ಚಾಮರಾಜನಗರ: ಮಲೆಮಹದೇಶ್ವರನಿಗಿಲ್ಲ ಸೂರ್ಯ ಗ್ರಹಣದ ಸೂತಕ
ಚಾಮರಾಜನಗರ, ಜೂನ್, 21: ಭಾನುವಾರ ಸೂರ್ಯಗ್ರಹಣ ಹಾಗೂ ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತವಾಗಿ ಮಲೆಮಹದೇಶ್ವರಿನಿಗೆ ವಿಶೇಷ ಪೂಜೆ ಮಾಡಲಾಯಿತು. ಮಾದಪ್ಪನಿಗೆ ಸೂರ್ಯಗ್ರಹಣದ ಯಾವುದೇ ಪರಿಣಾಮ ಇಲ್ಲದೆ, ಎಂದಿನಂತೆ ಪೂಜಾ ಕಾರ್ಯ ನೆರವೇರಿಸಲಾಯಿತು.
Recommended Video
ಆದರೆ ಅಮಾವಾಸ್ಯೆ ದಿನಗಳಂದು ಹರಿದು ಬರುವ ಜನಸಾಗರಕ್ಕೆ ಚಾಮರಾಜನಗರ ಜಿಲ್ಲಾಡಳಿತವು ಬ್ರೇಕ್ ಹಾಕಿದ್ದು, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ.
ಭಾನುವಾರ ಸಂಜೆ 4 ಗಂಟೆಯ ನಂತರ ಸಾಂಪ್ರದಾಯಿಕ ಪೂಜೆ ಆರಂಭವಾಗಲಿದೆ. ಭಕ್ತರಿಗೆ ಪ್ರವೇಶ ನಿರ್ಬಂಧ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕಿನ ಮಲೆಮಹದೇಶ್ವರನ ದೇವಸ್ಥಾನ ಬಿಕೋ ಎನ್ನುತ್ತಿದೆ.

ಅದೇ ರೀತಿ ರಾಯಚೂರಿನ ಸೂಗುರೇಶ್ವರಿನಿಗೆ ಸೂರ್ಯಗ್ರಹಣದ ಎಫೆಕ್ಟ್ ತಾಕಲಿಲ್ಲ. ಗ್ರಹಣದ ಸಮಯದಲ್ಲೂ ತ್ರಿಕಾಲ ಪೂಜೆ ನಡೆಯಿತು. ರುದ್ರಾಭಿಷೇಕ, ಮಹಾ ಮಂಗಳಾರತಿ, ಬಿಲ್ವಾರ್ಚನೆ ಸೇರಿದಂತೆ ಇತರೆ ಪೂಜೆಗಳು ಇಲ್ಲಿ ನಡೆದವು.
ರಾಯಚೂರು ಜಿಲ್ಲೆಯ ದೇವಸೂಗುರು ಗ್ರಾಮದ ಪ್ರಸಿದ್ಧ ಸೂಗುರೇಶ್ವರ ದೇವಸ್ಥಾನದ ನಿರ್ಮಾಣದಲ್ಲಿ ವಿಶಿಷ್ಟತೆ ಇದ್ದು, ದೇವಸ್ಥಾನದಲ್ಲಿರುವ ಹಾಲುಗಂಬದಿಂದ ಗ್ರಹಣ ದೋಷ ನಿವಾರಣೆಯಾಗಲಿದೆ.
ದೇವಸ್ಥಾನ ಗೋಡೆ ನಿರ್ಮಾಣದಲ್ಲಿ ಸೂರ್ಯ, ಚಂದ್ರರನ್ನು ಕೆತ್ತನೆ ಮಾಡಲಾಗಿದ್ದು, ಇದರಿಂದ ಯಾವುದೇ ಗ್ರಹಣದ ಸಮಯದಲ್ಲಿ ದೋಷ ಕಂಡು ಬರುವುದಿಲ್ಲ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಸೂಗುರೇಶ್ವರ ದೇವಸ್ಥಾನಕ್ಕೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಭಕ್ತರು ಹರಿದು ಬರುತ್ತಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications