ಸಿದ್ದರಾಮೋತ್ಸವವನ್ನು ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸೇರಿಸೋದ್ ಬಾಕಿ!
ಚಾಮರಾಜನಗರ, ಜುಲೈ 11: "ನಾವು ಇಷ್ಟು ದಿನ ಆ ರಥೋತ್ಸವ ಈ ರಥೋತ್ಸವ ಕೇಳಿದ್ದೆವು. ಈಗ ಸಿದ್ದರಾಮೋತ್ಸವ ಬಂದಿದೆ" ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದರು.
ಚಾಮರಾಜನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಳಿಗಿರಿ ರಥೋತ್ಸವ, ಶ್ರೀರಾಮೋತ್ಸವ ಇತ್ತು ಈಗ ಒಂಟಿಕೊಪ್ಪಲ್ ಪಂಚಾಗದಲ್ಲಿ ಸಿದ್ದರಾಮೋತ್ಸವ ಸೇರಿಸೋದು ಒಂದು ಬಾಕಿ, ಅದನ್ನು ಸೇರಿಸಿಬಿಟ್ಟರೆ ಸರಿಯಾಗುತ್ತದೆ. ಪ್ರಚಾರಕ್ಕೆ ಏನೆಲ್ಲಾ ನಾಟಕ ಮಾಡಬೇಕೋ ಅದನ್ನು ಮಾಡುತ್ತಿದ್ದಾರೆ, ಮಾಡಲಿ ಬಿಡಿ" ಎಂದು ವ್ಯಂಗ್ಯ ಮಾಡಿದ್ದಾರೆ.
"ಆರಂಭದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು, ಅವರ ಜಾತಿಯವರು ದಾವಣಗೆರೆಯಲ್ಲಿ 5 ಲಕ್ಷ ಜನರನ್ನು ಸೇರಿಸಿ ಸಿದ್ದರಾಮೋತ್ಸವ ಮಾಡುವ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಆದರೆ, ಪಕ್ಷದಲ್ಲೇ ಭಿನ್ನಾಭಿಪ್ರಾಯ ಬಂದಿದ್ದರಿಂದ ದೊಡ್ಡ ಸಮಿತಿಯೊಂದನ್ನು ಮಾಡಿಕೊಂಡು ಪಕ್ಷದ ವತಿಯಿಂದಲೇ ಮಾಡುತ್ತಿದ್ದಾರೆ" ಎಂದು ಕಾರ್ಯಕ್ರಮದ ವಿರುದ್ಧ ಟೀಕಿಸಿದರು.

ಪ್ರಧಾನಿ ಮೋದಿ ತೊಲಗಿದರೇ ದೇಶ ಉದ್ಧಾರ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, "ಮೋದಿಯವರು ದೇಶದ ಜನರಿಂದ ಆಯ್ಕೆಯಾಗಿ ಬಂದಿದ್ದಾರೆ. 5 ವರ್ಷಕ್ಕೆ ಅಧಿಕಾರ ನಡೆಸಲು ಬಂದಿದ್ದಾರೆ ಹೊರೆತು ಸಿದ್ದರಾಮಯ್ಯನನ್ನು ಕೇಳಿಬಂದಿಲ್ಲ. ಈಗಾಗಲೇ ಸಿದ್ದರಾಮಯ್ಯಗೆ ಬ್ಯಾಲೆಟ್ ಪೇಪರ್ ಮೂಲಕ ಜನರು ಪಾಠ ಕಲಿಸಿದ್ದಾರೆ. ಮೋದಿ, ನಾವೆಲ್ಲಾ ನಾಮಿನೇಟ್ ಆಗಿ ಬಂದವರಲ್ಲ, ಜನರಿಂದ ಆರಿಸಿ ಬಂದವರು. ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಯೋಚನೆ ಮಾಡಿ ಮಾತನಾಡಬೇಕು. ಜನರ ಕೈಯಲ್ಲಿಎಲ್ಲಾ ಇದೆ. ಚುನಾವಣೆ ಬರುತ್ತೆ ಅವರೇ ಆದೇಶ ಕೊಡುತ್ತಾರೆ. ಸುಮ್ಮನೆ ಕಿರುಚಿ ಮೈ ಪರಚಿಕೊಳ್ಳುತ್ತಿದ್ದಾರೆ" ಎಂದು ತಿರುಗೇಟು ಕೊಟ್ಟರು.
"ಸರ್ವೇ ಪ್ರಕಾರ ಕಾಂಗ್ರೆಸ್ ಗೆ ಅಧಿಕಾರ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಎಲ್ಲವೂ ಜನರಿಗೆ ಗೊತ್ತಿದೆ, ಚುನಾವಣೆ ಬಂದಾಗ ತೋರಿಸುತ್ತಾರೆ, ಆಮೇಲೆ ಸರ್ವೇ ರಿಪೋರ್ಟ್ ಏನಾಗುತ್ತದೆ ನೋಡೋಣ" ಎಂದರು. ಇದೇ ವೇಳೆ, ರಾಷ್ಟ್ರಪತಿ ಚುನಾವಣೆ ಸಂಬಂಧ ತಾವು ಬೆಂಗಳೂರಿನಲ್ಲಿ ಮತ ಚಲಾಯಿಸುತ್ತಿರುವುದಾಗಿ ತಿಳಿಸಿದರು.
ಮಾದಪ್ಪನ ದರ್ಶನ ಪಡೆದ ಮಾಜಿ ಸಿಎಂ ಎಸ್. ಎಂ. ಕೃಷ್ಣ; ಜಿಟಿ ಜಿಟಿ ಮಳೆ ನಡುವೆ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರಕ್ಕೆ ಹಿರಿಯ ರಾಜಕಾರಣಿ, ಮಾಜಿ ಸಿಎಂ ಎಸ್. ಎಂ. ಕೃಷ್ಣ ಭೇಟಿ ನೀಡಿದರು.
ಮಲೆ ಮಹದೇಶ್ವರ ಎಸ್. ಎಂ. ಕೃಷ್ಣ ಅವರ ಮನೆ ದೇವರಾಗಿದ್ದು, ಅಳಿಯ ಮೃತಪಟ್ಟ ಬಳಿಕ ಒಮ್ಮೆ ಮಾತ್ರ ಪತ್ನಿಯೊಟ್ಟಿಗೆ ದೇವಾಲಯಕ್ಕೆ ಭೇಟಿ ಕೊಟ್ಟಿದ್ದರು. ಇದೀಗ ಎರಡು ವರ್ಷದ ಬಳಿಕ ಮಲೆಮಹದೇಶ್ವರ ಬೆಟ್ಟಕ್ಕೆ ಎಸ್ಎಂಕೆ ಭೇಟಿ ನೀಡಿ ಮಧ್ಯಾಹ್ನದ ಮಹಾ ಮಂಗಳಾರತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮನೆಯವರು, ಕುಟುಂಬದ ಹೆಸರಿನಲ್ಲಿ ಸಂಕಲ್ಪ ಪೂಜೆ ನೆರವೇರಸಿದರು. ಎಸ್ಎಂ ಕೃಷ್ಣ ಅವರೊಟ್ಟಿಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಲೆಮಹದೇಶ್ವರ ಬೆಟ್ಟದ ಆಗಮಿಕರಾದ ಕರವೀರಸ್ವಾಮಿ ದರ್ಶನ ಪಡೆದುಕೊಂಡರು.
-
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications