ಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿ
ಚಾಮರಾಜನಗರ, ಜೂನ್ 20: ಅರಣ್ಯ ಸಚಿವ ಉಮೇಶ್ ಕತ್ತಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರಾದರೂ, ಮಾಧ್ಯಮದವರಿಂದ ಅಂತರ ಕಾಯ್ದುಕೊಂಡು ಕಾಡು ಸುತ್ತಿದ್ದಾರೆ. ಜೊತೆಗೆ, ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ.
ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ವನ್ಯಜೀವಿ ಸಫಾರಿ ನಡೆಸಿದ್ದಲ್ಲದೇ, ಮಾನವ ವನ್ಯಜೀವಿ ಸಂಘರ್ಷ ತಡೆಗೆ ರೈಲು ಕಂಬಿಗಳು ಕೊರತೆ ಹಿನ್ನೆಲೆ ಬೇಲಿಗಳನ್ನು ಅಳವಡಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ.
ಸಚಿವರ ಖಾಸಗಿ ಭೇಟಿ ಇದಲ್ಲದಿದ್ದರೂ ಮಾಧ್ಯಮದಿಂದ ಅಂತರ ಏಕೆ ಕಾಯ್ದುಕೊಂಡರು? ಎಂದು ತಿಳಿದುಬಂದಿಲ್ಲ. ಅಧಿಕಾರಿಗಳು ಕೂಡ ಈ ಸಂಬಂಧ ಹಾರಿಕೆ ಉತ್ತರ ಕೊಟ್ಟಿದ್ದಾರೆ. ಕಳೆದ ಎರಡು ಬಾರಿ ಭೇಟಿ ನೀಡಿದ ವೇಳೆ ಅತ್ಯಾಚಾರ, ಪಡಿತರ ವಿತರಣೆ ಹಾಗೂ ಬೆಳಗಾವಿ ವಿಭಜನೆ ಕುರಿತು ನೀಡಿದ್ದ ಹೇಳಿಕೆಗಳು ಭಾರೀ ಸದ್ದು ಮಾಡಿದ್ದವು. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಸುದ್ದಿ ಇದೆ.

ಏಡುಕುಂಡಲು ಎತ್ತಂಗಡಿ ಮಾಡದಂತೆ ಮನವಿ; ರೈತ ಸಂಘದ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ರೈತರು ಭಾನುವಾರ ಕೆ.ಗುಡಿಯಲ್ಲಿ ಸಚಿವರನ್ನು ಭೇಟಿಯಾಗಿ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಗಳು ಮತ್ತು ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡು ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಮನವಿ ಸಲ್ಲಿಸಿದರು.
ಇದರೊಟ್ಟಿಗೆ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ಡಿಸಿಎಫ್ ಏಡುಕುಂಡಲು ಅವರನ್ನು ಮೂರು ವರ್ಷಗಳವರೆಗೆ ವರ್ಗಾವಣೆ ಮಾಡದೇ ಜಿಲ್ಲೆಯಲ್ಲೇ ಉಳಿಸಿಕೊಳ್ಳಬೇಕು, ಚಂಗಡಿ ಗ್ರಾಮಸ್ಥರನ್ನು ಸ್ಥಳಾಂತರಿಸಬೇಕೆಂದು ಮನವಿ ಮಾಡಿದರು. ಚಂಗಡಿ ಸ್ಥಳಾಂತರದ ಬಗ್ಗೆ ಗುರುವಾರದಂದು ವಿಧಾನಸೌಧಕ್ಕೆ ಬನ್ನಿ ಅಲ್ಲೇ ಕೆಲಸ ಮಾಡಿಕೊಡುತ್ತೇನೆ ಎಂದ ಕತ್ತಿ, ಡಿಸಿಎಫ್ರನ್ನು ಜಿಲ್ಲೆಯಲ್ಲೇ ಮುಂದುವರಿಸುವ ಭರವಸೆ ನೀಡಿದ್ದಾರೆ.
ಬ್ಯಾರಿಕೇಡ್ ಅಳವಡಿಸಲು ಚಿಂತನೆ: ಎಚ್. ಡಿ. ಕೋಟೆ ತಾಲೂಕಿನ ನಾಗರಹೊಳೆಗೆ ಭೇಟಿ ನೀಡಿದ್ದ ಉಮೇಶ್ ಕತ್ತಿ, ಪ್ರಾಣಿಗಳು ಹೊರಬಾರದಂತೆ ಬ್ಯಾರೀಕೇಡ್ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ. ಅರಣ್ಯ ಇಲಾಖೆಯ ವತಿಯಿಂದ ಮಾನವ-ಪ್ರಾಣಿ ಸಂಘರ್ಷ ತಡೆಯಲು ಶ್ರಮಿಸಲಾಗುತ್ತಿದೆ. ಪ್ರಾಣಿಗಳು ಹೊರಬಾರದಂತೆ ಬ್ಯಾರೀಕೇಡ್ ಅಳವಡಿಸಲಾಗುತ್ತಿದೆ. ಪ್ರಾಣಿಗಳಿಗೆ ಉತ್ತಮ ಆಹಾರ ದೊರಕಿದರೆ ಅವು ಕಾಡಲ್ಲೆ ಉಳಿದು, ಮಾನವ ಸಂಘರ್ಷ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಮಾನವ ಮತ್ತು ಆನೆಗಳ ಸಂಘರ್ಷ ಇಂದು ನೆನ್ನೆಯದಲ್ಲ. ಅದು ಬಹಳ ಹಿಂದಿನಿಂದಲೂ ನಡೆಯುತ್ತಲೆ ಇದೆ. ಬಹುಶಃ ಪ್ರಾಣಿಗಳು ಶಾಂತವಾಗಿಯೇ ಇರುತ್ತವೆ, ಆದರೆ ನಾವು ಕ್ರೂರವಾಗಿದ್ದೇವೆ. ಇದರಿಂದ ಸಂಘರ್ಷ ಹೆಚ್ಚಾಗುತ್ತಿದೆ. ಸಾಧ್ಯವಾದಷ್ಟು ಕಾಡುಪ್ರಾಣಿಗಳಿಂದ ದೂರವಿರಲು ಪ್ರಯತ್ನ ಮಾಡಬೇಕು, ಇದನ್ನು ಅರಿತು ನಾವು ಪ್ರಾಣಿಗಳಿಂದ ದೂರವಿರುವುದು ಉತ್ತಮ ಎಂದರು.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications