ ಒಟ್ಟು 1 ಕೋಟಿ 93 ಲಕ್ಷ 73 ಸಾವಿರ 279 ರೂಪಾಯಿಗಳು ಕಾಣಿಕೆ ರೂಪದಲ್ಲಿ ಹಾಕಿರುವುದು ಕಂಡು ಬಂದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಏಪ್ರಿಲ್ ತಿಂಗಳಲ್ಲಿ ದೇಶದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ಮಹದೇಶ್ವರ ದರ್ಶನ ಪಡೆದ ಬಳಿಕ ಭಕ್ತಿಪೂರ್ವಕವಾಗಿ ಕಾಣಿಕೆಯನ್ನು ಅರ್ಪಿಸಿದ್ದರು.

ಇದರ ಎಣಿಕೆ ಕಾರ್ಯವನ್ನು ಮಲೆ ಮಹದೆಶ್ವರ ಬೆಟ್ಟದ ದೇವಾಲಯದಲ್ಲಿ ಭಾರಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಮಲೆ ಮಹದೇಶ್ವರ ದೇವಸ್ಥಾನಗಳ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ.ಗಾಯತ್ರಿ ನೇತೃತ್ವದಲ್ಲಿ ಮಾಡಲಾಯಿತು.
ಈ ವೇಳೆ 1,93,73,279 ರೂಪಾಯಿಗಳು ದೊರೆತಿದೆ ಇದರ ಜೊತೆಗೆ 105 ಗ್ರಾಂ ಚಿನ್ನ ಮತ್ತು 2 ಕೆಜಿ 416 ಗ್ರಾಂ ಬೆಳ್ಳಿ ಪದಾರ್ಥಗಳು ಕಾಣಿಕೆ ಹುಂಡಿಯಲ್ಲಿ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿ, ಉಪ ಕಾರ್ಯದರ್ಶಿ ರಾಜಶೇಖರಮೂರ್ತಿ, ಅಧೀಕ್ಷಕ ಎಂ.ಬಸವರಾಜು, ಲೆಕ್ಕಾಧೀಕ್ಷಕ ಮಹದೇವಸ್ವಾಮಿ, ಆರೋಗ್ಯ ನಿರೀಕ್ಷಕ ಶ್ರೀಕಾಂತ್ ವಿಭೂತಿ ಹಾಗೂ ದೇವಸ್ಥಾನದ ನೌಕರರು, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ ಆರಕ್ಷಕ ಸಿಬ್ಬಂದಿ ವರ್ಗ, ಎಸ್ಬಿಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications