ಚಾಮರಾಜನಗರ: 12 ವರ್ಷಗೊಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಎಲ್ಲರನ್ನೂ ಬಯ್ಯೋದೇ ವಿಶೇಷ.!-ಬೈಗಳು ಹೇಗಿರುತ್ತವೆ ಗೊತ್ತಾ?
ಚಾಮರಾಜನಗರ, ಮಾರ್ಚ್, 19: ಈ ಊರಲ್ಲಿ 12 ವರ್ಷಗಳಿಗೊಮ್ಕೆ ವಿಶೇಷ ಜಾತ್ರೆ ನಡೆಯಲಿದೆ. ಆದರೆ, ಎಲ್ಲಾ ಜಾತ್ರೆಗಳಂತೆ ಸಾಮಾನ್ಯವಾದ ಜಾತ್ರೆ ಇದಲ್ಲ. ಒಂದು ಸಮುದಾಯದ ಜನರು ಎಲ್ಲಾರನ್ನೂ ಬೈದು, ವಿಡಂಬನೆ ಮಾಡಿ ಹಾಸ್ಯದ ಹೊನಲು ಹರಿಸುವುದೇ ಈ ಜಾತ್ರೆಯ ವಿಶೇಷತೆಯಾಗಿದೆ. ಹಾಗಾದರೆ ಇದನ್ನು ಹೇಗೆಲ್ಲಾ ಆಚರಣೆ ಮಾಡುತ್ತಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರ ತಾಲೂಕಿನ ಮಂಗಲ ಎಂಬ ಗ್ರಾಮದಲ್ಲಿ ಕಳೆದ ಮಾರ್ಚ್ 17ರಿಂದ ಆರಂಭವಾಗಿದ್ದು, ಇಂದಿನ ತನಕ ಮೂರು ದಿನಗಳ ಕಾಲ ಅದ್ಧೂರಿಯಾಗಿ ಹಬ್ಬ ನಡೆಯಲಿದ್ದು, ಇದು ಹಿರಿಯ ಹಬ್ಬ ಅಂತಲೇ ಜನಪ್ರಿಯವಾಗಿದೆ.

ಹತ್ತಾರು ಸಮುದಾಯಗಳು ಈ ಗ್ರಾಮದಲ್ಲಿ ನೆಲೆಸಿದ್ದು, ಎಲ್ಲರೂ ಸೇರಿ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಾರೆ. ಕುರುಬ ಸಮುದಾಯ ಈ ಜಾತ್ರೆಯ ಆಕರ್ಷಣೆ ಕೇಂದ್ರ ಆಗಿದ್ದು, ಎದುರಿಗೆ ಬಂದ ಪ್ರಮುಖರನ್ನು, ಊರಿನ ಮುಖಂಡರನ್ನು ಅಶ್ಲೀಲವಾಗಿ, ಕೊಂಕು, ವಿಡಂಬನೆಯಿಂದ ಬಾಜಿ ಕಟ್ಟಿದ್ದಂತೆ ಬೈಯ್ಯಲಿದ್ದಾರೆ. ಇನ್ನು ಇವರ ಬೈಗುಳವನ್ನು ಕೇಳಿ ಎಲ್ಲರೂ ನಕ್ಕು ಸುಮ್ಮನಾಗಲಿದ್ದು, ಇವರ ಬೈಗುಳ ಕೇಳಲೆಂದೇ ಅಕ್ಕಪಕ್ಕದ ಊರಿನ ಜನರು ಸೇರಿ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸುತ್ತಾರೆ.
ಮಂಗಲ ಗ್ರಾಮದ ವಿಪ್ರ ಮುಖಂಡರಾದ ಶ್ರೀಕಂಠಮೂರ್ತಿ ಹಾಗೂ ಉಪ್ಪಾರ ಸಮುದಾಯದ ಯಜಮಾನರಾದ ಕ್ಯಾತಶೆಟ್ಟಿ ಈ ಕುರಿತು ಮಾತನಾಡಿ, ಶತಮಾನಗಳಿಂದಲೂ ಈ ಹಿರಿಯ ಹಬ್ಬ ಆಚರಣೆಯಲ್ಲಿದ್ದು, ಬೀರೇಶ್ವರ ಸ್ವಾಮಿ ಉತ್ಸವ ಹಾಗೂ ಓಕುಳಿ ಆಡಲಿದ್ದಾರೆ. ಎಲ್ಲಾ ಸಮುದಾಯವೂ ಈ ಜಾತ್ರೆಯಲ್ಲಿ ಪಾಲ್ಗೊಂಡು ಸಹಬಾಳ್ವೆಗೆ ಮುನ್ನುಡಿ ಬರೆಯಲಿದ್ದು, ಕುರುಬ ಸಮುದಾಯ ಈ ಹಬ್ಬಕ್ಕೆ ಮತ್ತಷ್ಟು ರಂಗು ತುಂಬಲಿದೆ. ಆ ಸಮುದಾಯ ಮಾತ್ರ ಈ ಬೈಗುಳದಲ್ಲಿ ಪಾಲ್ಗೊಳ್ಳಬೇಕು. ಅವರು ಮಾತ್ರ ಬೈಯ್ಯಲಿದ್ದು, ಒಂದು ರೀತಿ ಮನರಂಜನೆಯಾಗಿಯೂ ಇದು ಕಾಣಲಿದೆ ಎಂದರು.
ಒಟ್ಟಿನಲ್ಲಿ ಜಾತ್ರೆ ಎಂದರೆ ಕೇವಲ ಉತ್ಸವ ಮಾತ್ರ ನಡೆಯುವುದು ಸಾಮಾನ್ಯ. ಆದರೆ, ವಾಚಮಗೋಚರವಾಗಿ ಬೈಯ್ಯುವುದು ಕೂಡ ಇದರ ಭಾಗವಾಗಿರುವುದು ವಿಶೇಷವೇ ಆಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications