ಆರ್ ಎಫ್ ಒ ಮೇಲೆ ದಾಳಿ ನಡೆಸಿದ ಹುಲಿಯ ಸುಳಿವೇ ಇಲ್ಲ
ಚಾಮರಾಜನಗರ, ಜುಲೈ 11: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳೀಪುರ ಗ್ರಾಮದ ಜಮೀನಿನಲ್ಲಿ ಆರ್ ಎಫ್ ಓ ಮೇಲೆ ದಾಳಿ ನಡೆಸಿದ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆಯು ಕಳೆದ ಎಂಟು ದಿನಗಳಿಂದ ನಡೆಯುತ್ತಿದ್ದು, ಹುಲಿ ಮಾತ್ರ ಇನ್ನೂ ಪತ್ತೆಯಾಗಿಲ್ಲ.
ಜು.1ರಂದು ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯಾಧಿಕಾರಿ ರಾಘವೇಂದ್ರ ಅಗಸೆ ಅವರ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿದ್ದ ಹಿನ್ನೆಲೆಯಲ್ಲಿ ಜು.3ರಿಂದ ಬಂಡೀಪುರದ ರಾಂಪುರ ಸಾಕಾನೆ ಶಿಬಿರದ ಮೂರು ಆನೆಗಳು, ಡ್ರೋಣ್ ಕ್ಯಾಮೆರಾಗಳ ನೆರವಿನಿಂದ 25 ಅರಣ್ಯ ಸಿಬ್ಬಂದಿ ಕೂಂಬಿಂಗ್ ನಡೆಸುತ್ತಿದ್ದಾರೆ. ಅಲ್ಲದೆ ಹುಲಿ ಸಂಚರಿಸುತ್ತಿದ್ದ ಹೆಜ್ಜೆ ಗುರುತುಗಳ ಆಧಾರದ ಮೇಲೆ ಬೋನು ಅಳವಡಿಸಿ ಹಂದಿಯ ಮಾಂಸ ಇರಿಸಿದ್ದರೂ ಅಲ್ಲಿಗೆ ಹುಲಿ ಬಂದಿಲ್ಲ.
ಜು.7ರಂದು ಕಲಿಗೌಡನಹಳ್ಳಿಯ ಸುರೇಶ್ ಎಂಬುವರ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹುಲಿ ಕೊಂದು ಹಾಕಿತ್ತು. ಒಂದು ತಿಂಗಳಿನಲ್ಲಿ ಹುಲಿ ನಾಲ್ಕು ಜಾನುವಾರುಗಳನ್ನು ಕೊಂದಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿಯೂ ಬೋನು ಅಳವಡಿಸಿ ಕೂಂಬಿಂಗ್ ನಡೆಸಲಾಗುತ್ತಿದೆ. ಜತೆಗೆ ಹುಂಡೀಪುರ ಸಮೀಪ ಮೂರು ಬೋನುಗಳನ್ನು ಅಳವಡಿಸಲಾಗಿದೆ.

ನಾಲ್ಕು ತಿಂಗಳಿನಿಂದ ಹುಂಡೀಪುರ ಸಮೀಪ ಸುಳಿದಾಡುತ್ತಿರುವ ಹುಲಿ ಇತ್ತೀಚೆಗೆ ಮರಿ ಹಾಕಿದ್ದು, ತನ್ನ ಎರಡು ಮರಿಗಳ ಜತೆ ಸಂಚರಿಸುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೋನು ಅಳವಡಿಸಿದ್ದರೂ ಹುಲಿ ಬೀಳುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದು, ಜು.8ರ ರಾತ್ರಿ ಗ್ರಾಮದ ರವಿ ಎಂಬುವರ ಜಮೀನಿನ ಬಳಿ ಭಾರಿ ಗಾತ್ರದ ಗಂಡು ಹುಲಿ ಸಂಚರಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಇಲ್ಲಿಯೂ ಕೂಂಬಿಂಗ್ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, 6 ಕ್ಯಾಮರಾಗಳನ್ನು ಅಳವಡಿಸಿದೆ. ಈ ಪ್ರದೇಶದಲ್ಲಿ ಮೂರು ಬೋನುಗಳನ್ನು ಇರಿಸಿದ್ದರೂ ಹುಲಿ ಹತ್ತಿರ ಸುಳಿಯುತ್ತಿಲ್ಲ. ಆದ್ದರಿಂದ ಕೂಂಬಿಂಗ್ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಹುಲಿ ಯೋಜನೆಯ ನಿರ್ದೇಶಕ ಟಿ.ಬಾಲಚಂದ್ರ ಹೇಳಿದ್ದಾರೆ. ಇನ್ನೊಂದೆಡೆ ಅರಣ್ಯ ಇಲಾಖೆ ಈವರೆಗೆ ಬಳಸುತ್ತಿದ್ದ ಬೋನಿನಿಂದ ವನ್ಯಜೀವಿಗಳು ತಪ್ಪಿಸಿಕೊಳ್ಳಲು ನಡೆಸುವ ಪ್ರಯತ್ನದಲ್ಲಿ ಕಾಲುಗಳಿಗೆ ತೀವ್ರ ಪೆಟ್ಟಾಗಿ ಗಾಯಗೊಳ್ಳುತ್ತಿದ್ದವು. ಅರಣ್ಯ ಇಲಾಖೆ ತಲಾ ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ, ವನ್ಯಜೀವಿ ಗಾಯಗೊಳ್ಳದಂತೆ ವಿಶೇಷವಾಗಿ ನಿರ್ಮಿಸಿದ 3 ಬೋನುಗಳನ್ನು ತಮಿಳುನಾಡಿನಿಂದ ತರಿಸಿಕೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications