ಗುಂಡ್ಲುಪೇಟೆ: ಈ ವೈರಸ್ಗೆ 30ಕ್ಕೂ ಹೆಚ್ಚು ಕುರಿ ಬಲಿ
ಚಾಮರಾಜನಗರ, ಡಿಸೆಂಬರ್, 06: ವೈರಸ್ ಸೋಂಕಿಗೆ ತುತ್ತಾಗಿ 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿದ್ದು, ಮತ್ತಷ್ಟು ಸೋಂಕಿಗೆ ಒಳಗಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಮೇಕೆಗಳಿಗೆ ಪಿಪಿಆರ್ ಎಂಬ ಸಾಂಕ್ರಾಮಿಕ ರೋಗ ತಗುಲಿ ಅಸುನೀಗುತ್ತಿವೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಂತೆಯಿಂದ ಖರೀದಿಸಿ ತಂದ ಮೇಕೆ ಮರಿಯಿಂದ ಈ ವೈರಸ್ ಹರಡಿದ್ದು, ಕಳೆದ 15 ದಿನಗಳಿಂದ 30ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಕಳೆದುಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಹೋರಾಟಗಾರ ಕಾಂತರಾಜು ಪ್ರತಿಕ್ರಿಯೆ ಕೊಟ್ಟಿದ್ದು, ಮೇಕೆ ಸಾಕಾಣಿಕೆದಾರರು ಸತ್ತ ಮೇಕೆಗಳನ್ನು ಕಸದ ತಿಪ್ಪೆ ಅಥವಾ ಭೂಮಿಯಲ್ಲಿ ಹೂಳುವುದನ್ನು ಮಾಡುತ್ತಿರುವುದರಿಂದ ಮತ್ತಷ್ಟು ಕುರಿಗಳಿಗೆ ಈ ವೈರಸ್ ಹರಡಿದೆ. ಕಾಯಿಲೆ ನಿಯಂತ್ರಣಕ್ಕೆ ಪಶು ಇಲಾಖೆ ತ್ವರಿತ ಕ್ರಮ ಕೈಗೊಳ್ಳಬೇಕು. ಶಿವಪುರ ವಲಯದ ಪಶು ಚಿಕಿತ್ಸಕರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಾಯಿಲೆ ತಡೆಗೆ ಅವರ ಸಲಹೆಯಂತೆ ರೈತರೇ ಮೈಸೂರಿನಿಂದ ಲಸಿಕೆ ಖರೀದಿಸಿ ತಂದಿದ್ದಾರೆ. ಲಸಿಕೆ ನೀಡಿದ ನಂತರವೂ ನಿಯಂತ್ರಣ ಸಾಧ್ಯವಾಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರೇ ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದಾರೆ. ಇವರ ಜೊತೆಗೆ ಕ್ಷೇತ್ರದ ಶಾಸಕರು ಕಾಯಿಲೆ ಬಗ್ಗೆ ಮಾಹಿತಿ ಪಡೆದು ಸಚಿವರ ಗಮನಕ್ಕೆ ತಂದು ರೋಗ ತಡೆಗೆ ಕ್ರಮ ವಹಿಸಿ, ಮೇಕೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು. ಆ ಮೂಲಕ ರೈತ ಕುಟುಂಬಗಳು ಬೀದಿಗೆ ಬೀಳುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಚೌಡಹಳ್ಳಿ ಗ್ರಾಮದಲ್ಲಿ ಪಿಪಿಆರ್ ವೈರಸ್ ಸೋಂಕಿನಿಂದ ಕಳೆದ 15 ದಿನಗಳಲ್ಲಿ 30ಹೆಚ್ಚು ಮೇಕೆ ಮತ್ತು ಮರಿಗಳು ಮೃತಪಟ್ಟಿವೆ. ಸಣ್ಣ ಮರಿಗಳು ವೈರಸ್ ಸೋಂಕಿನಿಂದ ಮೃತ ಪಟ್ಟಾಗ ಮರಿಗಳನ್ನು ಹೂಳದೆ ಬೀಸಾಡಿದ್ದಾರೆ. ಆದ್ದರಿಂದ ಸೋಂಕು ಉಲ್ಬಣಗೊಂಡು ಹರಡಿದೆ. ಗ್ರಾಮದಲ್ಲಿ ಎಲ್ಲಾ ಮರಿಗಳಿಗೂ ವ್ಯಾಕ್ಸಿನೇಷನ್ ಮಾಡಲಾಗಿದೆ, ಇನ್ನೂ ಮರಿಗಳ ಸಾವು ನಿಯಂತ್ರಣವಾಗಿಲ್ಲ. ಸೋಂಕು ನಿಯಂತ್ರಣಕ್ಕೆ ಬರಲು 21 ದಿನಗಳು ಬೇಕು. ಮೃತಪಟ್ಟ ಎಲ್ಲಾ ಮೇಕೆಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮೋಹನ್ ಕುಮಾರ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications