ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.19ರಿಂದ ಮೂರು ದಿನ ಮಲೆ ಮಹದೇಶ್ವರ ದೇಗುಲ ಬಂದ್

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜುಲೈ 18: ಸಾರ್ವಜನಿಕರ ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಶ್ರಾವಣ ಮಾಸದ ಎಣ್ಣೆ ಮಜ್ಜನ ಮತ್ತು ಭೀಮನ ಅಮವಾಸ್ಯೆ ನಿಮಿತ್ತ ಭಕ್ತಾದಿಗಳ ಪ್ರವೇಶವನ್ನು ಜುಲೈ 19 ರಿಂದ 21ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶ ಹೊರಡಿಸಿದ್ದಾರೆ.

Recommended Video

ಕೊರೊನ ವಿರುದ್ಧದ ಯುದ್ಧದಲ್ಲಿ ಗೆದ್ದ Sharath Bacche Gowda | Oneindia Kannada

ಜುಲೈ 20ರಂದು ಭೀಮನ ಅಮಾವಾಸ್ಯೆಯಿದೆ. ಶ್ರಾವಣ ಮಾಸದ ಆರಂಭ ಮತ್ತು ಭೀಮನ ಅಮಾವಾಸ್ಯೆ ವೇಳೆ ಮಾದಪ್ಪನ ಸನ್ನಿಧಿಗೆ ಲಕ್ಷಾಂತರ ಭಕ್ತರು ಬರುತ್ತಿದ್ದರು. ಆದರೆ ಈ ಬಾರಿ ನಾಳೆಯಿಂದ ಮಂಗಳವಾರದವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಸಂಕಷ್ಟದಲ್ಲೂ ಸಂಪಾದನೆ; 4 ತಿಂಗಳ ನಂತರ ಮಾದಪ್ಪನ ಹುಂಡಿ ಎಣಿಕೆ ಕಾರ್ಯಸಂಕಷ್ಟದಲ್ಲೂ ಸಂಪಾದನೆ; 4 ತಿಂಗಳ ನಂತರ ಮಾದಪ್ಪನ ಹುಂಡಿ ಎಣಿಕೆ ಕಾರ್ಯ

Male Mahadeshwara Temple In Chamarajanagar Wont Be Open On Bheemana Amavasye

ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮಾತ್ರ ಸರ್ಕಾರಿ ಕೆಲಸ ನಿಮಿತ್ತ ಕಾರಣ ಪ್ರವೇಶ ಕಲ್ಪಿಸಲಾಗಿದೆ. ಪ್ರತಿ ವರ್ಷದಂತೆ ಶ್ರಾವಣ ಮಾಸದ ಪ್ರಯುಕ್ತ ಜುಲೈ 21ರಂದು ಮಂಗಳವಾರ 108 ಕುಂಭಾಭಿಷೇಕ, ಸಹಸ್ರ ಅಭಿಷೇಕ ಪೂಜೆಗಳು ನಡೆಯುತ್ತವೆ. ಪೂಜೆಗಳನ್ನು ಧಾರ್ಮಿಕ ವಿಧಿವಿಧಾನಗಳಲ್ಲಿ ಶಾಸ್ತ್ರೋಕ್ತವಾಗಿ ದೇವಸ್ಥಾನದ ಒಳ ಆವರಣದಲ್ಲಿ ಕೈಗೊಳ್ಳಲು ನಿರ್ಧರಿಸಲಾಗುತ್ತದೆ.

ಜಿಲ್ಲೆಯ ಎಲ್ಲ ದೇವಾಲಯಗಳಿಗೂ ನಿಷೇಧ ಅನ್ವಯವಾಗಲಿದ್ದು, ಬಿಳಿಗಿರಿರಂಗನ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಚಾಮರಾಜೇಶ್ವರ ದೇಗುಲ ಸೇರಿದಂತೆ ಐದು ತಾಲೂಕುಗಳ ದೇವಾಲಯಕ್ಕೂ ಈ ಆದೇಶ ಅನ್ವಯವಾಗಲಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಆದೇಶ ಹೊರಡಿಸಿದ್ದಾರೆ.

English summary
DC ordered to close the temple for three days from tomorrow, as more devotees are expected to visit the male mahadeshwara Temple in Chamarajanagar on bheemana amavasye,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X