ಚಾಮರಾಜನಗರದ ರಾಚಮ್ಮನಿಗೆ ರಾಷ್ಟ್ರೀಯ ಪುರಸ್ಕಾರ

ಚಾಮರಾಜನಗರ,

ಜನೆವರಿ
01:
ಪ್ರಧಾನಮಂತ್ರಿ
ಆವಾಸ್
ಯೋಜನೆಯಡಿ
ಅತ್ಯುತ್ತಮ
ಮನೆ
ನಿರ್ಮಾಣ
ವರ್ಗದ
ಅಡಿಯಲ್ಲಿ
ಫಲಾನುಭವಿಗಳಿಗೆ
ನೀಡಲಾಗುವ
ರಾಷ್ಟ್ರೀಯ
ಪುರಸ್ಕಾರಕ್ಕಾಗಿ
ಕರ್ನಾಟಕ
ರಾಜ್ಯದಿಂದ
ಆಯ್ಕೆಯಾಗಿರುವ
ಮೂವರು
ಫಲಾನುಭವಿಗಳ
ಪೈಕಿ
ಚಾಮರಾಜನಗರ
ಜಿಲ್ಲೆಯ
ಒಬ್ಬರು
ಆಯ್ಕೆದ್ದಾರೆ.

id="toptextpromo">
id='are-slot-1'
class='oiad
oi-axt
oiadv'>

ವಸತಿ

ಮತ್ತು
ನಗರ
ವ್ಯವಹಾರಗಳ
ಸಚಿವಾಲಯ
ಪ್ರಧಾನ
ಮಂತ್ರಿ
ಆವಾಸ್
ಯೋಜನೆ
ಅನುಷ್ಠಾನದಲ್ಲಿ
ವಾರ್ಷಿಕ
ಪ್ರಶಸ್ತಿಗಳನ್ನು
ನೀಡಲು
ಆರಂಭಿಸಿದ್ದು,
ಅದರಂತೆ
ಪ್ರತಿ
ರಾಜ್ಯದಿಂದ
ಪ್ರಧಾನ
ಮಂತ್ರಿ
ಆವಾಸ್
ಯೋಜನೆಯಡಿ
ನಗರ
ಪಟ್ಟಣಗಳ
ವ್ಯಾಪ್ತಿಯಲ್ಲಿ
ಅತ್ಯುತ್ತಮವಾಗಿ
ಮನೆ
ನಿರ್ಮಿಸಿಕೊಂಡ
ಫಲಾನುಭವಿಗಳನ್ನು
ಅತ್ಯುತ್ತಮ
ಮನೆ
ನಿರ್ಮಾಣ
ವರ್ಗದಡಿಯಲ್ಲಿ
ಪುರಸ್ಕಾರಕ್ಕೆ
ಆಯ್ಕೆ
ಮಾಡಿದೆ.

id='are-slot-2'
class='oiad
oi-axt
oiadv'>

ರಾಚಮ್ಮ ಕೂಡ ಒಬ್ಬರಾಗಿರುವುದು ವಿಶೇಷ

ರಾಚಮ್ಮ ಕೂಡ ಒಬ್ಬರಾಗಿರುವುದು ವಿಶೇಷ

ಕರ್ನಾಟಕ ರಾಜ್ಯದಿಂದ ಮೂವರು ಫಲಾನುಭವಿಗಳು ಈ ಮಹತ್ತರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಅವರಲ್ಲಿ ಚಾಮರಾಜನಗರ ಪಟ್ಟಣದಲ್ಲಿ ಮನೆ ನಿರ್ಮಿಸಿಕೊಂಡಿರುವ ರಾಚಮ್ಮ ಕೂಡ ಒಬ್ಬರಾಗಿರುವುದು ವಿಶೇಷವಾಗಿದೆ. ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ 2016-17ನೇ ಸಾಲಿನಲ್ಲಿ ರಾಚಮ್ಮರವರು ವಾಜಪೇಯಿ ನಗರ ವಸತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಯಾಗಿ ಆಯ್ಕೆಯಾಗಿದ್ದರು. ಇವರು ತಮ್ಮ ಸ್ವಂತ ನಿವೇಶನದಲ್ಲಿ ರಾಜ್ಯ ಸರ್ಕಾರದ ಸಹಾಯಧನ 1.5 ಲಕ್ಷ ರೂ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.5 ಲಕ್ಷ ರೂ ಸೇರಿದಂತೆ ಒಟ್ಟು 3 ಲಕ್ಷ ರೂ ಸಹಾಯ ಧನ ಪಡೆದು ಪಕ್ಕಾ ಮನೆ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾರೆ. ಸಂಬಂಧಿಗಳೊಂದಿಗೆ ಸೇರಿ ಅವರೇ ತಮ್ಮ ಸ್ವಂತ ವಿವೇಚನೆಯಿಂದ ಮನೆಯನ್ನು ನಿರ್ಮಿಸಿಕೊಂಡಿದ್ದು, ಮನೆಯ ಹೊರಾಂಗಣವು ಉತ್ತಮವಾಗಿದೆ.

ಅತ್ಯುತ್ತಮ ಮನೆ ನಿರ್ಮಾಣ ಅಡಿಯಲ್ಲಿ ಪುರಸ್ಕಾರ

ಅತ್ಯುತ್ತಮ ಮನೆ ನಿರ್ಮಾಣ ಅಡಿಯಲ್ಲಿ ಪುರಸ್ಕಾರ

ಫಲಾನುಭವಿಯ ಆಯ್ಕೆಗಾಗಿ ಯೋಜನೆಯಡಿ ಮಾನದಂಡವಾಗಿ ಮನೆ ನಿರ್ಮಾಣದ ಪ್ರಗತಿ, ಮನೆಯ ಹೊರಾಂಗಣ, ಯೋಜನೆಯ ಚಿಹ್ನೆ ಬರವಣಿಗೆ, ಜಾಗೃತಿ ಚಟುವಟಿಕೆ ಹಾಗು ಇತರೆ ವಿಷಯಗಳನ್ನು ಪರಿಗಣಿಸಲಾಗಿದೆ. ಇದರಿಂದಾಗಿ ರಾಚಮ್ಮ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆಯ ಅತ್ಯುತ್ತಮ ಮನೆ ನಿರ್ಮಾಣ ವರ್ಗದ ಅಡಿಯಲ್ಲಿ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದ್ದಾರೆ.

ಪುರಸ್ಕಾರ ನೀಡಿ ಸನ್ಮಾನ

ಪುರಸ್ಕಾರ ನೀಡಿ ಸನ್ಮಾನ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ ವತಿಯಿಂದ ಜನವರಿ 1 ರಂದು ಪ್ರಧಾನ ಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಸತಿ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ಮತ್ತು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅತ್ಯುತ್ತಮ ಮನೆ ನಿರ್ಮಾಣ ವರ್ಗ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಲಿದ್ದಾರೆ.

Recommended Video

    ಸಿದ್ದು ಪದೇಪದೆ BSY ಬಗ್ಗೆ ಯಾಕೆ ಹೀಗೆ ಹೇಳುತ್ತಿದ್ದಾರೆ? | Oneindia Kannada
    ರಾಚಮ್ಮ ಅವರನ್ನು ಅಭಿನಂದಿಸಿದ ಜಿಲ್ಲಾಧಿಕಾರಿ

    ರಾಚಮ್ಮ ಅವರನ್ನು ಅಭಿನಂದಿಸಿದ ಜಿಲ್ಲಾಧಿಕಾರಿ

    ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ಅತ್ಯುತ್ತಮ ಮನೆ ನಿರ್ಮಾಣ ವರ್ಗದ ಅಡಿಯಲ್ಲಿ ನೀಡಲಾಗುತ್ತಿರುವ ಪ್ರತಿಷ್ಠಿತ ಗೌರವಕ್ಕೆ ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಮೂವರಲ್ಲಿ ಚಾಮರಾಜನಗರ ಪಟ್ಟಣದ ಫಲಾನುಭವಿಯು ಒಬ್ಬರಾಗಿರುವುದು ನಿಜಕ್ಕೂ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

    ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾಗಿರುವ ಚಾಮರಾಜನಗರದ ಪಟ್ಟಣದ ಫಲಾನುಭವಿ ರಾಚಮ್ಮ ಅವರನ್ನು ಅಭಿನಂದಿಸುತ್ತೇನೆ. ಮುಂದೆಯೂ ವಸತಿ ಯೋಜನೆಗಳಲ್ಲಿ ಇನ್ನಷ್ಟು ಪ್ರಶಸ್ತಿ ಗೌರವವನ್ನು ಜಿಲ್ಲೆಯ ಫಲಾನುಭವಿಗಳು ಪಡೆಯುವಂತಾಗಲಿ ಎಂದು ಹೇಳಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+