ಚಾಮರಾಜನಗರ: ಬಿರುಗಾಳಿ ಮಳೆಗೆ ನೆಲಕಚ್ಚಿದ 3,000ಕ್ಕೂ ಹೆಚ್ಚು ಬಾಳೆ ಗಿಡಗಳು, ಅನ್ನದಾತ ಕಣ್ಣೀರು
ಚಾಮರಾಜನಗರ, ಮೇ, 11: ಇಂದು (ಮೇ 11) ಮಧ್ಯಾಹ್ನ ಸುರಿದ ಬಿರುಗಾಳಿ ಮಳೆಗೆ 3,000ಕ್ಕೂ ಹೆಚ್ಚು ಬಾಳೆಗಿಡಗಳು ನೆಲಕಚ್ಚಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಇಂದು (ಮೇ 11) ಮಟ ಮಟ ಮಧ್ಯಾಹ್ನವೇ ಸುರಿದ ಬಿರುಗಾಳಿ ಮಳೆಗೆ ಮೂರು ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನೆಲಕಚ್ಚಿದ ಘಟನೆ ಚಾಮರಾಜನಗರ ತಾಲೂಕಿನ ಉತ್ತುಹಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಬಾಳೆ ಬೆಳೆ ನಾಶವಾದ ಹಿನ್ನೆಲೆ ರವಿ ಎಂಬುವರು ಕಣ್ಣೀರಿಟ್ಟಿದ್ದಾರೆ.

ರೈತ ರವಿ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದರು. ಇದೀಗ ಬಿರುಗಾಳಿ ಮಳೆಗೆ ಬಾಳೆಗಿಡಗಳು ನೆಲಕಚ್ಚಿದ ಹಿನ್ನೆಲೆ 6 ತಿಂಗಳ ಶ್ರಮ ಅರ್ಧ ತಾಸಿನಲ್ಲಿ ನಾಶವಾದಂತಾಗಿದೆ. ಈ ಮೂಲಕ ರೈತ ರವಿ ಕಂಡ ಕನಸ್ಸು ಗಾಳಿ ಮಳೆಯಲ್ಲಿ ಕೊಚ್ಚಿ ಹೋದಂತಾಗಿದೆ.
ಇನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಬೇಕು. ಹಾಗೂ ಈ ನಷ್ಟಕ್ಕೆ ಸ್ಪಂದಿಸಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಣ್ಣೀರಿಡುತ್ತಾ ಮನವಿ ಮಾಡಿದ್ದಾರೆ. ಇನ್ನು ಈ ಬಾಳೆ ನಾಶದ ದೃಶ್ಯ ಡ್ರೋನ್ನಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಮಧ್ಯಾಹ್ನವೇ ಮಳೆರಾಯನ ಆರ್ಭಟ: ಇಷ್ಟು ದಿನ ಬಿಸಿಲಿನ ಬೇಗೆಗೆ ಬಸವಳಿದಿದ್ದ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗಯೇ ಎರಡು ದಿನ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದು, ಇದೀಗ ವರುಣ ಇಂದು (ಮೇ 11) ಮಧ್ಯಾಹ್ನ ಭರ್ಜರಿಯಾಗಿ ಎಂಟ್ರಿ ಕೊಟ್ಟು ಜಿಲ್ಲೆಯ ಹಲವೆಡೆ ತಂಪೆರೆದಿದ್ದಾನೆ.
ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ತಾಲೂಕಿನಾದ್ಯಂತ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಆರ್ಭಟದೊಂದಿಗೆ ಅಬ್ಬರದ ಮಳೆಯಾಗಿದ್ದು, ಇದರಿಂದ ಬಿಸಿಲಿನಿಂದ ಬಸವಳಿದಿದ್ದ ಜನರ ಮುಖದಲ್ಲಿ ಸಂತಸ ಮೂಡಿದಂತಾಗಿದೆ.
ಚಾಮರಾಜನಗರ, ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಬ್ಯಾಡಮೂಡ್ಲು, ಹೆಬ್ಬಸೂರು, ಚಂದಕವಾಡಿ, ಮರಿಯಾಲ, ಕೆಲ್ಲಂಬಳ್ಳಿ ಸುತ್ತಮುತ್ತಾ ಭರ್ಜರಿ ಮಳೆಯಾಗಿದೆ. ಮತ್ತೊಂದೆಡೆ ಬಿರುಗಾಳಿ ರಭಸಕ್ಕೆ ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನವನದ ಭುವನೇಶ್ವರಿ ವಿಗ್ರಹದ ಬಳಿ ಬೃಹತ್ ಗಾತ್ರ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್ ಈ ವೇಳೆ ಉದ್ಯಾನವನದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ಹೆಬ್ಬಸೂರು, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ಹೆಕ್ಟೇರ್ಗಟ್ಟಲೆ ಬಾಳೆ ಫಸಲು ನೆಲಕಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications