ಚಾಮರಾಜನಗರದಲ್ಲಿ ಏನಿದು ಮೃತ್ತಿಕಾ ಪೂಜೆ?
ಚಾಮರಾಜನಗರ, ಆಗಸ್ಟ್ 8: ಬಹಳಷ್ಟು ಜನಕ್ಕೆ ಮೃತ್ತಿಕಾ ಪೂಜೆಯ ಹೆಸರು ಕೇಳಿದಾಕ್ಷಣ ಇದ್ಯಾವುದಪ್ಪಾ ನಾವು ಕೇಳರಿಯದ ಪೂಜೆ ಎಂದು ಅಚ್ಚರಿಯಾಗಬಹುದು. ಆದರೆ ಈ ಪೂಜೆಯ ಬಗ್ಗೆ ತಿಳಿದುಕೊಂಡರೆ ಕೃಷ್ಣನ ಮೊಸರು ಕುಡಿಕೆಗೆ ನಮ್ಮ ಹಿರಿಯರು ಎಷ್ಟೊಂದು ಪ್ರಾಧಾನ್ಯತೆ ನೀಡಿದ್ದರು ಎಂಬುದು ಗೊತ್ತಾಗುತ್ತದೆ.
ಚಾಮರಾಜನಗರದ ಹೆಗ್ಗೊಠಾರ ಗ್ರಾಮದಲ್ಲಿ ಮೃತ್ತಿಕಾಪೂಜೆಯನ್ನು ವರ್ಷಕ್ಕೊಮ್ಮೆ ನಡೆಸಲಾಗುತ್ತದೆ. ಈ ಪೂಜೆಯನ್ನು ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಮೊಸರು ಮಡಿಕೆ ಒಡೆಯುವ ಉತ್ಸವದ ಮಡಿಕೆ ತಯಾರಿಕೆ ಪೂರ್ವದಲ್ಲಿ ಶ್ರೀಕೃಷ್ಣ ಪ್ರತಿಷ್ಠಾನದ ವತಿಯಿಂದ ನಡೆಸಲಾಗುತ್ತದೆ.

ಪ್ರತಿವರ್ಷವೂ ಈ ಪೂಜೆ ನಡೆಯುತ್ತದೆ. ವಿಶೇಷವಾಗಿ ಅಲಂಕರಿಸಿದ್ದ ಮಣ್ಣಿಗೆ ಶ್ರೀಕೃಷ್ಣ ಅಷ್ಟೋತ್ತರ ಪೂಜೆ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಮಡಿಕೆ ತಯಾರಿಸುವ ಕಾರ್ಯವು ಸಾಂಗವಾಗಿ ನಡೆಯುತ್ತದೆ. ಹಿಂದಿನ ಕಾಲದಲ್ಲಿ ಹಿರಿಯರು ಹಬ್ಬವನ್ನು ಸಂಪ್ರದಾಯಬದ್ಧವಾಗಿ ಹೇಗೆ ಆಚರಿಸುತ್ತಿದ್ದರು. ಮತ್ತು ಎಷ್ಟೊಂದು ಪ್ರಾಮುಖ್ಯತೆ ನೀಡುತ್ತಿದ್ದರು ಎಂಬುದಕ್ಕೆ ಈ ಪೂಜೆ ಸಾಕ್ಷಿಯಾಗಿದೆ. ಎಲ್ಲೋ ಸಿಕ್ಕ ಮಣ್ಣಿನ ಮಡಿಕೆ ತಂದು ಮೊಸರು ಕುಡಿಕೆ ಒಡೆಯುವ ಸ್ಪರ್ಧೆಗೆ ಬಳಸದೆ ತಾವೇ ಶಾಸ್ತ್ರೋಕ್ತವಾಗಿ ಮೊಸರು ಕುಡಿಕೆ ಒಡೆಯುವ ಆಟಕ್ಕೆಂದೇ ಮಡಿಕೆಯನ್ನು ತಯಾರು ಮಾಡುತ್ತಿದ್ದರು ಎಂಬುದಕ್ಕೆ ಈ ಸಂಪ್ರದಾಯ ಸಾಕ್ಷಿಯಾಗಿದೆ.
ಈ ಕುರಿತಂತೆ ಮಾತನಾಡಿ ಮಾಹಿತಿ ನೀಡಿದ ಗ್ರಾಮದ ಮುಖಂಡರಾದ ಗೌಡಿಕೆ ಮಾದಪ್ಪ ಅವರು, ಚಾಮರಾಜನಗರದ ಮೊಸರು ಮಡಿಕೆ ಒಡೆಯುವ ಉತ್ಸವ ಮನೆ ಮನೆ ಮಾತಾಗಿದೆ. ಶ್ರೀ ಕೃಷ್ಣನ ಉತ್ಸವಕ್ಕೆ ಮೊಸರು ಮಡಿಕೆಯನ್ನು ಹೆಗ್ಗೊಠಾರ ಗ್ರಾಮದಿಂದ ನಂಜಪ್ಪ ಎಂಬುವರು ಸಿದ್ಧಪಡಿಸಿ ಕಳುಹಿಸುತ್ತಿದ್ದು, ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪೂಜಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಶುಭಕೋರುವುದಾಗಿ ಹೇಳಿದರು.
ಇದೇ ವೇಳೆ ಮೃತ್ತಿಕಾ ಪೂಜೆ ನೆರವೇರಿಸಿ ಮಾತನಾಡಿದ ಆಚಾರ್ಯರಾದ ಪ್ರದೀಪ್ ಕುಮಾರ್ ದೀಕ್ಷಿತ್ ಅವರು ಮಣ್ಣು ನಾಡಿನ ಸಂಸ್ಕೃತಿಯ ದಿವ್ಯಶಕ್ತಿಯಾಗಿದೆ. ನಿರ್ಲಿಪ್ತವಾಗಿ ಮಣ್ಣು ಸದಾ ಕಾಲ ಸದ್ಗುಣ ಸಂಪನ್ನವಾಗಿ ಪ್ರತಿ ಜೀವಿಗೂ ಶಕ್ತಿ ನೀಡುತ್ತದೆ. ಮಣ್ಣಿನಂತಹ ಸೇವೆಯ ಅಂಶ ಮಾನವರಲ್ಲೂ ಸದಾ ಜಾಗೃತವಾಗಬೇಕೆಂದರು.
ಶ್ರೀಕೃಷ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್. ಋಗ್ವೇದಿ, ಸೇರಿದಂತೆ ಹಲವರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications