2023ರಲ್ಲಿ ಗಡಿಜಿಲ್ಲೆಯ ಪ್ರವಾಸಿ ತಾಣಗಳಿಗೆ 70 ಲಕ್ಷಕ್ಕೂ ಅಧಿಕ ಪ್ರವಾಸಿಗರ ಭೇಟಿ-ಅಂಕಿಅಂಶಗಳ ವಿವರ ತಿಳಿಯಿರಿ
ಚಾಮರಾಜನಗರ, ಡಿಸೆಂಬರ್, 26: ಗಡಿಜಿಲ್ಲೆ ಚಾಮರಾಜನಗರ ಅರಣ್ಯ ಪ್ರದೇಶ ಹೊಂದಿರುವ ಜೊತೆಗೆ ಪುರಾತನ ದೇಗುಲ, ಪ್ರಸಿದ್ಧ ಯಾತ್ರಸ್ಥಳಗಳನ್ನು ಹೊಂದಿರುವ ಜಿಲ್ಲೆಯಾಗಿದ್ದು, 2023ರಲ್ಲಿ 70 ಲಕ್ಷಕ್ಕೂ ಅಧಿಕ ಮಂದಿ ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಚಾಮರಾಜನಗರ ಪ್ರವಾಸೋದ್ಯಮ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ, ಚಾಮರಾಜನಗರದ 22 ಪ್ರವಾಸಿ ಸ್ಥಳಗಳಿಗೆ 2023ರಲ್ಲಿ 70 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ಅತಿಹೆಚ್ಚು ಜನರು ಭೇಟಿ ಕೊಟ್ಟ ಸ್ಥಳದಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಮೊದಲ ಸ್ಥಾನದಲ್ಲಿದೆ.

ನಾಡಿನ ಪ್ರಸಿದ್ಧ ಯಾತ್ರಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ 40 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದರೆ, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ 1 ವರ್ಷದಲ್ಲಿ 2.5 ಲಕ್ಷದಷ್ಟು ಮಂದಿ ಹಿಮಾಚ್ಛಾದಿತ ಬೆಟ್ಟದ ಚೆಲುವನ್ನು ಕಂಡಿದ್ದಾರೆ. ಇನ್ನು ಪ್ರವಾಸೋದ್ಯಮ ಇಲಾಖೆಯು ಜಿಲ್ಲೆಯಲ್ಲಿ 22 ಪ್ರವಾಸಿ ಸ್ಥಳಗಳನ್ನು ಗುರುತಿಸಿದ್ದು, ಪ್ರವಾಸಿಗರು ಭೇಟಿ ನೀಡಿದ ಅಂದಾಜು ಸಂಖ್ಯೆಯನ್ನು ಪ್ರತಿತಿಂಗಳು ಲೆಕ್ಕ ಹಾಕಲಿದೆ.
ಪ್ರವಾಸಿ ತಾಣಗಳ ವಿವರ: ಚಾಮರಾಜನಗರದ ಚಿಕ್ಕಹೊಳೆ, ಸುವರ್ಣಾವತಿ, ಕರಿವರದರಾಜಬೆಟ್ಟ, ನರಸಮಂಗಲ, ಬಂಡೀಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ತೆರಕಣಾಂಬಿ ದೇವಾಲಯ, ಹುಲಗನಮುರುಡಿ, ಕೊಳ್ಳೇಗಾಲದ ಮರಡಿಗುಡ್ಡ, ತ್ರಯಂಬಕಪುರ, ಬಿಳಿಗಿರಿರಂಗನ ಬೆಟ್ಟ, ಬಳೆಮಂಟಪ, ಹೊಗೆನಕಲ್ ಜಲಪಾತ, ಭರಚುಕ್ಕಿ, ವೆಸ್ಲಿ ಸೇತುವೆ, ಮಲೆ ಮಹದೇಶ್ವರ ಬೆಟ್ಟ, ಪಾಲಾರ್ ಗಡಿ, ಒಡೆತರಪಾಳ್ಯ ಟಿಬೆಟಿಯನ್ ಕ್ಯಾಂಪ್, ಒನ್ನಮೇಟಿ-ಅತ್ತಿಖಾನೆಗಳುಗಳಿಗೆ ಕಳೆದ ವರ್ಷ ಒಟ್ಟಾರೆ 70 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ.
ವಿದೇಶಿ ಪ್ರವಾಸಿಗರ ಭೇಟಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಕೆ.ಗುಡಿ, ಬಿಳಿಗಿರಿರಂಗನ ಬೆಟ್ಟಕ್ಕೆ ನೂರಾರು ಮಂದಿ ವಿದೇಶಿ ಪ್ರವಾಸಿಗರು ಭೇಟಿ ನೀಡಿ ಗಡಿಜಿಲ್ಲೆ ಪ್ರಕೃತಿ ಚೆಲುವನ್ನು ತುಂಬಿಕೊಂಡಿದ್ದಾರೆ. ಸರ್ಕಾರವು ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಯೋಜನೆ ಜಾರಿಗೊಳಿಸಿದ ಬಳಿಕ ಗಡಿಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದೆ.
ಜನವರಿಯಿಂದ ಆಗಸ್ಟ್ವರೆಗೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ 30-35 ಸಾವಿರ ಪ್ರವಾಸಿಗರು ಭೇಟಿ ಕೊಟ್ಟಿದ್ದರೆ, ಆಗಸ್ಟ್ ಬಳಿಕ ಇದರ ಸಂಖ್ಯೆ ದ್ವಿಗುಣಗೊಂಡಿದೆ. ನವೆಂಬರ್ನಲ್ಲಿ 80 ಸಾವಿರ ಮಂದಿ ಭೇಟಿ ಕೊಟ್ಟಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೂ ಕೂಡ 4-5 ಲಕ್ಷದಷ್ಟು ಇದ್ದ ಭಕ್ತರ ಸಂಖ್ಯೆ ಆಗಸ್ಟ್ ಬಳಿಕ 6-7 ಲಕ್ಷ ದಾಟಿದ್ದು, ಭರಚುಕ್ಕಿ, ಬಿಳಿಗಿರಿರಂಗನ ಬೆಟ್ಟ, ಹೊಗೆನಕಲ್ ಜಲಪಾತಕ್ಕೆ ಭೇಟಿ ಕೊಟ್ಟವರ ಸಂಖ್ಯೆ ಕಳೆದ 4 ತಿಂಗಳಲ್ಲಿ ದ್ವಿಗುಣವಾಗಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications