ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ 76 ಅಭ್ಯರ್ಥಿಗಳಿಂದ ನಾಮಪತ್ರಗಳ ಸಲ್ಲಿಕೆ, ಇಲ್ಲಿದೆ ವಿವರ
ಚಾಮರಾಜನಗರ, ಏಪ್ರಿಲ್, 20: ವಿಧಾನಸಭಾ ಚುನಾವಣೆಗೆ ಮೆ 10ಕ್ಕೆ ದಿನಾಂಕ ನಿಗದಿ ಆಗಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನವಾಗಿದ್ದು, ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಕೆ., ಜಾತ್ಯತೀತ ಜನಾತಾದಳ ಅಭ್ಯರ್ಥಿಯಾಗಿ ಎಂ.ಆರ್.ಮಂಜುನಾಥ್, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಮಾದೇಶ.ಎಂ., ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಪ್ರೀತನ್. ಕೆ.ಎನ್., ಪಕ್ಷೇತರ ಅಭ್ಯರ್ಥಿಯಾಗಿ ಸಿ. ಸಿದ್ದಾರ್ಥನ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ನಿಂಗರಾಜ್. ಜಿ., ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ವಿನೋದ್.ಎಸ್., ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಾಗಿ ನಾಗರಾಜು, ರೇಖಾ, ಇಂಡಿಯನ್ ಮೂವ್ಮೆಂಟ್ ಪಾರ್ಟಿ ಅಭ್ಯರ್ಥಿಯಾಗಿ ಕೆ.ಹೆಚ್.ಅಂಜನಮೂರ್ತಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ರಾಜೇಶ್.ಎಂ., ಮಹಾದೇವ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಡಾ. ಎನ್.ಗುರುಪ್ರಸಾದ್, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಂ. ನಾಗೇಂದ್ರ ಬಾಬು, ಕರ್ನಾಟಕ ಜನಾತದಳ (ಜಾತ್ಯತೀತ) ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಸ್ವಾಮಿ.ಎ.ಎಂ, ಪಕ್ಷೇತರ ಅಭ್ಯರ್ಥಿಗಳಾಗಿ ಚೇತನ.ವಿ., ಎಂ.ಮೂರ್ತಿ, ವೈ.ಆರ್.ವಿಜಯ ಉಪ್ಪಾರ, ಮಹದೇವಸ್ವಾಮಿ.ಎಸ್., ಬಿ.ಎಂ.ಮಹದೇವಸ್ವಾಮಿ, ನಾಗಮಣಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸಿ.ಎಸ್. ನಿರಂಜನ್ ಕುಮಾರ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ಗಣೇಶ್ ಪ್ರಸಾದ್, ಪಕ್ಷೇತರ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ದೀಪಕ್ ಚಿಂಚೋರೆ
ಇನ್ನು ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಅವರು ಗುರುವಾರ (ಏಪ್ರಿಲ್ 20) ಅಧಿಕೃತವಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಧಾರವಾಡದ ಕೆಸಿಡಿ ವೃತ್ತದ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಚಿಂಚೋರೆ, ಅಲ್ಲಿಂದ ತೆರೆದ ವಾಹನದ ಮೂಲಕ ಅದ್ಧೂರಿ ಮೆರವಣಿಗೆ ಮೂಲಕ ಪಾಲಿಕೆ ಕಚೇರಿಗೆ ಬಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಗಣಪತಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡದವರು ಪಾಲ್ಗೊಂಡಿದರು. ಹೀಗೆ ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡು ದೀಪಕ್ ಚಿಂಚೋರೆ ಅವರ ಪರವಾಗಿ ಜಯಘೋಷವನ್ನು ಮೊಳಗಿಸಿದರು. ಈ ಮೂಲಕ ಚಿಂಚೋರೆ ಅವರ ಸ್ಪರ್ಧೆಯಿಂದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರ ತೀವ್ರ ರಂಗು ಪಡೆದುಕೊಂಡಿದೆ.
ತೆರೆದ ವಾಹನದ ಮೂಲಕ ನಡೆದ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಆರ್.ಕೆ.ಪಾಟೀಲ, ಹೇಮಂತ ಗುರ್ಲಹೊಸೂರ ಅವರು ಚಿಂಚೋರೆ ಅವರಿಗೆ ಸಾಥ್ ನೀಡಿದರು. ಒಟ್ಟಾರೆ ಚಿಂಚೋರೆ ಕೂಡ ಶಕ್ತಿ ಪ್ರದರ್ಶನದೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications