ಚಾಮರಾಜನಗರ: ಮಲೆಮಹದೇಶ್ವರನಿಗಿಲ್ಲ ಸೂರ್ಯ ಗ್ರಹಣದ ಸೂತಕ
ಚಾಮರಾಜನಗರ, ಜೂನ್, 21: ಭಾನುವಾರ ಸೂರ್ಯಗ್ರಹಣ ಹಾಗೂ ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತವಾಗಿ ಮಲೆಮಹದೇಶ್ವರಿನಿಗೆ ವಿಶೇಷ ಪೂಜೆ ಮಾಡಲಾಯಿತು. ಮಾದಪ್ಪನಿಗೆ ಸೂರ್ಯಗ್ರಹಣದ ಯಾವುದೇ ಪರಿಣಾಮ ಇಲ್ಲದೆ, ಎಂದಿನಂತೆ ಪೂಜಾ ಕಾರ್ಯ ನೆರವೇರಿಸಲಾಯಿತು.
Recommended Video
ಆದರೆ ಅಮಾವಾಸ್ಯೆ ದಿನಗಳಂದು ಹರಿದು ಬರುವ ಜನಸಾಗರಕ್ಕೆ ಚಾಮರಾಜನಗರ ಜಿಲ್ಲಾಡಳಿತವು ಬ್ರೇಕ್ ಹಾಕಿದ್ದು, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ.
ಭಾನುವಾರ ಸಂಜೆ 4 ಗಂಟೆಯ ನಂತರ ಸಾಂಪ್ರದಾಯಿಕ ಪೂಜೆ ಆರಂಭವಾಗಲಿದೆ. ಭಕ್ತರಿಗೆ ಪ್ರವೇಶ ನಿರ್ಬಂಧ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕಿನ ಮಲೆಮಹದೇಶ್ವರನ ದೇವಸ್ಥಾನ ಬಿಕೋ ಎನ್ನುತ್ತಿದೆ.

ಅದೇ ರೀತಿ ರಾಯಚೂರಿನ ಸೂಗುರೇಶ್ವರಿನಿಗೆ ಸೂರ್ಯಗ್ರಹಣದ ಎಫೆಕ್ಟ್ ತಾಕಲಿಲ್ಲ. ಗ್ರಹಣದ ಸಮಯದಲ್ಲೂ ತ್ರಿಕಾಲ ಪೂಜೆ ನಡೆಯಿತು. ರುದ್ರಾಭಿಷೇಕ, ಮಹಾ ಮಂಗಳಾರತಿ, ಬಿಲ್ವಾರ್ಚನೆ ಸೇರಿದಂತೆ ಇತರೆ ಪೂಜೆಗಳು ಇಲ್ಲಿ ನಡೆದವು.
ರಾಯಚೂರು ಜಿಲ್ಲೆಯ ದೇವಸೂಗುರು ಗ್ರಾಮದ ಪ್ರಸಿದ್ಧ ಸೂಗುರೇಶ್ವರ ದೇವಸ್ಥಾನದ ನಿರ್ಮಾಣದಲ್ಲಿ ವಿಶಿಷ್ಟತೆ ಇದ್ದು, ದೇವಸ್ಥಾನದಲ್ಲಿರುವ ಹಾಲುಗಂಬದಿಂದ ಗ್ರಹಣ ದೋಷ ನಿವಾರಣೆಯಾಗಲಿದೆ.
ದೇವಸ್ಥಾನ ಗೋಡೆ ನಿರ್ಮಾಣದಲ್ಲಿ ಸೂರ್ಯ, ಚಂದ್ರರನ್ನು ಕೆತ್ತನೆ ಮಾಡಲಾಗಿದ್ದು, ಇದರಿಂದ ಯಾವುದೇ ಗ್ರಹಣದ ಸಮಯದಲ್ಲಿ ದೋಷ ಕಂಡು ಬರುವುದಿಲ್ಲ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಸೂಗುರೇಶ್ವರ ದೇವಸ್ಥಾನಕ್ಕೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಭಕ್ತರು ಹರಿದು ಬರುತ್ತಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications