ಕಾಂಗ್ರೆಸ್ ಗಂಡನ ಜೇಬಿನಿಂದ ಹಣ ತೆಗೆದು ಹೆಂಡತಿ ಬ್ಯಾಗಿಗೆ ಹಾಕ್ತಿದೆ-ಎನ್.ಮಹೇಶ್
ಚಾಮರಾಜನಗರ, ಜುಲೈ 22: ಬಿಜೆಪಿ ಪ್ರತಿಭಟನೆಯನ್ನು ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ್ ಖರ್ಗೆ ತಿರುಚಿ ದಲಿತರ ಮೇಲೆ ದೌರ್ಜನ್ಯ ಎಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎನ್.ಮಹೇಶ್ ಹೇಳಿದರು.
ಚಾಮರಾಜನಗರದಲ್ಲಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎನ್.ಮಹೇಶ್, ಬಿಜೆಪಿಯ ಪ್ರತಿಭಟನೆಯನ್ನು ಇಬ್ಬರು ಸಚಿವರು ತಿರುಚಿ ದಲಿತರನ್ನು ದಾಳವನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರ ರಾಜಕಾರಣ ನಂಬಲು ದಲಿತರು ಗುಗ್ಗುಗಳಲ್ಲ ಎಂದು ಆಕ್ರೋಶ ಹೊರಹಾಕಿದರು.

ಐಎಎಸ್ ಅಧಿಕಾರಿಗಳನ್ನು ಪ್ರೊಟೊಕಾಲ್ಗೆ ನೇಮಿಸಿದ್ದು ಸರಿನಾ ಎಂಬ ಪ್ರಶ್ನೆಗೆ ಉತ್ತರ ಕೊಡದಿದ್ದಾಗ ಬಿಲ್ ಅನದನು ಹರಿದು ಶಾಸಕರು ಪ್ರತಿಭಟಿಸಿದ್ದಾರೆ. ಅದು ಅವರ ಹಕ್ಕು. ನಾವು ಕೈ ಮುಗಿದು ಒಳ ಹೋಗುವ ಸದನದ ಬಾಗಿಲನ್ನು ಸಿದ್ದರಾಮಯ್ಯ ಒದ್ದು ಹೊರಹೋಗಿದ್ದರು. ಕುಸ್ತಿಗೆ ಕರೆದಿದ್ದರು. ಸಂಗಮೇಶ್ ಬಟ್ಟೆ ಹರಿದುಕೊಂಡಿದ್ದರು. ಅದು ಸಂವಿಧಾನ ವಿರೋಧಿ, ನಾವು ಮಾಡಿದ್ದು ಪ್ರತಿಭಟನೆ ಅಷ್ಟೇ, ಬಾವಿಗೆ ಇಳಿದು ಪ್ರತಿಭಟನೆ ಮಾಡುವುದು ಸಹಜ ಪ್ರಕ್ರಿಯೆ ಎಂದರು.
ದುರ್ಯೋಧನ ಪಾರ್ಟ್ ಹಾಕಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ಪ್ರಬುದ್ಧ ರಾಜಕಾರಣಿ ಎಂದುಕೊಂಡಿದ್ದೆವು, ಆದರೆ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಅವರು ಪ್ರತಿಭಟನೆ ಮಾಡುತ್ತಿದ್ದರೇ ಗೂಡ್ಸೆ ಮುಂದೆ ಮಾಡಿ ಎನ್ನುತ್ತಾರೆ. ಭಯೋತ್ಪಾದಕರನ್ನು ಮುಚ್ಚಿಡಲು ಕಾಂಗ್ರೆಸ್ ನೋಡುತ್ತಿದ್ದು ಮೂರನೇ ದರ್ಜೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಗ್ಯಾರಂಟಿಗಳ ವಿರೋಧಿ ಬಿಜೆಪಿ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ. ನಾವು ಗ್ಯಾರಂಟಿ ವಿರೋಧಿಗಳಲ್ಲ. ಆದರೆ ನಮ್ಮ ಒತ್ತಾಯ ಪ್ರಣಾಳಿಕೆಯಲ್ಲಿ ಕೊಟ್ಟ ರೀತಿ ಜಾರಿ ಮಾಡಿ ಎನ್ನುತ್ತಿದ್ದೇವೆ, ಅಬಕಾರಿ ಸುಂಕವನ್ನು ಶೇ.20 ರಷ್ಟು ಏರಿಕೆ ಮಾಡಿ ಗಂಡನ ಜೇಬಿನಿಂದ ಹಣ ತೆಗೆದು ಹೆಂಡತಿ ಬ್ಯಾಗಿಗೆ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಲೇವಡಿ ಮಾಡಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications