20 ವರ್ಷಗಳ ಹಿಂದೆ ಸಮಾಧಿ ನಿರ್ಮಾಣ, ಈಗ ಅಂತ್ಯ ಸಂಸ್ಕಾರ ಚಾಮರಾಜನಗರದಲ್ಲೊಂದು ವಿಚಿತ್ರ ಘಟನೆ
ಚಾಮರಾಜನಗರ, ಜುಲೈ 25: ವ್ಯಕ್ತಿ ಮೃತಪಟ್ಟ ಬಳಿಕ ಸಮಾಧಿ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ತಾನು ಯಾರಿಗೂ ತೊಂದರೆ ಕೊಡಬಾರದು, ತಾನು ದುಡಿದ ಹಣದಲ್ಲೇ ತನ್ನ ಅಂತಿಮ ವಿಧಿ-ವಿಧಾನ ನೆರವೇರಬೇಕೆಂದು ಇಚ್ಚಿಸಿ 20 ವರ್ಷಗಳ ಹಿಂದೆಯೇ ಸಮಾಧಿ ನಿರ್ಮಿಸಿಕೊಂಡಿದ್ದು ಅಲ್ಲೇ ಸೋಮವಾರ ಆತನ ಅಂತ್ಯ ಸಂಸ್ಕಾರ ನೆರವೇರಿದೆ.
ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದ ಪುಟ್ಟನಂಜಪ್ಪ(85) ಎಂಬವರು ಸೋಮವಾರ ದೈವಾಧೀನರಾಗಿದ್ದು, ಇವರು ತಮಗೆ 65 ವರ್ಷವಿದ್ದಾಗ, 20 ವರ್ಷಗಳ ಹಿಂದೆಯೇ ತಮ್ಮ ಜಮೀನಿನಲ್ಲಿ ತಾವೇ ಕುಳಿತು ಅಳತೆ ಮಾಡಿ ಗೋಪುರ ಶೈಲಿಯ ಸಮಾಧಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಜೊತೆಗೆ, ಅಂತ್ಯ ಸಂಸ್ಕಾರಕ್ಕೆ ಬೇಕಾದ ವಿಭೂತಿ, ಕಳಸಗಳು, ಒಂದು ಲಕ್ಷ ರೂ. ಹಣವನ್ನೂ ಎತ್ತಿಟ್ಟಿದ್ದು ಆ ಹಣದಲ್ಲೇ ಅಂತ್ಯಕ್ರಿಯೆಯ ಎಲ್ಲಾ ಕಾರ್ಯಗಳು ನಡೆದಿವೆ.
ಪುಟ್ಟಮಲ್ಲಪ್ಪ ಅವರು ಸಾಕಷ್ಟು ಸ್ಥಿತಿವಂತರೇ ಆಗಿದ್ದು, ಮೂವರು ಪುತ್ರರಿದ್ದಾರೆ. ತನ್ನ ತಿಥಿಯನ್ನು ತನ್ನ ಹಣದಲ್ಲೇ ಮಾಡಬೇಕೆಂಬ ಸ್ವಾಭಿಮಾನದಿಂದಾಗಿ ಸಮಾಧಿ ನಿರ್ಮಾಣ ಹಾಗೂ ಹಣ ಎತ್ತಿಟ್ಟಿದ್ದರು ಎಂದು ಕುಟುಂಬಸ್ಥರು ತಿಳಿಸಿದರು.

ಕ್ರಿಯಾ ಸಮಾಧಿಗೆ ವ್ಯವಸ್ಥೆ; 12 ದಿನಗಳ ಹಿಂದೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದ ಪುಟ್ಟನಂಜಪ್ಪ, ತಮ್ನ ಮಕ್ಕಳನ್ನು ಕರೆದು ತಾವೂ ಕೂಡಿಟ್ಟಿದ್ದ ಒಂದು ಲಕ್ಷ ರೂಪಾಯಿಯನ್ನು ನೀಡಿ ಇದರಲ್ಲೇ ಅಂತ್ಯ ಸಂಸ್ಕಾರಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆ ಹಾಗೂ ಕಾರ್ಯಕ್ಕೆ ಬಂದವರಿಗೆ ಊಟ ಹಾಕಬೇಕೆಂದು ಮಾತು ತೆಗೆದುಕೊಂಡಿದ್ದರಂತೆ. ಜೊತೆಗೆ ಕ್ರಿಯಾ ಸಮಾಧಿ ಮಾಡಲು ಬೇಕಾದಂತಹ ಕಳಶ, ವಿಭೂತಿ, ಸೇರಿದಂತೆ ಎಲ್ಲಾ ರೀತಿಯ ಸಾಮಾನುಗಳನ್ನು ಮೊದಲೇ ಸಂಗ್ರಹಿಸಿಟ್ಟಿದ್ದರೆಂದು ಅವರ ಸಂಬಂಧಿಯೊಬ್ಬರು ತಿಳಿಸಿದ್ದಾರೆ.
ಆಸೆಯಂತೆ ಪತ್ನಿ ಪಕ್ಕದಲ್ಲೇ ಸಮಾಧಿ; ಕಳೆದ ವರ್ಷ ಪುಟ್ಟಮಲ್ಲಪ್ಪ ಪತ್ನಿ ಕೊರೊನಾದಿಂದ ಮೃತಪಟ್ಟಿದ್ದರು. ಅಂತ್ಯ ಸಂಸ್ಕಾರವನ್ನು ಮಕ್ಕಳಿಂದ ಹಣ ಪಡೆಯದೇ ತಾವೇ ನೆರವೇರಿಸಿದ್ದರು. ಇನ್ನು ತಮ್ಮ ಅಂತ್ಯಸಂಸ್ಕಾರಕ್ಕೆ ಬೇಕಾದ ಪ್ರತಿಯೊಂದನ್ನು ಸಾಮಾನುಗಳನ್ನು ತಂದಿಟ್ಟಿದ್ದರು.

ಕಳೆದ 12 ದಿನಗಳ ಹಿಂದೆ ಅವರ ಆರೋಗ್ಯ ಹದಗೆಟ್ಟು 5 ದಿನಗಳಿಂದ ಮಾತು ನಿಂತಿತ್ತು. ಭಾನುವಾರ ತಂದೆಯವರು ಅಸುನೀಗಿದ್ದು ಇಂದು ಅವರು ನಿರ್ಮಿಸಿಕೊಂಡ ಸಮಾಧಿಯಲ್ಲೇ, ಅವರು ಕೂಡಿಟ್ಟ ಹಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ, ಮುಂದಿನ ತಿಥಿ ಕಾರ್ಯವನ್ನು ಅದೇ ದುಡ್ಡಿನಲ್ಲಿ ಮಾಡಲಾಗುತ್ತದೆ ಎಂದು ಅವರ ಮಗ ಗೌಡಿಕೆ ನಾಗೇಶ್ ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications