ಮಲೆಮಹದೇಶ್ವರ ಬೆಟ್ಟದಲ್ಲಿ 2 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ
ಚಾಮರಾಜನಗರ ನವೆಂಬರ್ 13: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟವು ರಾಜ್ಯದ ಹೆಚ್ಚು ಆದಾಯ ಹೊಂದುವ ದೇಗುಲಗಳಲ್ಲಿ ಒಂದಾಗಿದ್ದು, ಶುಕ್ರವಾರ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಗಿದೆ.
ಲಾಕ್ ಡೌನ್ ನಡುವೆಯೂ 2 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ. ಬೆಟ್ಟದಲ್ಲಿ 54 ದಿನಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು 2,21,32,439 ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ. 40 ಗ್ರಾಂ ಚಿನ್ನ ಹಾಗೂ 1.667 ಕೆಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ. ಇದೇ 25 ಹಾಗೂ 26ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಕೊರೊನಾ ವೈರಸ್ ನಿಂದಾಗಿ ವಿಧಿಸಲಾಗಿದ್ದ ಲಾಕ್ ಡೌನ್ ನಿಂದ ಸುಮಾರು ಮೂರು ತಿಂಗಳ ಕಾಲ ದೇವಸ್ಥಾನಕ್ಕೆ ಪ್ರವೇಶ ನಿಷೇಧಿಸಲಾಗಿತ್ತು. ದಸರಾ ಸಂದರ್ಭದಲ್ಲೂ ನಿರ್ಬಂಧ ವಿಧಿಸಲಾಗಿದ್ದು, ನವೆಂಬರ್ 4ರಿಂದ ತೆರವುಗೊಳಿಸಲಾಗಿತ್ತು. ಆನಂತರ ದೇವಾಲಯದ ಎಲ್ಲಾ ಸೇವೆಗಳು ಪುನರಾರಂಭಗೊಂಡಿವೆ. ದೇವಾಲಯದಲ್ಲಿ ದಾಸೋಹ ಮತ್ತು ಜಾತ್ರೆಗಳನ್ನು ಹೊರತುಪಡಿಸಿ ದೈನಂದಿನ ಸಾಂಪ್ರದಾಯಿಕ ಸೇವೆಗಳು ಹಾಗೂ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಈ ಹಿಂದೆ ದೇವರ ದರ್ಶನ ವ್ಯವಸ್ಥೆ ಮಾತ್ರ ಇತ್ತು, ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಕ್ತರು ಪಾಲ್ಗೊಳ್ಳುವಂತಿರಲಿಲ್ಲ.

ಇದೀಗ ನಿರ್ಬಂಧ ತೆಗೆದು ಹಾಕಲಾಗಿದ್ದು, ಭಕ್ತರು ಎಂದಿನಂತೆ ಅಭಿಷೇಕ, ಪೂಜಾ ಕೈಂಕರ್ಯಗಳನ್ನು ಮಾಡಿಸಬಹುದಾಗಿದೆ. ಆದರೆ 12 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ ಹಾಗೂ 65 ವರ್ಷಕ್ಕಿಂತ ಹೆಚ್ಚು ಇರುವ ವ್ಯಕ್ತಿಗಳಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶವಿಲ್ಲ.
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications