ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ; ವಿಷಾಹಾರ ಸೇವಿಸಿ ಹತ್ತಕ್ಕೂ ಹೆಚ್ಚು ಜಾನುವಾರುಗಳು ಸಾವು

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜುಲೈ 4: ವಿಷಮಿಶ್ರಿತ ಮೇವನ್ನು ಸೇವಿಸಿ 10ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ದಾರುಣ ಘಟನೆ ಹನೂರು ತಾಲ್ಲೂಕಿನ ಹುತ್ತೂರು ಗ್ರಾಮದಲ್ಲಿ ನಿನ್ನೆ ಶುಕ್ರವಾರ ನಡೆದಿದೆ.

Recommended Video

China reacts to Modi's surprise visit to galwan valley | Oneindia Kannada

ತಾಲೂಕಿನ ಹುತ್ತೂರು ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ್ದ 4, ಶಿವಮೂರ್ತಿ ಎಂಬುವವರಿಗೆ ಸೇರಿದ್ದ 3, ರಂಗಸ್ವಾಮಿ ಎಂಬುವವರಿಗೆ ಸೇರಿದ್ದ 1, ಕೃಷ್ಣಪ್ಪ ಎಂಬುವವರಿಗೆ ಸೇರಿದ್ದ 1 ಮತ್ತು ಶಿವಮಲ್ಲು ಎಂಬುವವರಿಗೆ ಸೇರಿದ್ದ 1 ಜಾನುವಾರು ಮೃತಪಟ್ಟಿವೆ.

ಚಿಕ್ಕಮಗಳೂರಿನಲ್ಲಿ ವಿಷ ಪ್ರಾಶನದ ಹಲಸು ತಿನ್ನಿಸಿದ ದುರುಳರು; ಮೂರು ದನಗಳ ಸಾವುಚಿಕ್ಕಮಗಳೂರಿನಲ್ಲಿ ವಿಷ ಪ್ರಾಶನದ ಹಲಸು ತಿನ್ನಿಸಿದ ದುರುಳರು; ಮೂರು ದನಗಳ ಸಾವು

ಏನಿದು ಘಟನೆ: ತಾಲೂಕಿನ ಹುತ್ತೂರು ಗ್ರಾಮದಲ್ಲಿ ಮೇಯಲು ಹೊರಟಿದ್ದ ಕೆಲ ಜಾನುವಾರುಗಳು ರಸ್ತೆ ಬದಿಯ ಅಲ್ಲಲ್ಲಿ ಮೃತಪಟ್ಟಿವೆ. ಇನ್ನು ಕೆಲ ಜಾನುವಾರುಗಳು ಹೊಟ್ಟೆ ಉಬ್ಬಿಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸ್ಥಿತಿಯಲ್ಲಿ ಕಂಡುಬಂದಿವೆ. ಇದನ್ನು ಗಮನಿಸಿದ ಕೂಡಲೇ ಗ್ರಾಮಸ್ಥರು ಆತಂಕಕ್ಕೀಡಾಗಿ ಪಶು ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪಿ.ಜಿ.ಪಾಳ್ಯ ಪಶು ಇಲಾಖೆ ಜಾನುವಾರು ಅಧಿಕಾರಿ ರಾಜೇಂದ್ರ ಸ್ಥಳಕ್ಕೆ ಭೇಟಿ ನೀಡಿ ನಿತ್ರಾಣವಾಗಿದ್ದ ಜಾನುವಾರುಗಳಿಗೆ ಅಗತ್ಯ ಔಷಧೋಪಚಾರ ನೀಡಿದ್ದಾರೆ.

More Than Ten Cattles Died By Eating Poisonous Fodder At Chamarajanagar

ಜಾನುವಾರುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಗ್ರಾಮದ ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ. ಕೆಲವರು ಜಾನುವಾರುಗಳು ಕುಡಿಯುವ ಹಳ್ಳದ ನೀರಿಗೆ ಕಿಡಿಗೇಡಿಗಳು ವಿಷ ಮಿಶ್ರಣ ಮಾಡಿದ್ದಾರೆ ಎನ್ನುತ್ತಿದ್ದು, ಇನ್ನು ಕೆಲವರು ಜಮೀನಿನಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕಯುಕ್ತ ಮೇವು ಸೇವಿಸಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ಸಾವಿಗೀಡಾಗಿರುವ ಜಾನುವಾರುಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ.

English summary
More than 10 cattle have died after consuming poisonous fodder in Hunur at chamarajanagar district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X