ಚಾಮರಾಜನಗರ: ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಜೀವಾವಧಿ ಶಿಕ್ಷೆ
ಚಾಮರಾಜನಗರ, ಅಕ್ಟೋಬರ್ 29: ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ.
ಚಾಮರಾಜನಗರ ನಗರದ ಗಾಳಿಪುರ ಬಡಾವಣೆಯ, ಸದ್ಯ ಸರಗೂರು ಗ್ರಾಮದಲ್ಲಿ ವಾಸವಿರುವ ಶಮೀವುಲ್ಲಾ ಅಲಿಯಾಸ್ ಡಾಮ್ಟೆ ಅಲಿಯಾಸ್ ಸಲ್ಮಾನ್ ಅಲಿಯಾಸ್ ಪ್ರೀತಂ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯಾಗಿದ್ದಾನೆ.
2018ರ ಜುಲೈನಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಎರಡು ವರ್ಷ ಮೂರು ತಿಂಗಳ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯವು ಈ ಪ್ರಕರಣವನ್ನು ಇತ್ಯರ್ಥ ಪಡಿಸಿದೆ.

ಘಟನೆ ವಿವರ:
ಶಮೀವುಲ್ಲಾ ಸ್ಟೌ ಹಾಗೂ ಮಿಕ್ಸಿ ರಿಪೇರಿ ಮಾಡುವ ವೃತ್ತಿ ಮಾಡುತ್ತಿದ್ದನು. ಸ್ಟೌ ಹಾಗೂ ಮಿಕ್ಸಿ ರಿಪೇರಿ ಮಾಡುವುದಕ್ಕಾಗಿ ತಾಲ್ಲೂಕಿನ ಗ್ರಾಮವೊಂದಕ್ಕೆ ಹೋಗಿದ್ದಾಗ ಅಲ್ಲಿನ ಪರಿಶಿಷ್ಟ ಜಾತಿಯ ಬಾಲಕಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ನಂತರ ಆಕೆಯನ್ನು ಪ್ರೀತಿಸುತ್ತಿರುವುದಾಗಿ, ಮದುವೆಯಾಗುವುದಾಗಿ ನಂಬಿಸಿದ್ದ.
2018ರ ಜುಲೈ 24ರಂದು ಬೈಕ್ ನಲ್ಲಿ ಆಕೆಯನ್ನು ತಮಿಳುನಾಡಿನ ತಮಿಳ್ ಪುರಕ್ಕೆ ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಬಂಧ ಹೊಂದಿದ್ದಾನೆ. ಜುಲೈ 25 ರಂದು ತಮಿಳ್ ಪುರದಿಂದ ಮೈಸೂರು ಜಿಲ್ಲೆ ಹುಣಸೂರಿಗೆ ಬಂದಿದ್ದ ಶಮೀವುಲ್ಲಾ, ಅಲ್ಲಿನ ಲಾಡ್ಜ್ ಒಂದರಲ್ಲಿ ಕೊಠಡಿಯನ್ನು ಬಾಡಿಗೆ ಪಡೆದು ಎರಡು ದಿನ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು.
ಆತನ ವಿರುದ್ಧ ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಶಮೀವುಲ್ಲಾ ವಿರುದ್ಧದ ಆರೋಪಗಳು ಸಾಬೀತಾಗಿರುವುದರಿಂದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್ಪುರಿ ಅವರು, ಆರೋಪಿಯನ್ನು ತಪ್ಪಿತಸ್ಥ ಎಂದು ಘೋಷಿಸಿದ್ದು, ಅ.27ರಂದು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಅಪರಾಧಿಗೆ ಒಂದು ಲಕ್ಷ ತಂಡವನ್ನೂ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದರೆ ಒಂದು ವರ್ಷ ಸಜೆ ಅನುಭವಿಸಬೇಕು ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಲಾಕ್ಷಿ ಅವರು ವಾದ ಮಂಡಿಸಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications