ನಿಫಾ ಭೀತಿ: ಗುಂಡ್ಲುಪೇಟೆ ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ಅಲರ್ಟ್, ಮುಂದುವರೆದ ವಾಹನಗಳ ತಪಾಸಣೆ
ಚಾಮರಾಜನಗರ, ಸೆಪ್ಟೆಂಬರ್, 14: ಕೇರಳದಲ್ಲಿ ಇಬ್ಬರು ಮಕ್ಕಳು ನಿಫಾ ವೈರಸ್ಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೇರಳ ಗಡಿ ಹಂಚಿಕೊಂಡಿರುವ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.
ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಗೂಡ್ಸ್ ವಾಹನಗಳಿಗೆ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದ್ದು, ಗುರುವಾರದಿಂದ ಗುಂಡ್ಲುಪೇಟೆ ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ಹಾಸಿಗೆಗಳ ವಿಶೇಷ ವಾರ್ಡ್ ನಿರ್ಮಾಣ ಮಾಡಲು ಮುಂದಾಗಿದ್ದು, ಈ ಮೂಲಕ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.
ನಿಫಾ ವೈರಸ್ ಭೀತಿ
ಕೊರೊನಾ ಅಬ್ಬರ ತೊಲಗಿತು ಎಂದು ಖುಷಿಯಲ್ಲಿದ್ದ ಜನರಿಗೆ ಈಗ ಮತ್ತೊಂದು ವೈರಸ್ ಕಾಡಲು ಶುರು ಮಾಡಿದೆ. ಕೊರೊನಾ ವೈರೆಸ್ ಆರ್ಭಟ ಮಾಡೀ ಜಗತ್ತನ್ನೇ ಹೆದರಿಸಿ ಆರ್ಥಿಕವಾಗಿ ಸಾಕಷ್ಟು ಜನರಿಗೆ ಪೆಟ್ಟು ಕೂಟ್ಟು ಅದೆಷ್ಟೋ ಕುಟುಂಬಗಳ ಆಧಾರವಾಗಿದ್ದ ವ್ಯಕ್ತಿಗಳನ್ನೇ ಬಲಿ ತೆಗೆದುಕೊಂಡಿತ್ತು. ಹೀಗಾಗಿ ಜನರಿಗೆ ಕೊರೊನಾ ವೈರಸ್ ಭಯದ ನೆರಳು ಈಗಲೂ ಇದೆ.
ಇದೀಗ ಮತ್ತೊಂದು ವೈರಸ್ ಜನರನ್ನು ಕಾಡಲು ಶುರು ಮಾಡಿದೆ. ಸದ್ಯ ಆ ಸಾಲಿಗೆ ಈಗ ನಿಫಾ ವೈರಸ್ ಸೇರಿದ್ದು, ತನ್ನ ಆರ್ಭಟ ಶುರು ಮಾಡಿದೆ.
ಪ್ರಾಣಿಗಳಿಂದ ಮನುಷ್ಯರಿಗೆ, ಮನುಷ್ಯರಿಂದ ಮನುಷ್ಯರಿಗೆ ಹರಡುವ ನಿಫಾ ಒಂದು ಸಲ ಬಂದರೆ ತುಂಬಾ ಅಪಾಯಕಾರಿ. ಈ ವೈರಸ್ನಿಂದಾಗಿ ಈಗಾಗಲೇ ಹಲವಾರು ಜನರು ತಮ್ಮ ಪ್ರಾಣವನ್ನು ಕಳೆದು ಕೊಂಡಿದ್ದಾರೆ. ಇದೀಗ ನಮ್ಮ ಪಕ್ಕದ ರಾಜ್ಯ ಕೇರಳದಲ್ಲಿ, ಇದರ ಉಪಟಳ ಹೆಚ್ಚಾಗುತ್ತಿದೆ. ನೆರೆ ರಾಜ್ಯ ಕೇರಳದಲ್ಲಿ ಇಬ್ಬರು ತೀವ್ರ ಜ್ವರದಿಂದ ಬಳಲುತ್ತಿದ್ದು ಸಾವನ್ನಪ್ಪಿದ್ದು ಅವರಿಗೆ ನಿಫಾ ವೈರೆಸ್ ಇರುವುದು ದೃಢವಾಗಿದೆ.
ಶೀತ, ಕೆಮ್ಮು, ಜ್ವರ,ನೆಗಡಿ, ಗಂಟಲು ಕೆರೆತ, ಉಸಿರಾಟದ ತೊಂದರೆ, ತಲೆನೋವು, ಕೆಮ್ಮು, ಅಷ್ಟೇ ಅಲ್ಲದೆ, ಸೋಂಕಿತ ವ್ಯಕ್ತಿಗೆ ವಾಂತಿ ಮತ್ತು ಅತಿಸಾರ ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ರಾಜ್ಯದಲ್ಲಿಯೂ ಕೂಡ ಸದ್ಯ ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಇಂದು ಆರೋಗ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಪ್ರತಿ ಜಿಲ್ಲೆಯ ಡಿಹೆಚ್ಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆದಿದ್ದು, ಆರೋಗ್ಯ ಇಲಾಖೆ ಈಗ ಪ್ರತ್ಯೇಕ ಸುತ್ತೋಲೆ ಬಿಡುಗಡೆ ಮಾಡಿದೆ.
ಸಭೆಯಲ್ಲಿ ದಕ್ಷಿಣ ಕನ್ನಡಕ್ಕೆ ಜಿಲ್ಲೆಯ ಮೇಲೆ ವಿಶೇಷ ನಿಗಾ ಇಡಲು ಸೂಚಿಸಲಾಗಿದೆ. ಇನ್ನು ಶಂಕಿತ ಪ್ರಕರಣದ ಕುರಿತು ಜಿಲ್ಲಾ ಕಣ್ಗಾವಲು ಕಚೇರಿಗೆ ಮಾಹಿತಿ ನೀಡಬೇಕು. ನಿಫಾ ವೈರಸ್ ನಿರ್ವಹಣೆಗಾಗಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್ ಕಾಯ್ದಿರಿಸಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮತ್ತು ಔಷಧಿಗಳನ್ನು ಒಳಗೊಂಡಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ತಿಳಿಸಲಾಗಿದೆ. ಅಗತ್ಯವಿರುವ ಔಷಧಿಗಳನ್ನು ಶೇಖರಿಸಲು ಹಾಗೂ ನಿಫಾ ರೋಗ ಲಕ್ಷಣಗಳ ಕುರಿತು ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು. ಯಾವುದೇ ಶಂಕಿತ ಪ್ರಕರಣಗಳ ಮಾದರಿಯನ್ನು ಪುಣೆಯ ಎನ್ಐವಿ ಲ್ಯಾಬ್ ಗೆ ಕಳುಹಿಸಲು ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಬೇಕು ಎಂದು ಸೂಚಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications