ಯಳಂದೂರಲ್ಲಿ ಕೋತಿ ಕಾಟಕ್ಕೆ ಬಸವಳಿದ ಜನ
ಚಾಮರಾಜನಗರ, ಫೆಬ್ರವರಿ 16 : ಬೇರೆಡೆಯಿಂದ ಬಂದು ಬೀಡು ಬಿಡುತ್ತಿರುವ ಕೋತಿಗಳ ಹಾವಳಿಗೆ ಯಳಂದೂರು ಪಟ್ಟಣದ ಜನ ಬಸವಳಿದಿದ್ದು, ಅವುಗಳಿಂದ ತಪ್ಪಿಸಿಕೊಂಡು ಬದುಕುವುದೇ ಕಷ್ಟವಾಗುತ್ತಿದೆ.
ಪಟ್ಟಣದ ಹಲವು ಬಡಾವಣೆಗಳಿಗೆ ನುಗ್ಗುತ್ತಿರುವ ಈ ಕೋತಿಗಳು ಮನೆಗಳ ಮೇಲೆ, ಅಂಗಡಿಗಳ ಮುಂದೆ, ಎಲ್ಲೆಂದರಲ್ಲಿ ಬೀಡುಬಿಟ್ಟು ತೊಂದರೆ ನೀಡುತ್ತಿವೆ. ಇದರಿಂದ ಜನ ತೊಂದರೆ ಅನುಭವಿಸುತ್ತಿದ್ದು, ಬೇರೆ ಏನೂ ಮಾಡಲಾಗದ ಪರಿಸ್ಥಿತಿ ಸ್ಥಳೀಯರದ್ದಾಗಿದೆ.
ಯಳಂದೂರಿನ ಅಗ್ರಹಾರ ಬಡಾವಣೆ, ದೇವಾಂಗ ಬೀದಿ, ಎಲೆಕೇರಿ ಬಡಾವಣೆ, ಮೊತ್ತದಕೇರಿ, ಗೌತಮ್ ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ಮನೆಗಳ ಮೇಲೆ ದಾಳಿ ಮಾಡುವ ಕೋತಿಗಳು ಹೆಂಚುಗಳನ್ನು ಒಡೆಯುವುದಲ್ಲದೆ ಕಿಟಕಿ, ಬಾಗಿಲುಗಳ ಮೂಲಕ ಮನೆಗೆ ನುಗ್ಗಿ ಆಹಾರ ಪದಾರ್ಥ ತರಕಾರಿ ಹಣ್ಣುಗಳನ್ನು ಹೊತ್ತೊಯ್ಯುತ್ತವೆ. ಹೀಗಾಗಿ ಜನ ಕೋತಿಗಳ ಹಾವಳಿಯಿಂದ ಭಯಭೀತರಾಗಿ ಕಿಟಕಿ, ಬಾಗಿಲುಗಳನ್ನು ಹಾಕಿಕೊಂಡೇ ಜೀವನ ಸಾಗಿಸುತ್ತಿದ್ದಾರೆ.

ಕೆಲವೊಮ್ಮೆ ಕೋತಿಗಳನ್ನು ಓಡಿಸಲು ಹೋದ ವೇಳೆ ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಪ್ರಸಂಗಗಳು ಇಲ್ಲದಿಲ್ಲ. ಕಾಡಂಚಿನ ಜನಕ್ಕೆ ಚಿರತೆ, ಕಾಡಾನೆಗಳ ಕಾಟವಾದರೆ, ಪಟ್ಟಣದಲ್ಲಿರುವ ಹಿಂಡು ಹಿಂಡಾಗಿ ದಾಳಿ ಮಾಡುವ ಕೋತಿಗಳ ಕಾಟ ಆರಂಭವಾಗಿದೆ. ದಾರಿಯಲ್ಲಿ ನಡೆದುಕೊಂಡು ಹೋಗುವ ಮಹಿಳೆಯರು ಮತ್ತು ಮಕ್ಕಳ ಕೈನಿಂದ ವಸ್ತುಗಳನ್ನು ಕೆಲವು ಕೋತಿಗಳು ಎಳೆದುಕೊಂಡು ಹೋಗುತ್ತಿವೆ. ಒಟ್ಟಾರೆ ಸ್ಥಳೀಯ ಜನಕ್ಕೆ ಕೋತಿಗಳೊಂದಿಗೆ ಹೋರಾಟ ನಡೆಸುತ್ತಾ ಬದುಕುವುದೇ ಸವಾಲ್ ಆಗಿದೆ.
ಕೋತಿಗಳ ಹಾವಳಿಗೆ ಕಡಿವಾಣ ಹಾಕಿ ಜೀವನ ನಡೆಸುವುದು ಹೇಗೆ ಎಂಬುದರ ಬಗ್ಗೆ ಜನ ಚಿಂತಾಕ್ರಾಂತರಾಗಿದ್ದು, ಸ್ಥಳೀಯ ಪಂಚಾಯಿತಿ ಇತ್ತ ಗಮನಹರಿಸಿ ಕ್ರಮಕೈಗೊಳ್ಳಬೇಕು ಎಂಬುದಾಗಿ ಜನ ಆಗ್ರಹಿಸಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications