ಚಾಮರಾಜನಗರ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ನಡುವೆ ಭಿನ್ನಮತ: ಮುಂದೇನಾಯ್ತು..?
ಚಾಮರಾಜನಗರ, ಸೆಪ್ಟೆಂಬರ್ 14: ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕು ಪಟ್ಟಣದ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ನಡುವೆ ಭಿನ್ನಮತ ಭುಗಿಲೆದ್ದಿದೆ. ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಮಹಮದ್ದಾಯೆಜ್ ಮತ್ತು ಕೊಳ್ಳೇಗಾಲ ಟೌನ್ ಘಟಕದ ಅಧ್ಯಕ್ಷ ಜಗದೀಶ್ ಶಾಸ್ತ್ರಿ ಮತ್ತು ಅವರವರ ಕಟ್ಟ ಬೆಂಬಲಿಗ ಪದಾಧಿಕಾರಿಗಳು ಹಲವಾರು ದಿನಗಳಿಂದ ಒಂದೇ ಬಣ್ಣದ ಎರಡು ಘಟಕಗಳ ಪದಾಧಿಕಾರಿಗಳ ನಡುವೆ ಸಾಕಷ್ಟು ನಿನ್ನ ಅಭಿಪ್ರಾಯ ಸೃಷ್ಟಿಗೊಂಡಿದ್ದವು.
ಈ ವಿಷಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಮಿತಿಯವರೆಗೂ ಮಾಹಿತಿ ತಲುಪಿದೆ. ಈ ಕಾರಣ ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿದ ಕರವೇ ರಾಜ್ಯ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿಗಳಾದ ಮಂಜೇಶ್ ಮತ್ತು ತಂಡದವರು ಆಗಮಿಸಿ ಎರಡು ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಕರೆದು ಇಬ್ಬರ ನಡುವೆ ಮುಗಿಲೆದ್ದಿದ್ದ ಭಿನ್ನಮತ ಸಮಾನಗೊಳಿಸಿದರು. ಅಲ್ಲದೇ ಅವರ ನಡುವೆ ಇದ್ದ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ.

ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಉಪಾಧ್ಯಕ್ಷ ಮಂಜೇಶ್ ರವರು ಮೊದಲು ಆಗಮಿಸಿದಾಗ ಕೊಳ್ಳೇಗಾಲ ತಾಲೂಕು ಘಟಕ ಹಾಗೂ ಟೌನ್ ಘಟಕದ ಪದಾಧಿಕಾರಿಗಳು ಹಾರ ಹಾಕಿ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ನಂತರ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ನಾವು ಕನ್ನಡ, ನಾಡು, ನುಡಿ, ಜಲ, ಭಾಷೆಗೋಸ್ಕರ ಹೋರಾಟ ನಡೆಸಬೇಕು. ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳು ವ್ಯವಸ್ಥಿತವಾದ ರೀತಿಯಲ್ಲಿ ಸಾರ್ವಜನಿಕರ ಕೆಲಸ ನಿರ್ವಹಿಸುತ್ತಿದೆಯಾ ಅಥವಾ ವಿಳಂಬ ಮಾಡುತ್ತಿದೆಯೋ ಎಂಬುದನ್ನು ಪರಿಶೀಲಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸ್ಪಂದನೆ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ನೂತನವಾಗಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣಕ್ಕೆ ನೂತನವಾಗಿ ಸೇರ್ಪಡೆ ಗೊಳ್ಳುತ್ತಿರುವವರಿಗೆ ಸ್ವಾಗತಿಸುವುದಕೋಸ್ಕರ, ಹಾಗೂ ಕೆಲವು ಜಿಲ್ಲೆಗಳಲ್ಲಿ ಹಾಗೂ ತಾಲೂಕುಗಳಲ್ಲಿ ಇರುವ ಕುಂದು ಕೊರತೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣ ಜಿಲ್ಲಾಧ್ಯಕ್ಷ ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಸ, ಶಿವರಾಜೇಗೌಡ, ತಾಲೂಕು ಅಧ್ಯಕ್ಷ ಮಹಮ್ಮದ್ ಅಯಾಜ್, ರೈತ ಮುಖಂಡ ಅಣಗಳ್ಳಿ ಬಸವರಾಜು, ಟೌನ್ ಘಟಕದ ಅಧ್ಯಕ್ಷ ಜಗದೀಶ್ ಶಾಸ್ತ್ರಿ, ಪ್ರಧಾನ ಕಾರ್ಯದರ್ಶಿ ಸುರೇಶ್, ಯೂನಸ್, ಕಾರ್ಯಾಧ್ಯಕ್ಷ ಮಹಮ್ಮದ್ ಅಬ್ದುಲ್, ಗೌರವಾಧ್ಯಕ್ಷ ಬಿಸಿಲಯ್ಯ, ಮಹಮ್ಮದ್ ಅಶ್ವಥ್ಅಸ್ವಾಕ್, ಇನ್ನಿತರರು ಹಾಜರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications