ಚಾಮರಾಜನಗರದ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಹೊಸವರ್ಷಾಚರಣೆಗೆ ಬ್ರೇಕ್!
ಚಾಮರಾಜನಗರ, ಡಿಸೆಂಬರ್ 30: ಹೊಸ ವರ್ಷಾಚರಣೆಗೆ ಪೇಟೆ ಪಟ್ಟಣಗಳಿಂದ ಹೊರಗಡೆ ಹೋಗುವವರು ಜಿಲ್ಲೆಯ ವನ್ಯಜೀವಿಧಾಮಗಳಿಗೆ ತೆರಳುವಂತಿಲ್ಲ. ಇಲ್ಲಿಗೆ ಅರಣ್ಯ ಇಲಾಖೆ ನಿರ್ಬಂಧ ಹೇರಿದ್ದು ಇತ್ತ ತೆರಳದಿರುವುದು ಒಳಿತು.
ಚಾಮರಾಜನಗರ ಜಿಲ್ಲೆಯ ಎರಡು ಹುಲಿ ಸಂರಕ್ಷಿತಾರಣ್ಯಗಳ ವ್ಯಾಪ್ತಿಯಲ್ಲಿ ಡಿ.31ರ ತಡರಾತ್ರಿ ಪ್ರವಾಸಿಗರು ಹಾಗೂ ಯುವಕರು ಮೋಜು ಮಸ್ತಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ.
ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮ, ಬಿಳಿಗಿರಿರಂಗನಬೆಟ್ಟ ಮತ್ತು ಬಂಡೀಪುರ ಹುಲಿ ಸಂರಕ್ಷಿತಾರಣ್ಯಗಳ ರಸ್ತೆಗಳಲ್ಲಿ ಮತ್ತು ಒಳಗೆ ಮದ್ಯಸೇವನೆ, ಸಂಗೀತ ಕಾರ್ಯಕ್ರಮ ಹಾಗೂ ಇತರ ಪಾರ್ಟಿಗಳನ್ನು ನಡೆಸುವುದು ಕಂಡು ಬಂದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ.
ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲೆಂದು ಬಹಳಷ್ಟು ಮಂದಿ ಅರಣ್ಯದಂಚಿನ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳುವುದು ಇತ್ತೀಚೆಗೆ ಕಂಡು ಬರುತ್ತಿದ್ದು, ಅಲ್ಲಿ ಮದ್ಯ ಸೇವಿಸಿ ಕೂಗಾಟ, ಕಿರುಚಾಟ, ಸಂಗೀತ ಕಾರ್ಯಕ್ರಮ ಹಾಗೂ ಇತರ ಪಾರ್ಟಿಗಳನ್ನು ಆಯೋಜಿಸುವುದು ಕಂಡು ಬರುತ್ತದೆ. ಅದನ್ನು ಈ ಬಾರಿ ನಿಷೇಧಿಸಲಾಗಿದೆ.
ಡಿ.31ರಂದು ಅರಣ್ಯದ ಚೆಕ್ಪೋಸ್ಟ್ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗುವುದು. ಅಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಯ 10 ರಿಂದ15 ತಂಡಗಳು ರಾತ್ರಿಯಿಡೀ ಅರಣ್ಯಗಳ ಮುಖ್ಯರಸ್ತೆಗಳಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ಗಸ್ತು ತಿರುಗಲಿವೆ. ಇನ್ನು ಅರಣ್ಯ ಇಲಾಖೆಗಳ ಪ್ರವಾಸಿ ಮಂದಿರಗಳಲ್ಲಿ ಯಾರೊಬ್ಬರಿಗೂ ತಂಗಲು ಅವಕಾಶವಿಲ್ಲ. ಮುಂದೆ ಓದಿ...

ಪಾರ್ಟಿ ನಡೆಸುವ ಹಾಗಿಲ್ಲ
ಅರಣ್ಯಗಳ ಒಳಗಿನ ರಸ್ತೆಗಳಲ್ಲಿ ಮದ್ಯ ಸೇವನೆ ಮಾಡಿ ಅರಚಾಟ ಮಾಡುವವರನ್ನು ಮತ್ತು ಪಾರ್ಟಿ ನಡೆಸುವವರನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಸ್ವಚ್ಛಂದವಾಗಿ ವಿಹರಿಸುವಂತಿಲ್ಲ
ಅರಣ್ಯದೊಳಗೆ ಇರುವ ಪ್ರವಾಸೋದ್ಯಮ ಇಲಾಖೆಯ ಜಂಗಲ್ ರೆಸಾರ್ಟ್ಗಳು ಮತ್ತು ಖಾಸಗಿ ರೆಸಾರ್ಟ್ಗಳಲ್ಲಿ ವಾಸ್ತವ್ಯ ಹೂಡುವವರು ಅರಣ್ಯದೊಳಗೆ ಸ್ವಚ್ಛಂದವಾಗಿ ವಿಹರಿಸುವಂತಿಲ್ಲ. ರೆಸಾರ್ಟ್ಗಳ ಆವರಣದೊಳಗೆ ಹೊಸ ವರ್ಷದ ಸಂಭ್ರಮ ಆಚರಿಸಬೇಕು. ಒಂದು ವೇಳೆ ಇದನ್ನು ಮೀರಿದರೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಬಾರಿ ಬ್ರೇಕ್
ಕಾಡಂಚಿನ ಪ್ರದೇಶದ ತೋಟದ ಮನೆಗಳು, ಬಿಆರ್ ಟಿ ಅರಣ್ಯದ ಬೆಲವತ್ತ, ಸುವರ್ಣಾವತಿ, ಚಿಕ್ಕಹೊಳೆ ಜಲಾಶಯ ಏರಿಗಳು, ಕೃಷ್ಣಯ್ಯಕಟ್ಟೆ, ಗೌಡಹಳ್ಳಿ ಕೆರೆ, ಹೋಂಸ್ಟೇಗಳಲ್ಲಿ ಯುವ ಜನರು ಗುಂಪುಗೂಡಿ ಧ್ವನಿವರ್ಧಕಗಳನ್ನು ಬಳಸಿ ನರ್ತಿಸಿ ಮೋಜು ಮಸ್ತಿ ಮಾಡುತ್ತಾರೆ ಆದರೆ ಇದಕ್ಕೆಲ್ಲ ಈ ಬಾರಿ ಬ್ರೇಕ್ ಹಾಕಲಾಗುತ್ತಿದೆ. ಸಂರಕ್ಷಿತಾರಣ್ಯಗಳಲ್ಲಿ ಪಾನಗೋಷ್ಠಿ ಮಾಡುವುದು ಕಾನೂನುಬಾಹಿರವಾಗಿದೆ.

ಸಂಗೀತ ಕಾರ್ಯಕ್ರಮಗಳು ನಿಷೇಧ
ಇನ್ನು ಡಿ.31ರಂದು ಅರಣ್ಯ ಪ್ರದೇಶಗಳಲ್ಲಿ ಪಾರ್ಟಿ, ಸಂಗೀತ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಯಾರಾದರೂ ಪಾರ್ಟಿ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಲೆಮಹದೇಶ್ವರ ಬೆಟ್ಟದ ವನ್ಯಜೀವಿಧಾಮದ ಡಿಎಫ್ ಒ ಏಡುಕೊಂಡಲು ಎಚ್ಚರಿಕೆ ನೀಡಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications