ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲೆ ಮಾದೇಶ್ವರ ದೇವಾಲಯದ ಭಕ್ತರ ಗಮನಕ್ಕೆ

|
Google Oneindia Kannada News

ಚಾಮರಾಜನಗರ, ಆಗಸ್ಟ್ 14 : ಚಾಮರಾಜನಗರ ಜಿಲ್ಲಾಡಳಿತ ಆಗಸ್ಟ್ 17 ರಿಂದ 19ರ ತನಕ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.

Recommended Video

ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್ 74 ನೇ ಸ್ವಾತಂತ್ರ್ಯ ದಿನದಂದು ಸಶಸ್ತ್ರ ಪಡೆಗಳಿಗೆ ಗೌರವ. | Oneindia Kannada

ಮಲೆ ಮಾದೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ವರ್ಷದಂತೆ ಎಣ್ಣೆ ಮಜ್ಜನ, ಅಮಾವಾಸ್ಯೆ ವಿಶೇಷ ಪೂಜೆ, 108 ಕುಂಭಾಭಿಷೇಕ, ಸಹಸ್ರ ಅಭಿಷೇಕಗಳು ನಡೆಯಲಿವೆ.

ಚಾಮರಾಜನಗರ: ಕೊರೊನಾ ವೈರಸ್ ಗೆ ಆಯುಷ್ ವೈದ್ಯಾಧಿಕಾರಿ ಸಾವುಚಾಮರಾಜನಗರ: ಕೊರೊನಾ ವೈರಸ್ ಗೆ ಆಯುಷ್ ವೈದ್ಯಾಧಿಕಾರಿ ಸಾವು

ಈ ಸಂದರ್ಭದಲ್ಲು ದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದರು. ಆದರೆ, ಈ ಬಾರಿ ಕೋವಿಡ್ ಪರಿಸ್ಥಿತಿ ಕಾರಣ ಮೂರು ದಿನಗಳ ಕಾಲ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ನಿಷೇಧ ಹೇರಲಾಗಿದೆ.

ಭಾನುವಾರವೂ ಮಲೆ ಮಾದೇಶ್ವರನ ದರ್ಶನ ಪಡೆಯಿರಿಭಾನುವಾರವೂ ಮಲೆ ಮಾದೇಶ್ವರನ ದರ್ಶನ ಪಡೆಯಿರಿ

No Entry For Devotees To Male Mahadeshwara Temple August 17 to 19

ಎಣ್ಣೆ ಮಜ್ಜನ, ಅಮಾವಾಸ್ಯೆ ವಿಶೇಷ ಪೂಜೆಗಳ ಸಮಯದಲ್ಲಿ ನೂರಾರು ಭಕ್ತರು ಆಗಮಿಸಿದರೆ ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಭಕ್ತರ ಭೇಡಿಗೆ ನಿರ್ಬಂಧ ಹಾಕಲಾಗಿದೆ.

ಚಾಮರಾಜನಗರ; ಚೆಕ್ ಪೋಸ್ಟ್ ರಸ್ತೆಯಲ್ಲೇ ಮದುವೆಯಾದ ಜೋಡಿಚಾಮರಾಜನಗರ; ಚೆಕ್ ಪೋಸ್ಟ್ ರಸ್ತೆಯಲ್ಲೇ ಮದುವೆಯಾದ ಜೋಡಿ

ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ವಿ. ಆರ್. ರವಿ ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಕಾಲ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಬಿಟ್ಟು ಬೇರೆ ಯಾರೂ ಸಹ ಭೇಡಿ ನೀಡುವಂತಿಲ್ಲ ಎಂದು ಹೇಳಿದ್ದಾರೆ.

ಚಾಮರಾಜನಗರದಲ್ಲಿ ಶುಕ್ರವಾರ 61 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1484ಕ್ಕೆ ಏರಿಕೆಯಾಗಿದೆ.

English summary
Chamarajanagar district administration banned devotees visit for the Male Mahadeshwara temple from August 17 to 19, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X