ವನ್ಯ ಜೀವಿಗಳಿಂದ ಬೆಳೆ ಉಳಿಸಿಕೊಳ್ಳಲು ಶ್ವಾನಕ್ಕೆ ಹುಲಿ ರೂಪ ಕೊಟ್ಟ ರೈತ: ಜನ ಕಂಗಾಲು
ಚಾಮರಾಜನಗರ, ಜನವರಿ 11: ರೈತರು ಜಮೀನಿನಲ್ಲಿ ಬೆಳೆದಿರುವ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಮನುಷ್ಯನು ನಿಂತಿರುವಂತಹ ರೂಪದ ಮಾದರಿ (ಗೊಂಬೆ) ನಿರ್ಮಿಸುವುದು, ಪ್ರಾಣಿಗಳನ್ನು ಓಡಿಸುವ ರೀತಿಯಲ್ಲಿ ವಾಯ್ಸ್ ರೆಕಾರ್ಡ್ ಮೂಲಕ ಕೂಗುವುದು, ಜಮೀನಿನ ಬೇಲಿಯ ಸುತ್ತ ಪ್ಲಾಸ್ಟಿಕ್ ಹಾಗೂ ಇನ್ನಿತರೆ ಸಾಧನ ಸಲಕರಣೆಗಳಿಂದ ಶಬ್ಧ ಮಾಡುವುದನ್ನು ಸಾಮಾನ್ಯವಾಗಿರುತ್ತದೆ.
ಚಾಮರಾಜನಗರದ ಚಾಣಾಕ್ಷ ರೈತರೊಬ್ಬರು ಶ್ವಾನವೊಂದಕ್ಕೆ ಹುಲಿಯ ಬಣ್ಣವನ್ನು ಬಳಿಯುವ ಮಾರ್ಗ ಅನುಸರಿಸಿದ್ದು ಬೆಳೆಗಳನ್ನು ವನ್ಯಜೀವಿಗಳಿಂದ ರಕ್ಷಣೆ ಮಾಡಿಕೊಳ್ಳುವ ಪ್ರಯತ್ನಕ್ಕೆ ಕೈಹಾಕಿದ್ದಾರೆ. ರೈತನ ಈ ಒಂದು ವಿಲಕ್ಷಣ ಉಪಾಯದಿಂದ ವನ್ಯಜೀವಿಗಳು ಹೆದರುತ್ತವೋ ಗೊತ್ತಿಲ್ಲ ಆದರೆ ಸಾರ್ವಜನಿಕರು ಭಯಭೀತರಾಗುವುದರ ಜೊತೆಗೆ ನಗೆಗಡಲಿನಲ್ಲಿ ತೇಲುವಂತ ಪ್ರಸಂಗ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಕಂಡು ಬಂದಿದೆ.
ಶ್ವಾನಕ್ಕೆ ಹುಲಿ ರೂಪದ ಬಣ್ಣ ಬಳಿದಿರುವುದರಿಂದ ಶ್ವಾನ ಸಂಚರಿಸುವ ಸಾರ್ವಜನಿಕರು ಹಾಗೂ ದಾರಿಹೋಕರು ಹುಲಿ ರೂಪದ ನಾಯಿಯನ್ನು ನೋಡಿ ಭಯ ಬೀಳುವುದರ ಜೊತೆಗೆ ವಿಚಲಿತರಾಗುತ್ತಿದ್ದಾರೆ. ಹುಲಿ..ಹುಲಿ.. ಎಂದು ಹೌಹಾರಿದ್ದಾರೆ. ಬಳಿಕ ಅದು ಶ್ವಾನವೆಂದು ತಿಳಿದು ನಿಟ್ಟುಸಿರು ಬಿಡುತ್ತಿದ್ದಾರೆ. ಇದು ಹುಲಿಯಲ್ಲ ನಾಯಿ ಎಂದು ತಿಳಿದು ನಕ್ಕಿದ್ದಾರೆ.

ರೈತ ಬೆಳೆ ಉಳಿಸಿಕೊಳ್ಳು ಈ ಉಪಾಯ ಮಾಡಿದ್ದು, ಶ್ವಾನದ ಪೋಟೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾಡುಪ್ರಾಣಿಗಳಿಗಿಂತ ಮನುಷ್ಯರೇ ಕೆಲಕಾಲ ತಾನು ಹುಲಿ ನೋಡಿದೆ ಎಂದು ಭಯ ಬೀಳುವ ವಾತಾವರಣ ಸೃಷ್ಟಿಯಾಗಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತರಹೇವಾರಿ ಕಾಮೆಂಟ್ಗಳು ಹರಿದಾಡುತ್ತಿದೆ.
ವಿಪರ್ಯಾಸವೆಂದರೆ ಮನುಷ್ಯರ ಕೈಚಳಕದಿಂದ ಹುಲಿಯ ರೂಪವನ್ನು ಪಡೆದಿರುವ ಮುಗ್ಧ ಶ್ವಾನವು ತನ್ನ ನಡೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಎಂದಿನಂತೆ ಗ್ರಾಮದ ಸುತ್ತೆಲ್ಲಾ ಓಡಾಡುತ್ತಿದೆ. ಇದನ್ನು ಮೊದಲ ಬಾರಿ ನೋಡಿದ ಜನರು ಹೌಹಾರುತ್ತಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications