ಚಾಮರಾಜನಗರದಲ್ಲಿ ಮೈಕ್ರೋ ಫೈನಾನ್ಸ್ ಕಾಟ: ಬೀದಿಗೆ ಬಿದ್ದ ರೈತನ ಕುಟುಂಬ!
ಚಾಮರಾಜನಗರ, ಜನವರಿ 28: ರಾಜ್ಯದಾದ್ಯಂತ ಒಂದರ ಮೇಲೊಂದರಂತೆ ಮೈಕ್ರೋ ಫೈನಾನ್ಸ್ ಕಪಿಮುಷ್ಠಿಯಲ್ಲಿ ಸಿಲುಕಿ ನರಕ ಅನುಭವಿಸುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಈ ಸಮಸ್ಯೆಯಿಂದ ಜನ ಹೊರ ಬರಲು ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದರತ್ತ ಸಾಲಗಾರರು ಆಸೆಗಣ್ಣಿನಿಂದ ನೋಡುತ್ತಿದ್ದಾರೆ. ಆದರೆ ಸಾಲಕೊಟ್ಟ ಫೈನಾನ್ಸ್ ಸಂಸ್ಥೆಯವರು ಆದಷ್ಟು ಬೇಗ ಸಾಲ ವಸೂತಿ ಮಾಡಿಬಿಡಬೇಕೆನ್ನುವ ಹಠಕ್ಕೆ ಬಿದ್ದಿದ್ದು ಅದರಂತೆ ಮನೆಗೆ ಬೀಗ ಜಡಿದು ಕುಟುಂಬಗಳನ್ನು ಹೊರ ಹಾಕುವ ಮಟ್ಟಕ್ಕೆ ಹೋಗುತ್ತಿದ್ದಾರೆ.
ಸದ್ಯ ಇಡೀ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಗಳ ಸುದ್ದಿಗಳು ಸದ್ದು ಮಾಡುತ್ತಿದ್ದು, ಫೈನಾನ್ಸ್ ರವರ ಕಿರುಕುಳದಿಂದ ಮನೆ ಬಿಟ್ಟವರು, ಮನೆಕಳೆದುಕೊಂಡವರು, ಆತ್ಮಹತ್ಯೆ ಮಾಡಿಕೊಂಡವರು, ಹಲ್ಲೆಗೊಳಗಾದವರು ಹೀಗೆ ನೂರಾರು ಪ್ರಕರಣಗಳು ಅಲ್ಲಲ್ಲಿ ಕೇಳಿ ಬರುತ್ತಿದೆ. ಕಂಪನಿಗಳ ಕಾಟದಿಂದ ತಪ್ಪಿಸಿಕೊಂಡರೆ ಸಾಕು ಎಂಬ ಪರಿಸ್ಥಿತಿಗೆ ಹಲವು ಕುಟುಂಬಗಳು ಬಂದು ನಿಂತಿವೆ. ಮೈಕ್ರೋ ಫೈನಾನ್ಸ್ ಪ್ರಕರಣದಲ್ಲಿ ಸಿಲುಕಿ ನರಕ ಅನುಭವಿಸುತ್ತಿರುವವರಲ್ಲಿ ರೈತರು ಕೂಡ ಸೇರಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿವೆ.

ಮೈಕ್ರೋ ಫೈನಾನ್ಸ್ ಗಳು ಸಾಲ ನೀಡುವಾಗ ವಸೂಲಿ ಹೇಗೆ ಮಾಡಬೇಕು ಎಂಬುದು ಗೊತ್ತಿರುತ್ತದೆ. ಹೀಗಾಗಿ ಹಲವು ನಿಬಂಧನೆಗಳಿಗೆ ಸಹಿ ಹಾಕಿಸಿಕೊಂಡಿರುತ್ತಾರೆ. ಅದನ್ನೇ ಮುಂದಿಟ್ಟುಕೊಂಡು ವಸೂಲಿಗಿಳಿಯುತ್ತಿರುವುದರಿಂದ ಹಲವರು ಮನೆಯಿಂದ ಹೊರಗೆ ಬೀಳುವಂತಾಗಿದೆ. ಸದ್ಯ ರಾಜ್ಯದಲ್ಲಿ ಪ್ರಕರಣಗಳು ಸಕ್ರಿಯವಾಗಿರುವಾಗಲೇ ಚಾಮರಾಜನಗರದ ಸಂತೇಮರಹಳ್ಳಿ ಗ್ರಾಮದಲ್ಲಿ ರಾಜೇಶ್ ಎನ್ನುವವರು ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಿಂದ ಮನೆ ಸಾಲ ಪಡೆದು ಸಕಾಲದಲ್ಲಿ ಸಾಲ ಮರು ಪಾವತಿ ಮಾಡಲಾಗದೆ ಮನೆಯನ್ನು ಕಳೆದುಕೊಳ್ಳುವ ಪರಿಸ್ಥಿತಿಗೆ ಬಂದಿರುವುದು ಬೆಳಕಿಗೆ ಬಂದಿದೆ.
ಇದೀಗ ಮನೆ ನಿರ್ಮಾಣಕ್ಕೆ ಸಾಲಕೊಟ್ಟಿರುವ ಜನ ಸ್ಮಾಲ್ ಫೈನಾನ್ಸ್ ಸಂಸ್ಥೆಯವರು ಮನೆಯನ್ನು ಸೀಜ್ ಮಾಡಿದ್ದು ಪರಿಣಾಮ ಮನೆ ಮಾಲೀಕ ಎಂ. ರಾಜೇಶ್ ಹಾಗೂ ಅವರ ಪತ್ನಿ ಶ್ವೇತ ಮತ್ತು ಮಕ್ಕಳು ಬೀದಿಯಲ್ಲಿ ವಾಸ ಮಾಡುವ ಪರಿಸ್ಥಿತಿ ಬಂದಿದೆ. ಈ ಕುರಿತಂತೆ ತಮಗಾಗಿರುವ ಕಿರುಕುಳವನ್ನು ಕುಟುಂಬ ಹೊರ ಹಾಕಿದ್ದು ನ್ಯಾಯ ದೊರಕಿಸಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇನ್ನು ತಮಗಾದ ಕಿರುಕುಳದ ಬಗ್ಗೆ ಹೇಳಿರುವ ಕುಟುಂಬ, ಫೈನಾನ್ಸ್ ನವರ ಹತ್ತಿರ ರೈತ ಮುಖಂಡರನ್ನು ಕರೆದುಕೊಂಡು ಹೋಗಿ ಸ್ವಲ್ಪ ಹಣ ಪಾವತಿ ಮಾಡುವುದಾಗಿ ಹೇಳಿದ್ದು, ಆದರೂ ನಮಗೆ ಪೂರ್ಣ ಹಣ ಕಟ್ಟಬೇಕು ಎಂದು ನಮ್ಮ ಮನೆಯನ್ನು ಮುಟ್ಟುಗೊಲು ಮಾಡಿಕೊಂಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಈಗಿನ ಪರಿಸ್ಥಿತಿಯಲ್ಲಿ ಜೀವನ ನಡೆಸುವುದು ಕಷ್ಟವಾಗಿದ್ದು, ಬದುಕೇ ಬೇಸರ ತಂದಿದೆ. ನಮ್ಮ ಮನೆಯಲ್ಲಿ ಓದುವ ಮಕ್ಕಳಿದ್ದು ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ. ಮನೆಯ ಹೊರಗಡೆ ಇರುವ ಶೌಚಾಲಯ ಹಾಗೂ ಸ್ನಾನದ ಮನೆಗೂ ಬೀಗ ಹಾಕಲಾಗಿದ್ದು ನಮಗೆ ದೈನಂದಿನ ಚುಟುವಟಿಕೆಗೂ ಸಹ ಪರಿತಪಿಸುವಂತಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ. ನಮಗೆ ನ್ಯಾಯ ಕೊಡಿಸಿ ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬಸ್ಥರು ಧರಣಿ ಮಾಡಬೇಕಾಗುತ್ತದೆ ಎಂದು ಹೇಳಿರುವ ರಾಜೇಶ್ ಕುಟುಂಬ ನಮಗೆ ಬೇರೆ ಯಾವುದೇ ದಾರಿ ತೋಚುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
-
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications