ಒಂದೇ ತಿಂಗಳಲ್ಲಿ ಮಲೆ ಮಹದೇಶ್ವರನ ಹುಂಡಿಯಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ?
ಚಾಮರಾಜನಗರ, ಡಿಸೆಂಬರ್ 30: ಜಿಲ್ಲೆಯ ಹನೂರು ತಾಲೂಕಿನ ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಹುಂಡಿಗೆ ಕೋಟಿ ರೂಪಾಯಿ ಕಾಣಿಕೆ ಹಣ ಬೀಳುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗುತ್ತಿರುವುದು ಗಮನಾರ್ಹವಾಗಿದೆ.
ಕಳೆದೊಂದು ತಿಂಗಳಲ್ಲಿ 1 ಕೋಟಿ 35 ಲಕ್ಷದ 61 ಸಾವಿರದ 178 ರೂಪಾಯಿಗಳು ಕಾಣಿಕೆ ಹಣ ಸಂಗ್ರಹವಾಗಿದ್ದು, ಕೋಟಿ ಒಡೆಯನಾಗಿಯೇ ಮಲೆಮಹದೇಶ್ವರ ಮುಂದುವರೆಯುತ್ತಿದ್ದಾನೆ. ಡಿಸೆಂಬರ್ ತಿಂಗಳಲ್ಲಿ ದೇಶದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಆಗಮಿಸಿ ಮಹದೇಶ್ವರ ದರ್ಶನ ಪಡೆದ ಬಳಿಕ ಕಾಣಿಕೆ ರೂಪವಾಗಿ 1 ಕೋಟಿ 35 ಲಕ್ಷದ 61 ಸಾವಿರದ 178 ರೂಪಾಯಿಗಳು ಹಾಗೂ 38 ಗ್ರಾಂ ಚಿನ್ನ ಹಾಗೂ 1 ಕೆಜಿ 225 ಗ್ರಾಂ ಬೆಳ್ಳಿ ಪದಾರ್ಥಗಳು ಕಾಣಿಕೆಯಾಗಿ ನೀಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಭಾರಿ ಬಿಗಿ ಭದ್ರತೆಯೊಂದಿಗೆ ಇತ್ತೀಚೆಗೆ ಸತತ 13 ಗಂಟೆಗಳ ಕಾಲ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಪೊಲೀಸ್ ಬಂದೋಬಸ್ತ್ ನಲ್ಲಿ ಮಲೆ ಮಹದೇಶ್ವರ ದೇವಸ್ಥಾನಗಳ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ. ಗಾಯತ್ರಿ ನೇತೃತ್ವದಲ್ಲಿ ಎಣಿಕೆ ಮಾಡಲಾಗಿದೆ.

ಈ ವೇಳೆ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿ, ಉಪ ಕಾರ್ಯದರ್ಶಿ ರಾಜಶೇಖರಮೂರ್ತಿ, ಅಧೀಕ್ಷಕ ಎಂ.ಬಸವರಾಜು, ಲೆಕ್ಕಾಧೀಕ್ಷಕ ಮಹದೇವಸ್ವಾಮಿ, ಆರೋಗ್ಯ ನಿರೀಕ್ಷಕ ಶ್ರೀಕಾಂತ್ ವಿಭೂತಿ ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಚೆರಿಯ ಪ್ರಥಮ ದರ್ಜೆ ಸಹಾಯಕ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ ಆರಕ್ಷಕ ಸಿಬ್ಬಂದಿ, ಎಸ್ಬಿಎಂ ವ್ಯವಸ್ಥಾಪಕರಾದ ಸೆಂದಿಲ್ ನಾಥನ್ ಮತ್ತು ಸಿಬ್ಬಂದಿ ಇದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications