Hogenakkal Falls: ಹೊಗೆನಕಲ್ ಜಲಪಾತದ ಕಡೆ ಪ್ರವಾಸ ಬೆಳೆಸುವ ಮುನ್ನ ಈ ಸುದ್ದಿ ಗಮನಿಸಿ
ಚಾಮರಾಜನಗರ, ಜುಲೈ, 19: ಮಳೆರಾಯನ ಆರ್ಭಟ ಮುಂದುವರೆದ ಪರಿಣಾಮ ಭಾರತದ ನಯಾಗರ ಎಂದೇ ಕರೆಯುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಾದ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಅಪಾಯ ಮಟ್ಟದಲ್ಲಿ ನೀರು ಭೋರ್ಗರೆಯುತ್ತಿದೆ.
ಕಬಿನಿ ಹೊರಹರಿವು ಮತ್ತು ಜೋರು ಮಳೆಯಿಂದ ಹೊಗೆನಕಲ್ನಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾವೇರಿ ವನ್ಯಜೀವಿಧಾಮವು ಜುಲೈ 20ರಿಂದ ಹೊಗೆನಕಲ್ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.

ಈಗಾಗಲೇ ಕಬಿನಿಯಿಂದ 70,000 ಕ್ಯೂಸೆಕ್ ಹೊರ ಹರಿವಿ ಇದ್ದು, ಹೊಗೆನಕಲ್ನಲ್ಲಿ ಕಾವೇರಿ ರಭಸದಿಂದ ಹರಿಯುತ್ತಿದೆ. ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. ನೀರಿನ ಹರಿವು ಕಡಿಮೆಯಾಗುವವರೆಗೂ ಹೊಗೆನಕಲ್ಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ. ತಾತ್ಕಾಲಿಕ ನಿರ್ಬಂಧ ಇದ್ದು, ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೊಗೆನಕಲ್ ಆರ್ಎಫ್ಒ ಸಂಪತ್ ಪಟೇಲ್ ತಿಳಿಸಿದ್ದಾರೆ.
ಕರ್ನಾಟಕ, ತಮಿಳುನಾಡು ಎರಡೂ ರಾಜ್ಯದ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ಕೊಡುವ ಜನಪ್ರಿಯ ಜಲಪಾತ ಇದಾಗಿದ್ದು, ಕಳೆದ 4 ದಿನದಿಂದ ತಮಿಳುನಾಡು ಭಾಗದಲ್ಲಿ ಬೋಟಿಂಗ್, ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. ಜುಲೈ 20ರಿಂದ ಕರ್ನಾಟಕದ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.
ವೀಕೆಂಡ್ ಟ್ರಿಪ್ ಪ್ಲಾನ್ ಮಾಡಿಕೊಂಡವರು ಗಮನಿಸಲೇಬೇಕು: ಕರ್ನಾಟಕ-ಕೇರಳ ಗಡಿಯಲ್ಲಿ ರಸ್ತೆಗಳು ಜೋರು ಮಳೆಯಿಂದಾಗಿ ಜಲಾವೃತವಾಗಿದ್ದು, ಬತ್ತೇರಿ, ವೈನಾಡಿಗೆ ತೆರಳಲು ಹರಸಾಹಸ ಪಡಬೇಕಿದೆ.
ಬಂಡೀಪುರಕ್ಕೆ ಹೊಂದಿಕೊಂಡಿರುವ ಕೇರಳ ರಸ್ತೆಗಳು ಮಳೆಗೆ ಜಲಾವೃತವಾಗಿದ್ದು ಲಾರಿ, ಟ್ರಕ್ ಹೊರತುಪಡಿಸಿ ಬೇರೆ ವಾಹನಗಳು ಚಲಿಸಲು ಕಷ್ಟಸಾಧ್ಯದ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಒಂದು ದಿನದಿಂದ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಕೇರಳದ ಮುತ್ತಂಗ, ಸುಲ್ತಾನ್ ಬತ್ತೇರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ವೀಕೆಂಡ್ಗೆ ಕೇರಳಕ್ಕೆ ಹೋಗುವ ಪ್ಲಾನ್ ಮಾಡಿಕೊಂಡಿದ್ದವರಿಗೆ ಮಳೆರಾಯ ಶಾಕ್ ನೀಡಿದ್ದು, ಗುಂಡ್ಲುಪೇಟೆ ಕಡೆಯಿಂದ ಕೇರಳಕ್ಕೆ ಹೋಗುವವರು ಎರಡು ಬಾರಿ ಯೋಚನೆ ಮಾಡಬೇಕಿದೆ.
ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ನಿಂದ 5 ಕಿಲೋ ಮೀಟರ್ ದೂರದಲ್ಲಿರುವ ಮುತ್ತಂಗವಿದ್ದು, ಅಲ್ಲಿಂದ ತೆರಳಲು ತೀರಾ ಪ್ರಯಾಸ ಪಡಬೇಕಿದೆ. ಇನ್ನು ಈ ಕುರಿತು ಮೂಲೆಹೊಳೆ ಆರ್ಎಫ್ಒ ನರೇಶ್ ಪ್ರತಿಕ್ರಿಯಿಸಿ, ಕೇರಳ ಭಾಗದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದೆ, ನಮ್ಮ ಭಾಗದಲ್ಲಿ ತೊಂದರೆ ಇಲ್ಲಾ, ಮಳೆ ಹೆಚ್ಚಾದರೇ ಪೊಲೀಸ್ ಇಲಾಖೆ ವಾಹನಗಳಿಗೆ ನಿರ್ಬಂಧ ಹೇರಲಿದೆ ಎಂದು ತಿಳಿಸಿದರು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications