ಚಾಮರಾಜನಗರದಲ್ಲಿ ಮೈಕ್ರೋ ಫೈನಾನ್ಸ್ ಕಾಟ: ಬೀದಿಗೆ ಬಿದ್ದ ರೈತನ ಕುಟುಂಬ!
ಚಾಮರಾಜನಗರ, ಜನವರಿ 28: ರಾಜ್ಯದಾದ್ಯಂತ ಒಂದರ ಮೇಲೊಂದರಂತೆ ಮೈಕ್ರೋ ಫೈನಾನ್ಸ್ ಕಪಿಮುಷ್ಠಿಯಲ್ಲಿ ಸಿಲುಕಿ ನರಕ ಅನುಭವಿಸುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಈ ಸಮಸ್ಯೆಯಿಂದ ಜನ ಹೊರ ಬರಲು ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದರತ್ತ ಸಾಲಗಾರರು ಆಸೆಗಣ್ಣಿನಿಂದ ನೋಡುತ್ತಿದ್ದಾರೆ. ಆದರೆ ಸಾಲಕೊಟ್ಟ ಫೈನಾನ್ಸ್ ಸಂಸ್ಥೆಯವರು ಆದಷ್ಟು ಬೇಗ ಸಾಲ ವಸೂತಿ ಮಾಡಿಬಿಡಬೇಕೆನ್ನುವ ಹಠಕ್ಕೆ ಬಿದ್ದಿದ್ದು ಅದರಂತೆ ಮನೆಗೆ ಬೀಗ ಜಡಿದು ಕುಟುಂಬಗಳನ್ನು ಹೊರ ಹಾಕುವ ಮಟ್ಟಕ್ಕೆ ಹೋಗುತ್ತಿದ್ದಾರೆ.
ಸದ್ಯ ಇಡೀ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಗಳ ಸುದ್ದಿಗಳು ಸದ್ದು ಮಾಡುತ್ತಿದ್ದು, ಫೈನಾನ್ಸ್ ರವರ ಕಿರುಕುಳದಿಂದ ಮನೆ ಬಿಟ್ಟವರು, ಮನೆಕಳೆದುಕೊಂಡವರು, ಆತ್ಮಹತ್ಯೆ ಮಾಡಿಕೊಂಡವರು, ಹಲ್ಲೆಗೊಳಗಾದವರು ಹೀಗೆ ನೂರಾರು ಪ್ರಕರಣಗಳು ಅಲ್ಲಲ್ಲಿ ಕೇಳಿ ಬರುತ್ತಿದೆ. ಕಂಪನಿಗಳ ಕಾಟದಿಂದ ತಪ್ಪಿಸಿಕೊಂಡರೆ ಸಾಕು ಎಂಬ ಪರಿಸ್ಥಿತಿಗೆ ಹಲವು ಕುಟುಂಬಗಳು ಬಂದು ನಿಂತಿವೆ. ಮೈಕ್ರೋ ಫೈನಾನ್ಸ್ ಪ್ರಕರಣದಲ್ಲಿ ಸಿಲುಕಿ ನರಕ ಅನುಭವಿಸುತ್ತಿರುವವರಲ್ಲಿ ರೈತರು ಕೂಡ ಸೇರಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿವೆ.

ಮೈಕ್ರೋ ಫೈನಾನ್ಸ್ ಗಳು ಸಾಲ ನೀಡುವಾಗ ವಸೂಲಿ ಹೇಗೆ ಮಾಡಬೇಕು ಎಂಬುದು ಗೊತ್ತಿರುತ್ತದೆ. ಹೀಗಾಗಿ ಹಲವು ನಿಬಂಧನೆಗಳಿಗೆ ಸಹಿ ಹಾಕಿಸಿಕೊಂಡಿರುತ್ತಾರೆ. ಅದನ್ನೇ ಮುಂದಿಟ್ಟುಕೊಂಡು ವಸೂಲಿಗಿಳಿಯುತ್ತಿರುವುದರಿಂದ ಹಲವರು ಮನೆಯಿಂದ ಹೊರಗೆ ಬೀಳುವಂತಾಗಿದೆ. ಸದ್ಯ ರಾಜ್ಯದಲ್ಲಿ ಪ್ರಕರಣಗಳು ಸಕ್ರಿಯವಾಗಿರುವಾಗಲೇ ಚಾಮರಾಜನಗರದ ಸಂತೇಮರಹಳ್ಳಿ ಗ್ರಾಮದಲ್ಲಿ ರಾಜೇಶ್ ಎನ್ನುವವರು ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಿಂದ ಮನೆ ಸಾಲ ಪಡೆದು ಸಕಾಲದಲ್ಲಿ ಸಾಲ ಮರು ಪಾವತಿ ಮಾಡಲಾಗದೆ ಮನೆಯನ್ನು ಕಳೆದುಕೊಳ್ಳುವ ಪರಿಸ್ಥಿತಿಗೆ ಬಂದಿರುವುದು ಬೆಳಕಿಗೆ ಬಂದಿದೆ.
ಇದೀಗ ಮನೆ ನಿರ್ಮಾಣಕ್ಕೆ ಸಾಲಕೊಟ್ಟಿರುವ ಜನ ಸ್ಮಾಲ್ ಫೈನಾನ್ಸ್ ಸಂಸ್ಥೆಯವರು ಮನೆಯನ್ನು ಸೀಜ್ ಮಾಡಿದ್ದು ಪರಿಣಾಮ ಮನೆ ಮಾಲೀಕ ಎಂ. ರಾಜೇಶ್ ಹಾಗೂ ಅವರ ಪತ್ನಿ ಶ್ವೇತ ಮತ್ತು ಮಕ್ಕಳು ಬೀದಿಯಲ್ಲಿ ವಾಸ ಮಾಡುವ ಪರಿಸ್ಥಿತಿ ಬಂದಿದೆ. ಈ ಕುರಿತಂತೆ ತಮಗಾಗಿರುವ ಕಿರುಕುಳವನ್ನು ಕುಟುಂಬ ಹೊರ ಹಾಕಿದ್ದು ನ್ಯಾಯ ದೊರಕಿಸಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇನ್ನು ತಮಗಾದ ಕಿರುಕುಳದ ಬಗ್ಗೆ ಹೇಳಿರುವ ಕುಟುಂಬ, ಫೈನಾನ್ಸ್ ನವರ ಹತ್ತಿರ ರೈತ ಮುಖಂಡರನ್ನು ಕರೆದುಕೊಂಡು ಹೋಗಿ ಸ್ವಲ್ಪ ಹಣ ಪಾವತಿ ಮಾಡುವುದಾಗಿ ಹೇಳಿದ್ದು, ಆದರೂ ನಮಗೆ ಪೂರ್ಣ ಹಣ ಕಟ್ಟಬೇಕು ಎಂದು ನಮ್ಮ ಮನೆಯನ್ನು ಮುಟ್ಟುಗೊಲು ಮಾಡಿಕೊಂಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಈಗಿನ ಪರಿಸ್ಥಿತಿಯಲ್ಲಿ ಜೀವನ ನಡೆಸುವುದು ಕಷ್ಟವಾಗಿದ್ದು, ಬದುಕೇ ಬೇಸರ ತಂದಿದೆ. ನಮ್ಮ ಮನೆಯಲ್ಲಿ ಓದುವ ಮಕ್ಕಳಿದ್ದು ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ. ಮನೆಯ ಹೊರಗಡೆ ಇರುವ ಶೌಚಾಲಯ ಹಾಗೂ ಸ್ನಾನದ ಮನೆಗೂ ಬೀಗ ಹಾಕಲಾಗಿದ್ದು ನಮಗೆ ದೈನಂದಿನ ಚುಟುವಟಿಕೆಗೂ ಸಹ ಪರಿತಪಿಸುವಂತಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ. ನಮಗೆ ನ್ಯಾಯ ಕೊಡಿಸಿ ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬಸ್ಥರು ಧರಣಿ ಮಾಡಬೇಕಾಗುತ್ತದೆ ಎಂದು ಹೇಳಿರುವ ರಾಜೇಶ್ ಕುಟುಂಬ ನಮಗೆ ಬೇರೆ ಯಾವುದೇ ದಾರಿ ತೋಚುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications