Male mahadeshwara temple: 2023ರಲ್ಲಿ ಮಲೆ ಮಾದಪ್ಪನ ಆದಾಯ ಎಷ್ಟು ಕೋಟಿ ಗೊತ್ತಾ?-ಅಂಕಿಅಂಶಗಳ ವಿವರ ತಿಳಿಯಿರಿ
ಚಾಮರಾಜನಗರ, ಡಿಸೆಂಬರ್, 20: ಕರ್ನಾಟಕದ ಪ್ರಮುಖ ಯಾತ್ರಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ 2023ರಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
2023 ಅಂತ್ಯಕ್ಕೆ ಬಂದಿರುವ ಹೊತ್ತಿನಲ್ಲಿ ಈ ವರ್ಷದ ಆದಾಯದ ಲೆಕ್ಕವನ್ನು ಪ್ರಾಧಿಕಾರವು ನೀಡಿದ್ದು, ಜನವರಿಯಿಂದ ಡಿಸೆಂಬರ್ವರೆಗೂ ನಡೆದ ಒಟ್ಟು ಹುಂಡಿ ಎಣಿಕೆಯಲ್ಲಿ 26,18,28,295 ರೂಪಾಯಿ ಸಂಗ್ರಹವಾಗಿದ್ದು, 798 ಗ್ರಾಂ ಚಿನ್ನ, 27 ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಭಕ್ತರು ಈ ವರ್ಷ ಮಾದಪ್ಪನಿಗೆ ಸಲ್ಲಿಸಿದ್ದಾರೆ.

ಕ್ಷೇತ್ರದಲ್ಲಿ ಜನಪ್ರಿಯ ಉತ್ಸವಗಳಲ್ಲಿ ಒಂದಾದ ಚಿನ್ನದ ರಥೋತ್ಸವ ಮೂಲಕ 16,27,74,240 ರೂಪಾಯಿ ಬಂದಿದ್ದು, ಬೆಳ್ಳಿ ರಥೋತ್ಸವದ ಮೂಲಕ 6 ತಿಂಗಳಲ್ಲಿ 14 ಲಕ್ಷ ಬಂದಿದೆ. ಲಾಡು ಮಾರಾಟದಿಂದಲೇ 15 ಕೋಟಿ ಆದಾಯ ಕ್ಷೇತ್ರಕ್ಕೆ ಹರಿದು ಬಂದಿರುವುದು ಬೆಟ್ಟಕ್ಕೆ 2023ರಲ್ಲಿ ಬಂದಿರುವ ಭಕ್ತ ಸಾಗರಕ್ಕೆ ಸಾಕ್ಷಿಯಾಗಿದೆ.
50 ಲಕ್ಷಕ್ಕೂ ಅಧಿಕ ಮಂದಿ ಭೇಟಿ: ಮಲೆ ಮಹದೇಶ್ವರ ಬೆಟ್ಟಕ್ಕೆ 2023ರಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದಾರೆ ಎಂದು ಪ್ರಾಧಿಕಾರ ಅಂದಾಜಿಸಿದೆ. ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳುಗಳಲ್ಲಿ 8-9 ಲಕ್ಷದಷ್ಟು ಮಂದಿ ಭಕ್ತರು ಭೇಟಿ ಕೊಟ್ಟಿದ್ದು, ಶಕ್ತಿ ಯೋಜನೆಯೂ ಒಂದು ಕಾರಣವಾಗಿದೆ. ಹುಂಡಿ ಎಣಿಕೆ, ಉತ್ಸವ, ಲಾಡು ಮಾರಾಟದಿಂದ ಪ್ರಾಧಿಕಾರಕ್ಕೆ 2023ರಲ್ಲಿ 63,38,02,804 ರೂಪಾಯಿ ಆದಾಯ ಬಂದಿದ್ದು, ಮಲೆ ಮಾದಪ್ಪ ವರ್ಷದಿಂದ ವರ್ಷಕ್ಕೆ ಶ್ರೀಮಂತನಾಗುತ್ತಿದ್ದಾನೆ.
ಮಲೆ ಮಾದಪ್ಪನಿಗೆ 1.38 ಕೋಟಿ ಆದಾಯ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಡೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆಯ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಕೇವಲ ನಾಲ್ಕು ದಿನಗಳ ಅವಧಿಯಲ್ಲಿ 1.38 ಕೋಟಿ ಆದಾಯ ಹರಿದುಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎರಡನೇ ಶನಿವಾರ, ಭಾನುವಾರ, ಕೊನೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹುಲಿ ವಾಹನ, ರುದ್ರಾಕ್ಷಿ ವಾಹನ ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ 1,38,50,311 ರೂಪಾಯಿ ಆದಾಯ ಹರಿದುಬಂದಿದೆ.
ನಾಲ್ಕು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ 1,162 ಚಿನ್ನದ ರಥೋತ್ಸವ, 42 ಬೆಳ್ಳಿ ರಥೋತ್ಸವ, 555 ಬಸವ ವಾಹನ, 3,771 ಹುಲಿ ವಾಹನ, 234 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆ ಮೂಲಕ 49,63,203 ರೂಪಾಯಿ ಆದಾಯ ಬಂದಿದೆ. ಇನ್ನು ನವೆಂಬರ್ 20ರಿಂದ ಡಿಸೆಂಬರ್ 11ರವರೆಗೆ ನಡೆದ ಕಾರ್ತಿಕ ಮಾಸದ ವಿಶೇಷ ಪೂಜೆಗಳು ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಕಡೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ಪೂಜೆ ಹಿನ್ನೆಲೆ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದ ಹಿನ್ನೆಲೆ, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಲೆಮಾದೇಶ್ವರ ಬೆಟ್ಟದಲ್ಲಿ ಮೊಕ್ಕಂ ಹೂಡಿ ಭಕ್ತರಿಗೆ ಬೇಕಾದ ಕುಡಿಯುವ ನೀರು, ವಿಶೇಷ ದಾಸೋಹ, ನೆರಳಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿದ್ದರು.
ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಕಾರ್ತಿಕ ಮಾಸ ಪೂಜಾ ಮಹೋತ್ಸವ ಮುಗಿದಿದ್ದು, ಡಿಸೆಂಬರ್ 17ರಿಂದ ಧನುರ್ಮಾಸ ಪೂಜಾ ಪ್ರಾರಂಭ ಆಗುರುವುದರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಓಂ ಶಕ್ತಿ, ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಕಡೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಮುಂಜಾಗ್ರತ ಕ್ರಮವಾಗಿ ಕಲ್ಪಿಸಿದ್ದ ಹಿನ್ನೆಲೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆ ಪೂಜೆ ಯಶಸ್ವಿಯಾಗಿ ಜರುಗಿದೆ ಎಂದು "ಒನ್ ಇಂಡಿಯಾ ಕನ್ನಡ"ಕ್ಕೆ ತಿಳಿಸಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications