ಒಂದಡಿ ನೀರಿನಲ್ಲಿ ತೆಪ್ಪ ಸವಾರಿ... ವೈರಲ್ ವಿಡಿಯೋ ಬಗ್ಗೆ ಶಾಸಕ ಮಹೇಶ್ ಹೇಳಿದ್ದೇನು?
ಚಾಮರಾಜನಗರ, ಸೆಪ್ಟೆಂಬರ್ 10: ಅರ್ಧ ಅಡಿ ನೀರಲ್ಲಿ ಶಾಸಕ ಎನ್.ಮಹೇಶ್ ತೆಪ್ಪ ಸವಾರಿ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಾಸಕರು ಪ್ರತಿಕ್ರಿಯೆ ಕೊಟ್ಟಿದ್ದು, ತಾನು ನಾಟಕ ಮಾಡಿಲ್ಲ, ವೀಡಿಯೋ ವೈರಲ್ ಮಾಡುವವರು ಪೂರ್ತಿ ವಿಡಿಯೋ ಹಾಕದೇ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆ ದಿನ ತನಗೆ ಜ್ವರವಿದ್ದ ಹಿನ್ನೆಲೆ ಅನಿವಾರ್ಯವಾಗಿ ದೋಣಿ ಏರಬೇಕಾಯಿತು. ನಾನು ಪಬ್ಲಿಸಿಟಿಗಾಗಿ ಈ ರೀತಿ ನಾಟಕಗಳನ್ನು ಮಾಡಿ ಅಭ್ಯಾಸವಿಲ್ಲ, ಜೊತೆಗೆ ಅರ್ಧ ಅಡಿ ನೀರಲ್ಲಿ ತಾವು ತೆಪ್ಪ ಏರಿಲ್ಲ ಮೊಣಕಾಲುದ್ದ ನೀರಲ್ಲಿ ತೆಪ್ಪ ಏರಿದ್ದೆ ಎಂದು ಸಮಜಾಯಿಷಿ ಕೊಟ್ಟರು.
ನನಗೆ ಜ್ವರ ಇತ್ತು, ಅದಕ್ಕೆ ತೆಪ್ಪದಲ್ಲಿ ಹೋಗಿದ್ದೆ. ಅರ್ಧ ಅಡಿ ನೀರಲ್ಲಿ ತೆಪ್ಪ ಹೋಗಲು ಸಾಧ್ಯನಾ? ಜ್ವರವಿದ್ದ ಕಾರಣ ನೀರಲ್ಲಿ ಹೋಗಬಾರದು ಎಂದು ತೆಪ್ಪ ಏರಬೇಕಾಯಿತು. ಇಲ್ಲದಿದ್ದರೆ ನಡೆದುಕೊಂಡೇ ಹೋಗುತ್ತಿದ್ದೆ. ಅರ್ಧ ಅಡಿ ಒಂದು ಅಡಿ ನೀರಿನಲ್ಲಿ ತೆಪ್ಪ ನಡೆಸಲಾಗುವುದಿಲ್ಲ. ನೀರಲ್ಲಿ ಹೋದರೆ ಜ್ವರ ಹೆಚ್ಚಾಗುತ್ತೆ ಎಂದು ಹೋಗಲಿಲ್ಲ. ಮೂರಡಿಗಿಂತ ನೀರು ಹೆಚ್ಚಿತ್ತು. ತೊಡೆ ಮಟ್ಟ ನೀರಿತ್ತು. ಸುಮ್ಮನೆ ನಾಟಕ ಆಡುವುದಕ್ಕೆ ನನಗೆ ಗೊತ್ತಿಲ್ಲ. ವಿಡಿಯೋವನ್ನು ವೈರಲ್ ಮಾಡಿದ್ದಾರಲ್ಲ ಅವರು ನಾಟಕ ಆಡುತ್ತಿದ್ದಾರೆ ಎಂದರು.

ಶಾಸಕರು ಪ್ರವಾಹದ ಪರಿಶೀಲನೆ ಮಾಡಿದ ಸಂಪೂರ್ಣ ವಿಡಿಯೋವನ್ನು ಬಿಟ್ಟು, ನೀರಿನ ಹರಿವು ಕಡಿಮೆಯಾಗಿ ತೆಪ್ಪದಿಂದ ಇಳಿಯುವ ದೃಶ್ಯವನ್ನು ಕೆಲವರು ಸೆರೆ ಹಿಡಿದು ಟ್ರೋಲ್ ಮಾಡುತ್ತಿದ್ದಾರೆ ಎಂದು ಶಾಸಕ ಮಹೇಶ್ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂರು ದಿನಗಳ ಹಿಂದೆ ಸುರ್ವಣಾವತಿ ನದಿ ಪ್ರವಾಹಕ್ಕೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮ ಜಲಾವೃತಗೊಂಡಿತ್ತು. ಈ ವೇಳೆ ರಸ್ತೆ ಮೇಲೆ ನೀರು ಹರಿಯುತ್ತಿತ್ತು. ಹೀಗಾಗಿ ಪ್ರವಾಹ ವೀಕ್ಷಣೆಗೆಂದು ತೆರಳಿದ ಎನ್.ಮಹೇಶ್ ತೆಪ್ಪದಲ್ಲಿ ಕುಳಿತುಕೊಂಡು ಹೋಗಿದ್ದರು.
ನಗೆಪಾಟಲಿಗೆ ಈಡಾಗಿದ್ದ ರೇಣುಕಾಚಾರ್ಯ:
2019ರಲ್ಲೂ ರಾಜ್ಯದಲ್ಲಿ ಭಾರಿ ಮಳೆಯಾಗಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಹೊನ್ನಾಳಿ ಶಾಸಕ ರೇಣುಕಾಚಾರ್ಯ ಒಂದಡಿಗಿಂತ ಕಡಿಮೆ ನೀರಿದ್ದ ಜಾಗದಲ್ಲಿ ತೆಪ್ಪಕ್ಕೆ ಹುಟ್ಟುಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಿಕ್ಕಾಬಟ್ಟೆ ಟ್ರೋಲ್ ಆಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications