ವೀರಪ್ಪನ್ ಊರಲ್ಲಿ ಮಾರಿ ಹಬ್ಬ: ಬಾಯಿಗೆ ಬೀಗ, ಬೆನ್ನಿಗೆ ಸರಳು ಚುಚ್ಚಿಕೊಂಡು ಭಕ್ತಿ ಪರಾಕಷ್ಠೆ
ಚಾಮರಾಜನಗರ, ಆಗಸ್ಟ್, 28: ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಬುಧವಾರ (ಆಗಸ್ಟ್ 28) ಸಂಜೆ ವಿಜೃಂಭಣೆಯಿಂದ ಮಾರಿ ಹಬ್ಬ ನಡೆಯಿತು. ಇನ್ನೂ ಈ ಊರಿಗೂ ಹಾಗೂ ಕಾಡುಗಳ್ಳ ವೀರಪ್ಪನಗೂ ಅವಿನಾಭನ ನಂಟಿದೆ. ಇದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ ಗಮನಿಸಿ.
ವಿಜೃಂಭಣೆಯಿಂದ ನಡೆದ ಈ ಮಾರಿಹಬ್ಬದಲ್ಲಿ ಹತ್ತಾರು ಭಕ್ತರು ಸರಳು ಚುಚ್ಚಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹಲವರು ಬಾಯಿಗೆ ಬೀಗ ಹಾಕಿಕೊಂಡು ಹರಕೆ ತೀರಿಸಿದರೇ ಮೂವರು ಬೆನ್ನಿಗೆ ಸರಳು ಚುಚ್ಚಿಕೊಂಡು ನೇತಾಡಿ ಗಿರಗಿಟ್ಲೆಯಂತೆ ಸುತ್ತಿ ಸೇರಿದ್ದ ಭಕ್ತರ ಮೈನವಿರೇಳುವಂತೆ ಮಾಡಿದ್ದಾರೆ.

ಅರಣ್ಯಾಧಿಕಾರಿ ಪಿ.ಶ್ರೀನಿವಾಸ್ ಕಟ್ಟಿಸಿದ ದೇಗುಲ ಇದಾಗಿದ್ದು, ಇಲ್ಲಿ ಪ್ರತಿವರ್ಷ ಮಾರಿಯಮ್ಮಹಬ್ಬ ನಡೆಯುತ್ತದೆ. ಈ ಬಾರಿಯೂ ಹೆಚ್ಚು ಜನರು ತಮ್ಮ ಬಾಯಿಗೆ ಬೀಗ ಹಾಕಿಕೊಂಡು ಹರಕೆ ತೀರಿಸಿದ್ದಾರೆ. ವೀರಪ್ಪನ್ನ ಊರಾದ ಗೋಪೀನಾಥಂನಲ್ಲಿ ಕಾಡುಗಳ್ಳನ ನೆನಪು ನೇಪಥ್ಯಕ್ಕೆ ಸರಿಯುತ್ತಿದ್ದರೇ ಅರಣ್ಯಾಧಿಕಾರಿ ಪಿ.ಶ್ರೀನಿವಾಸ್ ಅವರ ಸೇವಾ ಕಾರ್ಯವು ವರ್ಷದಿಂದ ವರ್ಷಕ್ಕೆ ಪ್ರವರ್ಧಮಾನಕ್ಕೆ ಬರುತ್ತಿದೆ.
ಮಾರಿಯಮ್ಮ ಹಬ್ಬದ ಆಹ್ವಾನ ಪತ್ರಿಕೆಯಲ್ಲೂ ಶ್ರೀನಿವಾಸ್ ಅವರ ಫೋಟೋವನ್ನು ಗ್ರಾಮಸ್ಥರು ಅಚ್ಚು ಹಾಕಿಸುತ್ತಾರೆ. ಇನ್ನು, ಅರಣ್ಯಾಧಿಕಾರಿ ಕೆಲಸವನ್ನು ಮಾದರಿಯಾಗಿ ತೆಗೆದುಕೊಂಡಿರುವ ಗ್ರಾಮದ ಯುವಕರು ಗ್ರೀನ್ ವಾರಿಯರ್ಸ್ ಎಂಬ ತಂಡ ಕಟ್ಟಿಕೊಂಡು ಪಿ.ಶ್ರೀನಿವಾಸ್ ಕಾರ್ಯವನ್ನು ಶಾಶ್ವತಗೊಳಿಸುತ್ತಿದ್ದಾರೆ.
ಚಾಮರಾಜನಗರ ದಸರಾ ಯಾವಾಗ ಆರಂಭ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಗಡಿಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲೂ ದಸರಾ ಮಹೋತ್ಸವವನ್ನು ಅಕ್ಟೋಬರ್ 7, 8 ಮತ್ತು 9ರಂದು ಒಟ್ಟು ಮೂರು ದಿನಗಳ ಕಾಲ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮಗಳ ವಿವರ ಇಲ್ಲಿದೆ ನೋಡಿ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಲಾವಿದರು, ಅಧಿಕಾರಿಗಳನ್ನೊಳಗೊಂಡ ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಮೈಸೂರು ದಸರಾ ಭಾಗವಾಗಿ ಈ ಹಿಂದಿನಂತೆ ಚಾಮರಾಜನಗರ ದಸರಾ ಮಹೋತ್ಸವವನ್ನು ಮೂರು ದಿನಗಳ ಕಾಲ ಹೆಚ್ಚು ಆಕರ್ಷಕವಾಗಿ ಹಾಗೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ಮಾತನಾಡಿದ ಸಂಘ ಸಂಸ್ಥೆಗಳ ಮುಖಂಡರು, ಕಲಾವಿದರು ದೀಪಾಲಂಕಾರವನ್ನು ವ್ಯಾಪಕವಾಗಿ ಪಟ್ಟಣದಲ್ಲಿ ಮಾಡಬೇಕು. ನಗರ ಪ್ರವೇಶಿಸುವ ಮುಖ್ಯ ದ್ವಾರದಲ್ಲಿ ವಿಶೇಷವಾಗಿ ವಿದ್ಯುತ್ ದೀಪಾಲಂಕಾರ ಇರಬೇಕು. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು. ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಜಿಲ್ಲೆಯ ಕಲಾವಿದರು ಹಾಗೂ ಇನ್ನಿತರ ಕಲಾವಿದರನ್ನು ಆಹ್ವಾನಿಸಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಯುವಕರಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಬೇಕು. ಜಿಲ್ಲೆಯ ಕ್ರೀಡಾ ಸಾಧಕರನ್ನು ಸನ್ಮಾನಿಸಬೇಕು. ಬೊಂಬೆ ಕೂರಿಸುವುದು, ಸಂವಿಧಾನ ಜಾಗೃತಿಯಂತಹ ಕಾರ್ಯಕ್ರಮಗಳು, ಜನಪದ, ರಂಗಗೀತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಬೇಕು. ಜನನಮಂಟಪವನ್ನು ಸ್ವಚ್ಚಗೊಳಿಸಿ ದಸರಾ ಮಹೋತ್ಸವದ ಸಂದರ್ಭದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂಬುದೂ ಸೇರಿದಂತೆ ಇನ್ನಿತರ ಹಲವು ಸಲಹೆ, ಅಭಿಪ್ರಾಯಗಳನ್ನು ಮುಖಂಡರು, ಕಲಾವಿದರು ಸಭೆಯಲ್ಲಿ ನೀಡಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications