ಬಂಡೀಪುರ ಅರಣ್ಯದಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ, ಕೇಳೋರಿಲ್ಲ!
ಇತ್ತೀಚೆಗೆ ಸೆಲ್ಫಿ ಹುಚ್ಚಿಗೆ ಬಿದ್ದಿರುವ ಪ್ರವಾಸಿಗರು ಬಂಡೀಪುರ ಅರಣ್ಯದ ರಸ್ತೆಯ ಮಧ್ಯೆ ವಾಹನವನ್ನು ನಿಲ್ಲಿಸಿಕೊಂಡು ಫೋಟೋ ತೆಗೆದುಕೊಳ್ಳುತ್ತಾರೆ. ಮಾರ್ಗಮಧ್ಯೆ ವಾಹನ ನಿಲ್ಲಿಸುವಂತಿಲ್ಲ ಎಂಬ ನಿಯಮವಿದ್ದರೂ ಅದನ್ನು ಯಾರೂ ಪಾಲಿಸುತ್ತಿಲ್ಲ.
ಚಾಮರಾಜನಗರ, ಮೇ 17: ಬಂಡೀಪುರ ಅರಣ್ಯದ ಮೂಲಕ ಊಟಿ ಹಾಗೂ ಕೇರಳಕ್ಕೆ ವಾಹನದಲ್ಲಿ ಸಂಚರಿಸುವವರು ಮಧ್ಯೆ ವಾಹನ ನಿಲ್ಲಿಸಬಾರದು ಎಂಬ ನಿಯಮವಿದೆ. ಈ ರಸ್ತೆಯಲ್ಲಿ ವನ್ಯಜೀವಿಗಳು ಸಂಚರಿಸುತ್ತಿರುವುದರಿಂದ ಅವುಗಳಿಗೆ ತೊಂದರೆಯಾಗಬಾರದೆಂದು ಈ ನಿಯಮ ಜಾರಿಗೆ ತರಲಾಗಿದೆ.
ಮೊದಲಿನಿಂದಲೂ ಬಂಡೀಪುರದಲ್ಲಿ ಎಚ್ಚರಿಕೆಯನ್ನು ವಹಿಸಿಕೊಂಡು ಬರಲಾಗುತ್ತಿದೆ. ಆದರೆ ಇತ್ತೀಚೆಗೆ ಸೆಲ್ಫಿ ಹುಚ್ಚಿಗೆ ಬಿದ್ದಿರುವ ಪ್ರವಾಸಿಗರು ಅರಣ್ಯದ ಮಧ್ಯೆ ವಾಹನವನ್ನು ನಿಲ್ಲಿಸಿಕೊಂಡು ಫೋಟೋ ತೆಗೆದುಕೊಳ್ಳುತ್ತಾರೆ. ಎಷ್ಟೇ ಎಚ್ಚರಿಕೆ ನೀಡಿದರೂ, ವಿದ್ಯಾವಂತರೇ ಈ ರೀತಿ ಮಾಡುತ್ತಿರುವುದು ವಿಷಾದವೇ ಸರಿ.[ಬಂಡೀಪುರದಲ್ಲಿ ಆನೆ ಗಣತಿಗೆ ಸ್ವಯಂಸೇವಕರ ಸಾಥ್]

ಈ ಅರಣ್ಯ ಮಾರ್ಗದಲ್ಲಿ ವಾಹನ ನಿಲ್ಲಿಸಿದವರ ಮೇಲೆ ಪ್ರಾಣಿಗಳು ದಾಳಿ ಮಾಡಿದ ನಿದರ್ಶನಗಳಿವೆ. ಹೀಗಾಗಿ ಅರಣ್ಯ ಇಲಾಖೆ ಅರಣ್ಯದೊಳಗೆ ಮಾರ್ಗ ಮಧ್ಯೆ ವಾಹನ ನಿಲ್ಲಿಸದಂತೆ ನಿರ್ದೇಶನ ನೀಡಿದೆ.
ಅರಣ್ಯ ವಲಯದಲ್ಲಿ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎಂಬ ಅರಿವಿಲ್ಲದೆ ಕೆಲವರು ಅನಾಗರಿಕರಂತೆ ವರ್ತಿಸುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಇನ್ನು ಕೆಲವರು ಅರಣ್ಯದೊಳಗೆ ವಾಹನಗಳನ್ನು ನಿಲ್ಲಿಸಿ ಮದ್ಯ ಸೇವಿಸಿ ಖಾಲಿ ಬಾಟಲಿಯನ್ನು ಎಸೆದು ಹೋಗುತ್ತಾರೆ. ಹೀಗಾಗಿ ದಾರಿಯುದ್ದಕ್ಕೂ ಅಲ್ಲಲ್ಲಿ ಮದ್ಯದ ಖಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ಗಳು ಕಂಡು ಬರುತ್ತಿವೆ.[ಬತ್ತಿದ ಬಂಡೀಪುರದ ಮೂಲೆಹೊಳೆ: ಜನ-ಜಾನುವಾರು ಪರದಾಟ]

ಅರಣ್ಯದೊಳಗೆ ಪ್ರವೇಶಿಸುವ ಮುನ್ನ ಮೇಲುಕಾಮನಹಳ್ಳಿ, ಕೆಕ್ಕನಹಳ್ಳ, ಮದ್ದೂರು, ಮತ್ತು ಮೂಲೆಹೊಳೆ ಚೆಕ್ ಪೋಸ್ಟ್ ಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತಪಾಸಣೆಗಾಗಿ ನೇಮಕಗೊಂಡಿರುತ್ತಾರೆ. ಆದರೆ ಇಲ್ಲಿನ ಸಿಬ್ಬಂದಿ ಪ್ರವಾಸಿಗರು ಪಾಲಿಸಬೇಕಾದ ನಿಯಮಗಳನ್ನು ತಿಳಿಸದ ಕಾರಣ ಪ್ರವಾಸಿಗರು ಅರಣ್ಯದ ಒಳಗೆ ವಾಹನ ನಿಲುಗಡೆ ಮಾಡುತ್ತಿದ್ದಾರೆ. ಹಾಗಾಗಿ ಅರಣ್ಯ ಪ್ರವೇಶಕ್ಕೂ ಮುನ್ನಾ ನಿಯಮ ಫಲಕಗಳನ್ನು ಅಳವಡಿಸಬೇಕು ಮತ್ತು ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಆದೇಶ ಪಾಲಿಸಬೇಕು ಎನ್ನುವುದು ಪ್ರಜ್ಞಾವಂತ ನಾಗರಿಕರ ಸಲಹೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications